Homeಕರ್ನಾಟಕದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

- Advertisement -
- Advertisement -

ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್‌ ಸಂಖ್ಯೆ  ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅದು ಹೇಳಿದೆ.

ಆಹಾರ ಭದ್ರತೆ ಹಿನ್ನಲೆಯಲ್ಲಿ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ.

ಪಿಒಎಸ್

ದೇಶದಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಇ–ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್‌) ಸಾಧನಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ ಪಡಿತರ ವಿತರಣೆ ವೇಳೆ ಆಧಾರ ಸಂಖ್ಯೆಯನ್ನು ದೃಢೀಕರಿಸಲಾಗುತ್ತದೆ. ಅರ್ಹ ಪಡಿತರ ಚೀಟಿದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದೆ.

ಅನರ್ಹ ಪಡಿತರ ಚೀಟಿ ಗುರುತಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ: ಆಹಾರ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.

ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಅಮಾನತು, ರದ್ದು ಮತ್ತು ಎಪಿಎಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಯಾವುದೇ ಪಡಿತರ ಚೀಟಿ ರದ್ದತಿ ಇಲ್ಲ:  ಮುನಿಯಪ್ಪ

ಬೆಂಗಳೂರು: ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತದೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಅಷ್ಟೆ. ಸರ್ಕಾರ ಎಲ್ಲೂ ಹೇಳಿಲ್ಲ. ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಶೇ 50ರಷ್ಟು ಬಿಪಿಎಲ್ ಪಡಿತರ ಚೀಟಿಗಳು ಇಲ್ಲ. ಕರ್ನಾಟಕವು ಆರ್ಥಿಕವಾಗಿ ಸುಭದ್ರವಾಗಿ ಇರುವ ರಾಜ್ಯವಾಗಿದ್ದು, ತೆರಿಗೆ ಪಾವತಿಸುವುದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಹೀಗಿದ್ದರೂ ಶೇ 75 ರಿಂದ 80 ರಷ್ಟು ಬಿಪಿಎಲ್ ಚೀಟಿಗಳು ಇರಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ಈ ಸರ್ಕಾರದಲ್ಲಿ ಮಾತ್ರವಲ್ಲ; ಸುಮಾರು 10 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ಅಲ್ಲದೇ; ಬಿಜೆಪಿ ಹಾಗೂ ಮೈತ್ರಿ ಸರ್ಕಾರದಲ್ಲಿಯೂ ಚರ್ಚೆಗಳಾಗಿವೆ. ಹೀಗಾಗಿ, ಬಿಪಿಎಲ್‍ಗೆ ಅರ್ಹರಲ್ಲದವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತದೆ ಹೇಳಿದರು.

ಅರ್ಹರಿಗೆ ಬಿಪಿಎಲ್ಕಾರ್ಡ್ತಪ್ಪಿ ಹೋಗಬಾರದು

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ಗೆ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂ‌ದು ಕೆ.ಎಚ್‌.ಮುನಿಯ‌ಪ್ಪ ತಿಳಿಸಿದರು.

ಅನರ್ಹರನ್ನು ಗುರುತಿಸಿ ಬಿಪಿಎಲ್‌ನಿಂದ ಎಪಿಎಲ್‍ಗೆ ಇಡಲಾಗುತ್ತದೆಯೇ ಹೊರತು ರದ್ದು ಮಾಡಲ್ಲ. ಗುರುವಾರ ಅಂಕಿಅಂಶ ಸಮೇತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದರು.

ಕೇಂದ್ರ ಮಾನದಂಡದಂತೆ ಕಾರ್ಡ್ ಪರಿಶೀಲನೆ : ಡಿ.ಕೆ.ಶಿವಕುಮಾರ್

ಬೆಂಗಳೂರು:ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಸರಕಾರ ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.

ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

ಅರ್ಹರಿಗೆ ಮಾತ್ರ ಬಿಪಿಎಲ್‌ ಕಾರ್ಡ್: ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷದವರು ಬಿಪಿಎಲ್‌ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಸರಕಾರ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಿಪಿಎಲ್‌ ಕಾರ್ಡ್ ಗಳನ್ನು ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...