Homeಕರ್ನಾಟಕದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

- Advertisement -
- Advertisement -

ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್‌ ಸಂಖ್ಯೆ  ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅದು ಹೇಳಿದೆ.

ಆಹಾರ ಭದ್ರತೆ ಹಿನ್ನಲೆಯಲ್ಲಿ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ.

ಪಿಒಎಸ್

ದೇಶದಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಇ–ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್‌) ಸಾಧನಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ ಪಡಿತರ ವಿತರಣೆ ವೇಳೆ ಆಧಾರ ಸಂಖ್ಯೆಯನ್ನು ದೃಢೀಕರಿಸಲಾಗುತ್ತದೆ. ಅರ್ಹ ಪಡಿತರ ಚೀಟಿದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದೆ.

ಅನರ್ಹ ಪಡಿತರ ಚೀಟಿ ಗುರುತಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ: ಆಹಾರ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.

ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಅಮಾನತು, ರದ್ದು ಮತ್ತು ಎಪಿಎಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಯಾವುದೇ ಪಡಿತರ ಚೀಟಿ ರದ್ದತಿ ಇಲ್ಲ:  ಮುನಿಯಪ್ಪ

ಬೆಂಗಳೂರು: ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತದೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಅಷ್ಟೆ. ಸರ್ಕಾರ ಎಲ್ಲೂ ಹೇಳಿಲ್ಲ. ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಶೇ 50ರಷ್ಟು ಬಿಪಿಎಲ್ ಪಡಿತರ ಚೀಟಿಗಳು ಇಲ್ಲ. ಕರ್ನಾಟಕವು ಆರ್ಥಿಕವಾಗಿ ಸುಭದ್ರವಾಗಿ ಇರುವ ರಾಜ್ಯವಾಗಿದ್ದು, ತೆರಿಗೆ ಪಾವತಿಸುವುದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಹೀಗಿದ್ದರೂ ಶೇ 75 ರಿಂದ 80 ರಷ್ಟು ಬಿಪಿಎಲ್ ಚೀಟಿಗಳು ಇರಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ಈ ಸರ್ಕಾರದಲ್ಲಿ ಮಾತ್ರವಲ್ಲ; ಸುಮಾರು 10 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ಅಲ್ಲದೇ; ಬಿಜೆಪಿ ಹಾಗೂ ಮೈತ್ರಿ ಸರ್ಕಾರದಲ್ಲಿಯೂ ಚರ್ಚೆಗಳಾಗಿವೆ. ಹೀಗಾಗಿ, ಬಿಪಿಎಲ್‍ಗೆ ಅರ್ಹರಲ್ಲದವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತದೆ ಹೇಳಿದರು.

ಅರ್ಹರಿಗೆ ಬಿಪಿಎಲ್ಕಾರ್ಡ್ತಪ್ಪಿ ಹೋಗಬಾರದು

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ಗೆ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂ‌ದು ಕೆ.ಎಚ್‌.ಮುನಿಯ‌ಪ್ಪ ತಿಳಿಸಿದರು.

ಅನರ್ಹರನ್ನು ಗುರುತಿಸಿ ಬಿಪಿಎಲ್‌ನಿಂದ ಎಪಿಎಲ್‍ಗೆ ಇಡಲಾಗುತ್ತದೆಯೇ ಹೊರತು ರದ್ದು ಮಾಡಲ್ಲ. ಗುರುವಾರ ಅಂಕಿಅಂಶ ಸಮೇತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದರು.

ಕೇಂದ್ರ ಮಾನದಂಡದಂತೆ ಕಾರ್ಡ್ ಪರಿಶೀಲನೆ : ಡಿ.ಕೆ.ಶಿವಕುಮಾರ್

ಬೆಂಗಳೂರು:ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಸರಕಾರ ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.

ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

ಅರ್ಹರಿಗೆ ಮಾತ್ರ ಬಿಪಿಎಲ್‌ ಕಾರ್ಡ್: ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷದವರು ಬಿಪಿಎಲ್‌ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಸರಕಾರ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಿಪಿಎಲ್‌ ಕಾರ್ಡ್ ಗಳನ್ನು ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...