ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಖಿಂವ್ಸರ್ ಪೊಲೀಸ್ ಠಾಣೆಯ ಎಎಸ್ಐ ರಾಮಚಂದ್ರ, ಕಾನ್ಸ್ಟೆಬಲ್ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕರ್ತವ್ಯಕ್ಕಾಗಿ ಮೃತ ಅಧಿಕಾರಿಗಳು ಜುಂಜುನುನಿಂದ ನಗೌರ್ಗೆ ತೆರಳುತ್ತಿದ್ದರು. ಈ ವೇಳೆ ಪೊಲೀಸ್ ವಾಹನವು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಗಾಯಾಳುಗಳಾದ ಇಬ್ಬರು ಪೊಲೀಸರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಇಂದು ಮುಂಜಾನೆ, ಚುರುವಿನ ಸುಜನ್ಗಢ್ ಸದರ್ ಪ್ರದೇಶದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸರ ಸಾವು-ನೋವುಗಳ ಬಗ್ಗೆ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಮೃತಪಟ್ಟ ಎಲ್ಲಾ ಪೊಲೀಸರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
Rajasthan | Five police officials including an ASI died on the spot after their car rammed into a parked truck near Kanota post near Sujangarh in Churu. The ASI and three policemen were from Khinvsar police station and one constable was from Jayal police station: Sujangarh CO… pic.twitter.com/OnLsqvN5oz
— ANI MP/CG/Rajasthan (@ANI_MP_CG_RJ) November 19, 2023