Homeಕರ್ನಾಟಕಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ಮೈಸೂರು:  ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಟ ಶಿವರಾಜ್ ಕುಮಾರ್ ಅವರೊಂದಿಗೆ ಶಕ್ತಿಧಾಮದ ಬಗ್ಗೆ ಚರ್ಚೆ ಮಾಡಿದಾಗ ಸಂಸ್ಥೆಗಳಿಗೆ ಅನುದಾನ ನೀಡಬೇಕೆಂಬ ಪ್ರೇರಣೆ ದೊರೆತಿದ್ದಾಗಿ ತಿಳಿಸಿದ ಮುಖ್ಯಮಂತ್ರಿಯವರು, ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಆಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾಯಂದಿರ ಶೋಷಣೆಯನ್ನು ನಿರಂತರವಾಗಿ ಸಮಾಜ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿರುವುದು ಅತ್ಯಂತ ನೋವಿನ ಸಂಗತಿ. ನಾವೆಲ್ಲಾ ಅಂತಃಕರಣ ಕಳೆದುಕೊಂಡಾಗ ಬಹಳಷ್ಟು ಮಕ್ಕಳು ಅನಾಥರಾಗುತ್ತಾರೆ, ಶೋಷಣೆಗೆ ಒಳಗಾಗುತ್ತಾರೆ ಎಂದರು.

ಆಶ್ರಯದಾತ ಸಂಸ್ಥೆ: ತಾಯಿ ಕರುಳನ್ನು ತೋರಿದ ಪೊಲೀಸ್‌ ಅಧಿಕಾರಿ ಕೆಂಪಯ್ಯ ಸಮಾಜದಲ್ಲಿ ಶೋಷಿತ ಹೆಣ್ಣು ಮಕ್ಕಳಿಗೆ ದಾರಿ ತೋರಲು ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರಲ್ಲಿ ತಿಳಿಸಿದರು. ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಆಶ್ರಯ, ಬದುಕು ನೀಡಬೇಕು ಎಂದು ಆಶ್ರಯದಾತ ಸಂಸ್ಥೆಯಾಗಿ ಶಕ್ತಿಧಾಮವನ್ನು ಡಾ. ರಾಜ್ ಕುಮಾರ್ ಅವರ ಕುಟುಂಬದವರು ಬೆಳೆಸಿದ್ದಾರೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೂ ತಾಯಿ ಕರುಳಿತ್ತು. ಅವರು ಇದ್ದಲ್ಲಿಂದಲೇ ಸಂಸ್ಥೆಗೆ ಶಕ್ತಿ ತುಂಬುತ್ತಿದ್ದಾರೆ. ಸಮಾಜದಲ್ಲಿ ಶೋಷಿತ, ಪೀಡಿತ ದುರ್ಬಲ ವರ್ಗದವರಿಗೆ ಸಮಾಜ ಸರ್ಕಾರ ಕೈ ಹಿಡಿದು ಎತ್ತಿ ನಡೆಸಬೇಕು. ಮಾತುಗಳಲ್ಲಿ ಸಾಮಾಜಿಕ ನ್ಯಾಯ ಆಗುವುದಿಲ್ಲ. ಅವಕಾಶಗಳು ಸಿಕ್ಕಾಗ ಅವರ ಪರವಾಗಿ ಕೆಲಸ ಮಾಡಬೇಕು. ಸಮಾಜದ ನೋವುಗಳಿಗೆ ಚಿಕಿತ್ಸೆ ಕೊಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಿ, ಸಮಾಜಕ್ಕೆ ಮರಳಿ ನೀಡಿದಾಗ ಬದುಕಿನ ಬ್ಯಾಲೆನ್ಸ್ ಶೀಟ್‍ನಲ್ಲಿ ಸಮತೋಲನ ಕಾಯ್ದುಕೊಳ್ಳಬಹುದು ಎಂದರು.

ಮಕ್ಕಳ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿ, ಕ್ರಿಯಾಶೀಲರನ್ನಾಗಿಸಿ, ಹಲವಾರು ರಂಗಗಳಲ್ಲಿ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವನ್ನು ತುಂಬಿತ್ತಿದೆ. ಮಕ್ಕಳ ಭವಿಷ್ಯಕ್ಕೆ ಶಕ್ತಿಯಾಗಿದೆ. ಮಕ್ಕಳಲ್ಲಿ ದೇವರಿದ್ದಾರೆ. ಮಕ್ಕಳನ್ನು ಯಾರೂ ಅನಾಥರು ಎಂದು ಕರೆಯಬಾರದು. ಅವರು ದೇವರ ಮಕ್ಕಳು ಎಂದು ಅಭಿಪ್ರಾಯಪಟ್ಟರು.

ಕೆಂಪಯ್ಯ, ಡಾ.ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರಂಥ ತಂದೆತಾಯಿಯರನ್ನು ಪಡೆದಿರುವ ಮಕ್ಕಳೇ ಧನ್ಯರು ಎಂದರು.

ಮೈಸೂರಿನ ಕೆ.ಆರ್.ಆಸ್ಪತ್ರೆಗೆ 100 ವರ್ಷವಾಗಿರುವ ಹಿನ್ನೆಲೆಯಲ್ಲಿ 85 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ 185 ಕೋಟಿ ರೂ.ಗಳ ವೆಚ್ಚದಲ್ಲಿ ಭೂಸ್ವಾಧೀನ ಕೆಲಸವನ್ನು ಇದೇ ವರ್ಷದಲ್ಲಿ ಮಾಡಲು ಅನುದಾನ ಮೀಸಲಿರಿಸಿದೆ. ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ನಿರಂಜನ್ ಕುಮಾರ್, ನಟ ಶಿವರಾಜ್‌ಕುಮಾರ್, ಶಕ್ತಿ ಧಾಮದ ಅಧ್ಯಕ್ಷೆ ಗೀತಾ ಶಿವರಾಜ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಷಾಜಿ ಮ್ಯಾಥ್ಯೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...