Homeಕರ್ನಾಟಕಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ಮೈಸೂರು:  ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಟ ಶಿವರಾಜ್ ಕುಮಾರ್ ಅವರೊಂದಿಗೆ ಶಕ್ತಿಧಾಮದ ಬಗ್ಗೆ ಚರ್ಚೆ ಮಾಡಿದಾಗ ಸಂಸ್ಥೆಗಳಿಗೆ ಅನುದಾನ ನೀಡಬೇಕೆಂಬ ಪ್ರೇರಣೆ ದೊರೆತಿದ್ದಾಗಿ ತಿಳಿಸಿದ ಮುಖ್ಯಮಂತ್ರಿಯವರು, ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಆಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾಯಂದಿರ ಶೋಷಣೆಯನ್ನು ನಿರಂತರವಾಗಿ ಸಮಾಜ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿರುವುದು ಅತ್ಯಂತ ನೋವಿನ ಸಂಗತಿ. ನಾವೆಲ್ಲಾ ಅಂತಃಕರಣ ಕಳೆದುಕೊಂಡಾಗ ಬಹಳಷ್ಟು ಮಕ್ಕಳು ಅನಾಥರಾಗುತ್ತಾರೆ, ಶೋಷಣೆಗೆ ಒಳಗಾಗುತ್ತಾರೆ ಎಂದರು.

ಆಶ್ರಯದಾತ ಸಂಸ್ಥೆ: ತಾಯಿ ಕರುಳನ್ನು ತೋರಿದ ಪೊಲೀಸ್‌ ಅಧಿಕಾರಿ ಕೆಂಪಯ್ಯ ಸಮಾಜದಲ್ಲಿ ಶೋಷಿತ ಹೆಣ್ಣು ಮಕ್ಕಳಿಗೆ ದಾರಿ ತೋರಲು ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರಲ್ಲಿ ತಿಳಿಸಿದರು. ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಆಶ್ರಯ, ಬದುಕು ನೀಡಬೇಕು ಎಂದು ಆಶ್ರಯದಾತ ಸಂಸ್ಥೆಯಾಗಿ ಶಕ್ತಿಧಾಮವನ್ನು ಡಾ. ರಾಜ್ ಕುಮಾರ್ ಅವರ ಕುಟುಂಬದವರು ಬೆಳೆಸಿದ್ದಾರೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೂ ತಾಯಿ ಕರುಳಿತ್ತು. ಅವರು ಇದ್ದಲ್ಲಿಂದಲೇ ಸಂಸ್ಥೆಗೆ ಶಕ್ತಿ ತುಂಬುತ್ತಿದ್ದಾರೆ. ಸಮಾಜದಲ್ಲಿ ಶೋಷಿತ, ಪೀಡಿತ ದುರ್ಬಲ ವರ್ಗದವರಿಗೆ ಸಮಾಜ ಸರ್ಕಾರ ಕೈ ಹಿಡಿದು ಎತ್ತಿ ನಡೆಸಬೇಕು. ಮಾತುಗಳಲ್ಲಿ ಸಾಮಾಜಿಕ ನ್ಯಾಯ ಆಗುವುದಿಲ್ಲ. ಅವಕಾಶಗಳು ಸಿಕ್ಕಾಗ ಅವರ ಪರವಾಗಿ ಕೆಲಸ ಮಾಡಬೇಕು. ಸಮಾಜದ ನೋವುಗಳಿಗೆ ಚಿಕಿತ್ಸೆ ಕೊಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಿ, ಸಮಾಜಕ್ಕೆ ಮರಳಿ ನೀಡಿದಾಗ ಬದುಕಿನ ಬ್ಯಾಲೆನ್ಸ್ ಶೀಟ್‍ನಲ್ಲಿ ಸಮತೋಲನ ಕಾಯ್ದುಕೊಳ್ಳಬಹುದು ಎಂದರು.

ಮಕ್ಕಳ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿ, ಕ್ರಿಯಾಶೀಲರನ್ನಾಗಿಸಿ, ಹಲವಾರು ರಂಗಗಳಲ್ಲಿ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವನ್ನು ತುಂಬಿತ್ತಿದೆ. ಮಕ್ಕಳ ಭವಿಷ್ಯಕ್ಕೆ ಶಕ್ತಿಯಾಗಿದೆ. ಮಕ್ಕಳಲ್ಲಿ ದೇವರಿದ್ದಾರೆ. ಮಕ್ಕಳನ್ನು ಯಾರೂ ಅನಾಥರು ಎಂದು ಕರೆಯಬಾರದು. ಅವರು ದೇವರ ಮಕ್ಕಳು ಎಂದು ಅಭಿಪ್ರಾಯಪಟ್ಟರು.

ಕೆಂಪಯ್ಯ, ಡಾ.ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರಂಥ ತಂದೆತಾಯಿಯರನ್ನು ಪಡೆದಿರುವ ಮಕ್ಕಳೇ ಧನ್ಯರು ಎಂದರು.

ಮೈಸೂರಿನ ಕೆ.ಆರ್.ಆಸ್ಪತ್ರೆಗೆ 100 ವರ್ಷವಾಗಿರುವ ಹಿನ್ನೆಲೆಯಲ್ಲಿ 85 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ 185 ಕೋಟಿ ರೂ.ಗಳ ವೆಚ್ಚದಲ್ಲಿ ಭೂಸ್ವಾಧೀನ ಕೆಲಸವನ್ನು ಇದೇ ವರ್ಷದಲ್ಲಿ ಮಾಡಲು ಅನುದಾನ ಮೀಸಲಿರಿಸಿದೆ. ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ನಿರಂಜನ್ ಕುಮಾರ್, ನಟ ಶಿವರಾಜ್‌ಕುಮಾರ್, ಶಕ್ತಿ ಧಾಮದ ಅಧ್ಯಕ್ಷೆ ಗೀತಾ ಶಿವರಾಜ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಷಾಜಿ ಮ್ಯಾಥ್ಯೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...