Homeಮುಖಪುಟದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ,...

ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

- Advertisement -
- Advertisement -

ಹದಿನೆಂಟು ವರ್ಷದ ದಲಿತ ಯುವತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶಾಸಕರ ಪುತ್ರ ಮತ್ತು ಸೊಸೆಯ ವಿರುದ್ಧ ಚೆನ್ನೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ ಐದು ದಿನಗಳು ಕಳೆದರೂ, ಆರೋಪಿಗಳ ಬಂಧನವಾಗಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಾದ ಆಂಟೊ ಮತ್ತು ಮೆರ್ಲಿನಾ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

“ನಾವು ಶಾಸಕ ಕರುಣಾನಿಧಿಗೆ ಕರೆ ಮಾಡಿ ವಿಚಾರಿಸಿದಾಗ ಅವರು, ನನ್ನ ಮಗ ಸೊಸೆ ಮದುವೆಯಾಗಿ ಏಳು ವರ್ಷ ಕಳೆದಿದೆ. ಈಗ ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ. ದಲಿತ ಯುವತಿಯ ಮೇಲೆ ಹಲ್ಲೆ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲವೆಂದು ಹೇಳಿದ್ದಾಗಿ” ನ್ಯೂಸ್‌ ಮಿನಿಟ್ ತಿಳಿಸಿದೆ.

ಆರೋಪಿಗಳ ಫೋನ್ ನಂಬರ್ ಬಳಸಿಕೊಂಡು ಅವರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇನ್ನೂ ಬಂಧಿಸಿಲ್ಲ. ಶೋಧ ಕಾರ್ಯ ನಡೆಯುತ್ತಿದೆ ಎಂದು ಚೆನ್ನೈನ ತಿರುವನ್ಮಿಯೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಹನ್ನೆರಡನೇ ತರಗತಿ ಓದಿರುವ ಅನು (ಹೆಸರು ಬದಲಾಯಿಸಲಾಗಿದೆ) ಎಂಬ ದಲಿತ ಹುಡುಗಿಯನ್ನು ಶಾಕರ ಮಗ ಆಂಟೊ ಮತ್ತು ಆತನ ಪತ್ನಿ ಮೆರ್ಲಿನಾ 2023ರಲ್ಲಿ ತಮ್ಮ ಮನೆ ಕೆಲಸಗಾರ್ತಿಯಾಗಿ ನೇಮಿಸಿಕೊಂಡಿದ್ದರು. ಯುವತಿ ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿರುವ ಪರಯ್ಯರ್ ಸಮುದಾಯಕ್ಕೆ ಸೇರಿದವಳು. “ತಾನು ಮೆರ್ಲಿನಾ ಮತ್ತು ಆಂಟೊ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮೆರ್ಲಿನಾ ನನಗೆ ಥಳಿಸುತ್ತಿದ್ದರು. ಸಿಗರೇಟ್ ತುಂಡುಗಳಿಂದ ಚರ್ಮವನ್ನು ಸುಡುತ್ತಿದ್ದರು. ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದರು” ಎಂದು ಯುವತಿ ಆರೋಪಿಸಿದ್ದಾಳೆ.

ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಅನು ಆರೋಪಿಸಿದ್ದಾರೆ. ದಂಪತಿ ತನ್ನನ್ನು ಡಾಕ್ಯುಮೆಂಟ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಅದರ, ಪ್ರಕಾರ ನಾನು ಅವರಿಗೆ 2 ಲಕ್ಷ ರೂ. ಕೊಡಲು ಬಾಕಿ ಇದೆ. ಅದಕ್ಕಾಗಿ ನಾನು ಇನ್ನೂ ಮೂರು ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿಕೊಂಡಿದ್ದಳು.

ಪೊಂಗಲ್ ಹಬ್ಬಕ್ಕೆ ಉಲುಂದೂರುಪೇಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದ ವೇಳೆ ಅನು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಳು. ಆ ಸಮಯದಲ್ಲಿ ಆಕೆಯ ತಾಯಿ ಆಕೆಯ ದೇಹದ ಮೇಲೆ ಗಾಯಗಳನ್ನು ಗಮನಿಸಿದ್ದರು. ಅನು ಚಿಕಿತ್ಸೆ ಪಡೆದ ಉಲುಂದೂರುಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಕೆಯ ಮೇಲೆ ದೊಣ್ಣೆ, ಹೇರ್ ಸ್ಟ್ರೈಟ್ನರ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು. ಆಕೆಯ ಕಣ್ಣು, ಹಣೆ ಮತ್ತು ಗಲ್ಲದ ಮೇಲೆ ಗಾಯದ ಗುರುತಿತ್ತು ಮತ್ತು ಎರಡೂ ಮುಂದೋಳಿನ ಮೇಲೆ ಸುಟ್ಟ ಗಾಯಗಳು ಕಂಡು ಬಂದಿತ್ತು.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಉಲುಂದೂರ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.

ತಿರುವನ್ಮಿಯೂರ್ ಪೊಲೀಸರು ಜನವರಿ 18 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) (ಅಶ್ಲೀಲ ಕೃತ್ಯಗಳು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 325 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ ಶಿಕ್ಷೆ), 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) (ಅಪರಾಧ ದೌರ್ಜನ್ಯಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...