Homeಮುಖಪುಟದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ,...

ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

- Advertisement -
- Advertisement -

ಹದಿನೆಂಟು ವರ್ಷದ ದಲಿತ ಯುವತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶಾಸಕರ ಪುತ್ರ ಮತ್ತು ಸೊಸೆಯ ವಿರುದ್ಧ ಚೆನ್ನೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ ಐದು ದಿನಗಳು ಕಳೆದರೂ, ಆರೋಪಿಗಳ ಬಂಧನವಾಗಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಾದ ಆಂಟೊ ಮತ್ತು ಮೆರ್ಲಿನಾ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

“ನಾವು ಶಾಸಕ ಕರುಣಾನಿಧಿಗೆ ಕರೆ ಮಾಡಿ ವಿಚಾರಿಸಿದಾಗ ಅವರು, ನನ್ನ ಮಗ ಸೊಸೆ ಮದುವೆಯಾಗಿ ಏಳು ವರ್ಷ ಕಳೆದಿದೆ. ಈಗ ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ. ದಲಿತ ಯುವತಿಯ ಮೇಲೆ ಹಲ್ಲೆ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲವೆಂದು ಹೇಳಿದ್ದಾಗಿ” ನ್ಯೂಸ್‌ ಮಿನಿಟ್ ತಿಳಿಸಿದೆ.

ಆರೋಪಿಗಳ ಫೋನ್ ನಂಬರ್ ಬಳಸಿಕೊಂಡು ಅವರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇನ್ನೂ ಬಂಧಿಸಿಲ್ಲ. ಶೋಧ ಕಾರ್ಯ ನಡೆಯುತ್ತಿದೆ ಎಂದು ಚೆನ್ನೈನ ತಿರುವನ್ಮಿಯೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಹನ್ನೆರಡನೇ ತರಗತಿ ಓದಿರುವ ಅನು (ಹೆಸರು ಬದಲಾಯಿಸಲಾಗಿದೆ) ಎಂಬ ದಲಿತ ಹುಡುಗಿಯನ್ನು ಶಾಕರ ಮಗ ಆಂಟೊ ಮತ್ತು ಆತನ ಪತ್ನಿ ಮೆರ್ಲಿನಾ 2023ರಲ್ಲಿ ತಮ್ಮ ಮನೆ ಕೆಲಸಗಾರ್ತಿಯಾಗಿ ನೇಮಿಸಿಕೊಂಡಿದ್ದರು. ಯುವತಿ ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿರುವ ಪರಯ್ಯರ್ ಸಮುದಾಯಕ್ಕೆ ಸೇರಿದವಳು. “ತಾನು ಮೆರ್ಲಿನಾ ಮತ್ತು ಆಂಟೊ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮೆರ್ಲಿನಾ ನನಗೆ ಥಳಿಸುತ್ತಿದ್ದರು. ಸಿಗರೇಟ್ ತುಂಡುಗಳಿಂದ ಚರ್ಮವನ್ನು ಸುಡುತ್ತಿದ್ದರು. ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದರು” ಎಂದು ಯುವತಿ ಆರೋಪಿಸಿದ್ದಾಳೆ.

ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಅನು ಆರೋಪಿಸಿದ್ದಾರೆ. ದಂಪತಿ ತನ್ನನ್ನು ಡಾಕ್ಯುಮೆಂಟ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಅದರ, ಪ್ರಕಾರ ನಾನು ಅವರಿಗೆ 2 ಲಕ್ಷ ರೂ. ಕೊಡಲು ಬಾಕಿ ಇದೆ. ಅದಕ್ಕಾಗಿ ನಾನು ಇನ್ನೂ ಮೂರು ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿಕೊಂಡಿದ್ದಳು.

ಪೊಂಗಲ್ ಹಬ್ಬಕ್ಕೆ ಉಲುಂದೂರುಪೇಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದ ವೇಳೆ ಅನು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಳು. ಆ ಸಮಯದಲ್ಲಿ ಆಕೆಯ ತಾಯಿ ಆಕೆಯ ದೇಹದ ಮೇಲೆ ಗಾಯಗಳನ್ನು ಗಮನಿಸಿದ್ದರು. ಅನು ಚಿಕಿತ್ಸೆ ಪಡೆದ ಉಲುಂದೂರುಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಕೆಯ ಮೇಲೆ ದೊಣ್ಣೆ, ಹೇರ್ ಸ್ಟ್ರೈಟ್ನರ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು. ಆಕೆಯ ಕಣ್ಣು, ಹಣೆ ಮತ್ತು ಗಲ್ಲದ ಮೇಲೆ ಗಾಯದ ಗುರುತಿತ್ತು ಮತ್ತು ಎರಡೂ ಮುಂದೋಳಿನ ಮೇಲೆ ಸುಟ್ಟ ಗಾಯಗಳು ಕಂಡು ಬಂದಿತ್ತು.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಉಲುಂದೂರ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.

ತಿರುವನ್ಮಿಯೂರ್ ಪೊಲೀಸರು ಜನವರಿ 18 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) (ಅಶ್ಲೀಲ ಕೃತ್ಯಗಳು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 325 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ ಶಿಕ್ಷೆ), 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) (ಅಪರಾಧ ದೌರ್ಜನ್ಯಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...