Homeಮುಖಪುಟದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ,...

ದಲಿತ ಯುವತಿಗೆ ಕಿರುಕುಳ: ಎಫ್‌ಐಆರ್‌ ದಾಖಲಾಗಿ 5 ದಿನ ಕಳೆದರೂ ಅರೆಸ್ಟ್‌ ಆಗದ ಶಾಸಕರ ಮಗ, ಸೊಸೆ

- Advertisement -
- Advertisement -

ಹದಿನೆಂಟು ವರ್ಷದ ದಲಿತ ಯುವತಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶಾಸಕರ ಪುತ್ರ ಮತ್ತು ಸೊಸೆಯ ವಿರುದ್ಧ ಚೆನ್ನೈ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿ ಐದು ದಿನಗಳು ಕಳೆದರೂ, ಆರೋಪಿಗಳ ಬಂಧನವಾಗಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಾದ ಆಂಟೊ ಮತ್ತು ಮೆರ್ಲಿನಾ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

“ನಾವು ಶಾಸಕ ಕರುಣಾನಿಧಿಗೆ ಕರೆ ಮಾಡಿ ವಿಚಾರಿಸಿದಾಗ ಅವರು, ನನ್ನ ಮಗ ಸೊಸೆ ಮದುವೆಯಾಗಿ ಏಳು ವರ್ಷ ಕಳೆದಿದೆ. ಈಗ ಅವರು ಎಲ್ಲಿದ್ದಾರೋ ನನಗೆ ಗೊತ್ತಿಲ್ಲ. ದಲಿತ ಯುವತಿಯ ಮೇಲೆ ಹಲ್ಲೆ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲವೆಂದು ಹೇಳಿದ್ದಾಗಿ” ನ್ಯೂಸ್‌ ಮಿನಿಟ್ ತಿಳಿಸಿದೆ.

ಆರೋಪಿಗಳ ಫೋನ್ ನಂಬರ್ ಬಳಸಿಕೊಂಡು ಅವರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇನ್ನೂ ಬಂಧಿಸಿಲ್ಲ. ಶೋಧ ಕಾರ್ಯ ನಡೆಯುತ್ತಿದೆ ಎಂದು ಚೆನ್ನೈನ ತಿರುವನ್ಮಿಯೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಹನ್ನೆರಡನೇ ತರಗತಿ ಓದಿರುವ ಅನು (ಹೆಸರು ಬದಲಾಯಿಸಲಾಗಿದೆ) ಎಂಬ ದಲಿತ ಹುಡುಗಿಯನ್ನು ಶಾಕರ ಮಗ ಆಂಟೊ ಮತ್ತು ಆತನ ಪತ್ನಿ ಮೆರ್ಲಿನಾ 2023ರಲ್ಲಿ ತಮ್ಮ ಮನೆ ಕೆಲಸಗಾರ್ತಿಯಾಗಿ ನೇಮಿಸಿಕೊಂಡಿದ್ದರು. ಯುವತಿ ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿರುವ ಪರಯ್ಯರ್ ಸಮುದಾಯಕ್ಕೆ ಸೇರಿದವಳು. “ತಾನು ಮೆರ್ಲಿನಾ ಮತ್ತು ಆಂಟೊ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಮೆರ್ಲಿನಾ ನನಗೆ ಥಳಿಸುತ್ತಿದ್ದರು. ಸಿಗರೇಟ್ ತುಂಡುಗಳಿಂದ ಚರ್ಮವನ್ನು ಸುಡುತ್ತಿದ್ದರು. ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದರು” ಎಂದು ಯುವತಿ ಆರೋಪಿಸಿದ್ದಾಳೆ.

ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಅನು ಆರೋಪಿಸಿದ್ದಾರೆ. ದಂಪತಿ ತನ್ನನ್ನು ಡಾಕ್ಯುಮೆಂಟ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದ್ದರು. ಅದರ, ಪ್ರಕಾರ ನಾನು ಅವರಿಗೆ 2 ಲಕ್ಷ ರೂ. ಕೊಡಲು ಬಾಕಿ ಇದೆ. ಅದಕ್ಕಾಗಿ ನಾನು ಇನ್ನೂ ಮೂರು ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿಕೊಂಡಿದ್ದಳು.

ಪೊಂಗಲ್ ಹಬ್ಬಕ್ಕೆ ಉಲುಂದೂರುಪೇಟೆಯಲ್ಲಿರುವ ತನ್ನ ಮನೆಗೆ ತೆರಳಿದ್ದ ವೇಳೆ ಅನು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಳು. ಆ ಸಮಯದಲ್ಲಿ ಆಕೆಯ ತಾಯಿ ಆಕೆಯ ದೇಹದ ಮೇಲೆ ಗಾಯಗಳನ್ನು ಗಮನಿಸಿದ್ದರು. ಅನು ಚಿಕಿತ್ಸೆ ಪಡೆದ ಉಲುಂದೂರುಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು, ಆಕೆಯ ಮೇಲೆ ದೊಣ್ಣೆ, ಹೇರ್ ಸ್ಟ್ರೈಟ್ನರ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿಸಿದ್ದರು. ಆಕೆಯ ಕಣ್ಣು, ಹಣೆ ಮತ್ತು ಗಲ್ಲದ ಮೇಲೆ ಗಾಯದ ಗುರುತಿತ್ತು ಮತ್ತು ಎರಡೂ ಮುಂದೋಳಿನ ಮೇಲೆ ಸುಟ್ಟ ಗಾಯಗಳು ಕಂಡು ಬಂದಿತ್ತು.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಉಲುಂದೂರ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.

ತಿರುವನ್ಮಿಯೂರ್ ಪೊಲೀಸರು ಜನವರಿ 18 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಬಿ) (ಅಶ್ಲೀಲ ಕೃತ್ಯಗಳು), 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 325 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ ಶಿಕ್ಷೆ), 506(1) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಸೆಕ್ಷನ್ 3(1)(ಆರ್) ಮತ್ತು 3(1)(ಗಳು) (ಅಪರಾಧ ದೌರ್ಜನ್ಯಗಳಿಗೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾ ಆಸ್ತಿ ಹರಾಜು ಬೇಡ: ಬೆಂಗಳೂರು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...