Homeಚಳವಳಿಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಪತ್ರಕರ್ತರ ಬಂಧನ: ಯೋಗಿಯ ಉತ್ತರಪ್ರದೇಶ ಸರ್ಕಾರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಒಂದೇ ವಾರದಲ್ಲಿ ಉತ್ತರ ಪ್ರದೇಶದಲ್ಲಿ 5 ಜನ ಅಮಾಯಕರನ್ನು ನಿಯಮಬಾಹಿರಬಾಗಿ ಬಂಧಿಸಲಾಗಿದೆ. ಇದಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು ತಕ್ಷಣ ಬಿಡುಗಡೆಗೆ ಆದೇಶಿಸಿದೆ.

- Advertisement -
- Advertisement -

| ಡಾ. ಸ್ವಾತಿ ಶುಕ್ಲ |

ಒಬ್ಬ ಮಹಿಳೆಯು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮದುವೆಯ ಪ್ರಸ್ತಾಪದ ವಿಡಿಯೋ ಹೊರಬಿದ್ದ ನಂತರ ಯುಪಿಯ ಪೊಲೀಸ್ ಬಂಧನದ ಸರಣಿ ಪ್ರಾರಂಭಿಸಿದೆ. ಈ ವರದಿ ಬರೆಯುವ ಸಮಯಕ್ಕೆ 5 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಯುಪಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಆಕ್ಷೇಪಾರ್ಹ ವರದಿಗಳನ್ನು ಹಂಚಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ. ಬಂಧಿತ ಐವರಲ್ಲಿ ಮೂವರು ಪತ್ರಕರ್ತರು, ಒಬ್ಬ ರೈತ ಮತ್ತು ಒಬ್ಬ ಗ್ರಾಮ ಮುಖ್ಯಸ್ಥ. ಈ ಕ್ರಮಗಳಿಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು ತಕ್ಷಣ ಬಿಡುಗಡೆಗೆ ಆದೇಶಿಸಿದೆ.

ಘಟನಾಕ್ರಮ

ಮುಫ್ತಿಯಲ್ಲಿ ಬಂದು ಯುಪಿ ಪೊಲೀಸರು ಕಳೆದ ಶನಿವಾರದಂದು ಪ್ರಶಾಂತ್ ಕನೋಜಿಯಾ ಅವರನ್ನು ಅವರ ಮನೆಯಿಂದ ಬಂಧಿಸಿದರು. ಬಂಧನದ ನಂತರ ಪ್ರಶಾಂತ್ ಅವರ ಹೆಂಡತಿಗೆ ತನ್ನ ಗಂಡನನ್ನು ಉತ್ತರಪ್ರದೇಶಕ್ಕೆ ಕರೆದೊಯ್ಯಲಾಗಿದೆ ಹಾಗು ಅಲ್ಲಿ ಅವರನ್ನು ಬಂಧಿಸಲಾಗಿದೆ ಎನ್ನುವ ಸುದ್ದಿ ಬಂತು. ಪ್ರಶಾಂತ್ ಅವರ ಅಪರಾಧ – ಒಬ್ಬ ಮಹಿಳೆಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮದುವೆಯ ಪ್ರಸ್ತಾಪವನ್ನಿಡುವ ವಿಡಿಯೋ ಅನ್ನು ತಮ್ಮ ಟ್ವಿಟರ್ ಖಾತೆಯಿಂದ ಹಂಚಿದ್ದು. ಲಖನೌನ ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಅಲ್ಲಿಯ ಅಧಿಕಾರಿಯು ಎಫ್ ಐ ಆರ್ ದಾಖಲಿಸಿದ್ದಾರೆ.

ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿದೆ. ಅದರಲ್ಲಿ ಒಬ್ಬ ಮಹಿಳೆ ಹಲವಾರು ಸುದ್ದಿ ವಾಹಿನಿಗಳ ವರದಿಗಾರರೊಂದಿಗೆ ಮಾತನಾಡುತ್ತ, ತಾನು ಮುಖ್ಯಮಂತ್ರಿಯೊಂದಿಗೆ ವಿಡಿಯೋ ಚಾಟ್ ಮೂಲಕ ಮಾತನಾಡುತ್ತಿದ್ದಳೆಂದು ಹೇಳಿಕೊಂಡಿದ್ದಾಳೆ ಹಾಗೂ ಈಗ ಮುಖ್ಯಮಂತ್ರಿ ತನ್ನೊಂದಿಗೆ ವಿವಾಹ ಮಾಡಿಕೊಳ್ಳುವರೇ ಎಂದು ಕೇಳಿದ್ದಾಳೆ.
ಇದಾದ ನಂತರ ನೇಷನ್ ಲೈವ್ ಸುದ್ದಿ ವಾಹಿನಿಯ ಮುಖ್ಯಸ್ಥ ಹಾಗೂ ಸಂಪಾದಕ ಇಶಿಕಾ ಸಿಂಗ್ ಮತ್ತು ಅನುಜ್ ಶುಕ್ಲಾ ಅವರನ್ನೂ ಬಂಧಿಸಲಾಗಿದೆ. ಆ ವಾಹಿನಿಯಲ್ಲಿ ಮೇಲೆ ಹೇಳಲಾದ ವಿಡಿಯೋ ಅನ್ನು ಬಿತ್ತರಿಸಿ ಅದರ ಬಗ್ಗೆ ಚರ್ಚೆ ಮಾಡಲಾಗಿತ್ತು.

ಈ ಬಂಧನಗಳನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ಮತ್ತು ಐಟಿ ಅ್ಯಕ್ಟ್‍ನ ಸೆಕ್ಷನ್ 66 ರ ಅಡಿಯಲ್ಲಿ ಮಾಡಲಾಗಿದೆ. ಸೆಕ್ಷನ್ 500 ಮಾನಹಾನಿಗೆ ಸಂಬಂಧಿಸಿದೆ. ಇವು, ನಾನ್ ಕಾಗ್ನಿಸೆಬಲ್ ಅಪರಾಧಗಳಿವೆಯಾದುದರಿಂದ ಖುದ್ದು ಫಿರ್ಯಾದಿಯೇ ಪ್ರಕರಣ ದಾಖಲಿಸಬೇಕು. ಪೊಲೀಸ್ ತಾನೇ ಖುದ್ದಾಗಿ ಎಫ್‍ಐರ್ ದಾಖಲಿಸಿ ಕ್ರಮ ಕೈಗೊಳ್ಳುವಂತಿಲ್ಲ. ಇಂತಹ ಪ್ರಕರಣಗಳಲ್ಲಿ ವಾರಂಟ್ ಇಲ್ಲದೇ ಕನೋಜಿಯ ಅವರನ್ನು ಬಂಧಿಸುವಂತಿಲ್ಲ. 66ರ ಐಟ್ ಸೆಕ್ಷನ್ ಒಂದು ಕಂಪ್ಯೂಟರ್ ಸಿಸ್ಟಮ್ ಅನ್ನು ಅಪ್ರಾಮಾಣಿಕವಾಗಿ ಹಾನಿಗೊಳಿಸುವುದಕ್ಕೆ ಸಂಬಂಧಿಸಿದೆ. ಈ ಬಂಧನಗಳಲ್ಲಿ ಕಂಡುಬಂದಂತೆ, ದಂಡಸಂಹಿತೆಯ ಯಾವ ಸೆಕ್ಷನ್‍ಗಳೂ ಈ ಬಂಧನಗಳಿಗೆ ಅನ್ವಯವಾಗುವುದಿಲ್ಲ.

ಈ ಬಂಧನಗಳನ್ನು ಸಮರ್ಥಿಸಿಕೊಳ್ಳುತ್ತ ಯುಪಿ ಪೊಲೀಸರು ಭಾರತೀಯ ದಂಡ ಸಂಹಿತೆ 505 (ಸಾರ್ವಜನಿಕ ಸುವ್ಯವಸ್ಥೆಯನ್ನು ಕೆಡಿಸುವುದಕ್ಕೆ ಸಂಬಂಧಿಸಿದ್ದು) ಹಾಗೂ ಐಟಿ ಆ್ಯಕ್ಟ್‍ನ 67 ಸೆಕ್ಷನ್ (ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸುವುದು) ಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಒಂದು ಸಲ ಆ ವಿಡಿಯೊ ಅನ್ನು ನೋಡಿದರೆ ಸಾರ್ವಜನಿಕ ಸುವ್ಯವಸ್ಥೆಯನ್ನು ಕೆಡಿಸುವುದಾಗಲಿ ಅಥವಾ ಅಶ್ಲೀಲತೆಯಾಗಲಿ ಕಂಡುಬರುವುದಿಲ್ಲ.

ಟ್ವಿಟರ್‍ನಲ್ಲಿ ನೆಟ್ಟಿಗರು ಪ್ರಶಾಂತ್ ಕನೋಜಿಯಾ ಅವರನ್ನು ಬಿಡುಗಡೆ ಮಾಡುವಂತೆ ಅಭಿಯಾನ ಪ್ರಾರಂಭಿಸಿದ್ದಾರೆ. ಭಾರತದ ಸಂಪಾದಕರ ಗಿಲ್ಡ್ ಈ ಬಂಧನಗಳನ್ನು ಖಂಡಿಸಿದೆ.

ಕನೋಜಿಯಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅವರ ಕುಟುಂದ ಸದಸ್ಯರು ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಮ್ ಕೋರ್ಟಿ ಮೊರೆ ಹೊಕ್ಕಿದ್ದಾರೆ. ಅದೇ ಸಮಯದಲ್ಲಿ ಹಲವಾರು ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ಪತ್ರಕರ್ತರ ಮೇಲೆ ಕೈಗೊಳ್ಳುತ್ತಿರುವ ಈ ಹತೋಟಿ ಕ್ರಮಗಳನ್ನು ಖಂಡಿಸಿ ಭಾರತೀಯ ಪ್ರೆಸ್ ಕ್ಲಬ್ ಎದುರುಗಡೆ ಪ್ರತಿಭಟನೆ ಮಾಡಿದ್ದಾರೆ. ವಿಚಿತ್ರವೇನೆಂದರೆ ಮುಖ್ಯವಾಹಿನಿಯ ಯಾವ ಮೀಡಿಯಾ ಹೌಸ್ ಗಳು ಈ ಪ್ರತಿಭಟನೆಯನ್ನು ವರದಿ ಮಾಡಿಲ್ಲ. ಕೊನೆಗೆ India Resists ಫೇಸ್ ಬುಕ್ ಲೈವ್ ಮೂಲಕ ಮಾತ್ರ ದೇಶದ ಜನರನ್ನು ತಲುಪಿದೆ.

ಪ್ರತಿಭಟನೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈ ಬಂಧನಗಳು ಪತ್ರಕರ್ತರಿಗೆ ಮಾತ್ರ ಸೀಮಿತವಾಗದೇ, ಗೋಲಾ ಗ್ರಾಮದ ನಿವಾಸಿ ಪೀರ್ ಮೊಹಮ್ಮದ್ ಹಾಗೂ ಆ ಗ್ರಾಮದ ಮುಖ್ಯಸ್ಥ ಅಖ್ಲಾಕ್ ಅಹ್ಮದ್ ಅವರನ್ನು ಯೋಗಿ ಆದಿತ್ಯನಾಥ್ ಅವರ ವಿವಾಹದ ಅಣಕು ಆಮಂತ್ರಣ ಪತ್ರಿಕೆಯನ್ನು ಫೇಸ್‍ಬುಕ್‍ನಲ್ಲಿ ಹಂಚಿದ್ದಕ್ಕೆ ಅವರನ್ನೂ ಬಂಧಿಸಲಾಗಿದೆ. ಈ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆ ಫೇಸ್‍ಬುಕ್ ಪೋಸ್ಟ್‍ನಲ್ಲಿ ಧರ್ಮೇಂದ್ರ ಭಾರತಿ ಅವರನ್ನು ಟ್ಯಾಗ್ ಮಾಡಲಾಗಿತ್ತು ಎನ್ನುವ ಕಾರಣಕ್ಕೇ ಅವರನ್ನೂ ಬಂಧಿಸಲಾಗಿದೆ.

ಪೊಲೀಸ್ ಸರಕಾರದ ಪ್ರತಿಷ್ಠಾಪನೆ
ಯೋಗಿ ಆದಿತ್ಯನಾಥ ಅವರು ಅಧಿಕಾರಕ್ಕೆ ಬಂದಾಗಿನಿಂದ ಪೊಲೀಸರಿಗೆ ಅಭಯ ಹಸ್ತ ನೀಡಿ ಒಂದು ಪೊಲೀಸ್ ಸರಕಾರವನ್ನು ರಚಿಸುವಲ್ಲಿ ಯುಪಿಯ ಆಡಳಿತ ಸಕ್ರಿಯವಾಗಿದೆ. ಯೋಗಿ ಸರಕಾರದ ಮೊದಲ ಹತ್ತು ತಿಂಗಳುಗಳು ಅ್ಯಂಟಿ ರೋಮಿಯೋ ಸ್ಕ್ವಾಡ್(ಪಡೆಗಳು), ಎನ್‍ಕೌಂಟರ್‍ಗಳು ಮತ್ತು ಗೋರಖಪುರದ ಹಸುಳೆಗಳ ಸಾವಿಗೆ ಕುಖ್ಯಾತಿ ಗಳಿಸಿತ್ತು. ಮಹಿಳೆಯರನ್ನು ಚುಡಾಯಿಸುವುರಿಂದ ಸುರಕ್ಷತೆ ನೀಡುವ ಹೆಸರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತ್ತ ನೈತಿಕ ಪೊಲೀಸ್‍ಗಿರಿಯನ್ನು ಈ ಪಡೆಗಳು ಮಾಡಿದವು. ಹೆಚ್ಚುತ್ತಿರುವ ಅಪರಾಧಕ್ಕೆ ಕಡಿವಾಣ ಹಾಕಲು ಪೊಲೀಸರಿಗೆ ಎನ್‍ಕೌಂಟರ್ ಮಾಡಲು ಅಭಯ ಹಸ್ತವನ್ನು ನೀಡಿ ಎನ್‍ಕೌಂಟರ್ ಸರಕಾರ ಎನ್ನುವ ಹೆಸರನ್ನು ಗಳಿಸಿತು.

2019ರ ವರೆಗೆ 3000 ಎನ್‍ಕೌಂಟರ್‍ಗಳನ್ನು ಮಾಡಿದ್ದನ್ನು ಸಾಧನೆಯೆಂಬಂತೆ ಬಿಂಬಿಸಲಾಗುತ್ತಿದೆ. ಮಾನವ ಹಕ್ಕು ಸಂಘಟನೆಗಳು ಈ ನಕಲಿ ಎನ್‍ಕೌಂಟರ್‍ಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ.

ನಕಲಿ ಎನ್ ಕೌಂಟರ್ ಗಳ ಹೆಚ್ಚಿ ಮಾಹಿತಿಗೆ ವೈರ್ ಲೇಖನ ಇಲ್ಲಿ ಓದಿ

ನ್ಯೂಸ್ ಕ್ಲಿಕ್ ಲೇಖನ ಓದಿ

ಈ ಬಂಧನಗಳು, ಡಾ. ಕಫೀಲ್ ಖಾನ್ ಅವರನ್ನು ಅಮಾನತ್ತು ಗೊಳಿಸಿ ಅವರಿಗೆ ಕಿರುಕುಳ ಕೊಟ್ಟಿದ್ದು, ಸರಕಾರಿ ಆಸ್ಪತ್ರೆಯಲ್ಲಿ ಆದ ಸಾವುಗಳಿಗೆ ಅವರ ಮೇಲೇ ಆಪಾದನೆ ಮಾಡಿದ್ದು, ಇವೆಲ್ಲವುಗಳು ಸಮಾಜಕ್ಕೆ ಇರುವ ತನ್ನ ಜವಾಬ್ದಾರಿಗಳಿಂದ ಯುಪಿಯ ಸರಕಾರ ಹೇಗೆ ಜಾರಿಕೊಂಡಿದೆ ಎನ್ನುವುದನ್ನು ತೋರಿಸುತ್ತವೆ.

2019ರ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನಿಂದ ಯೋಗಿ ಆಡಳಿತಕ್ಕೆ ಇನ್ನಷ್ಟು ಕಸುವು ಬಂದಂತಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ ಸರಕಾರದ ಸಂಪೂರ್ಣ ಅಧಿಕಾರ ಬರಿ ಒಬ್ಬ ವ್ಯಕ್ತಿ ಯೋಗಿ ಆದಿತ್ಯನಾಥ ಅವರ ಕೈಯಲ್ಲಿದೆ. ಇಷ್ಟು ವರ್ಷ ಕಾಳಜಿಯಿಂದ ಸೃಷ್ಟಿಸಿದ ತನ್ನ ಇಮೇಜನ್ನು ಮುರಿಯವ ಬೆದರಿಕೆ ಒಡ್ಡುವ ವ್ಯಕ್ತಿಗಳನ್ನು ಶಿಕ್ಷಿಸಲು ಯಾವ ಮಟ್ಟಿಗೆ ಹೋಗಬಹುದು ಎನ್ನುವುದನ್ನು ಈ ನಕಲಿ ಆರೋಪಗಳ ಆಧಾರದ ಮೇಲೆ ಮಾಡಿದ ಬಂಧನಗಳು ತೋರಿಸುತ್ತವೆ.

ಅಧಿಕಾರದ ದುರುಪಯೋಗ ಮಾಡುವುದು ನಮ್ಮ ದೇಶಕ್ಕೆ ಹೊಸದಲ್ಲ. 2019ರ ಲೋಕಸಭೆ ಚುನಾವಣಗೆ ಮುಂಚೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚಿತ್ರವನ್ನು ವಿರೂಪಗೊಳಿಸಿದ್ದಕ್ಕಾಗಿ ಒಬ್ಬ ಬಿಜೆಪಿಯ ಕಾರ್ಯಕರ್ತನನ್ನು ಬಂಧಿಸಲಾಗಿತ್ತು. ಆದರೆ ಸುಪ್ರೀಮ್ ಕೋರ್ಟ್ ಈ ಪ್ರಕರಣವನ್ನು ತುರ್ತಾಗಿ ಗಮನಿಸಿದ್ದರಿಂದ ಆ ಕಾರ್ಯಕರ್ತನನ್ನು ಬಿಡುಗಡೆ ಮಾಡಬೇಕಾಯಿತು.

ಇಷ್ಟೆಲ್ಲಾ ನಡೆಯುತ್ತಿದ್ದರೂ ಕರ್ನಾಟಕದ ಮಾಧ್ಯಮಗಳು ಇವುಗಳನ್ನು ಖಂಡಿಸುವುದ ಇರಲಿ ಈ ಕುರಿತು ಸಣ್ಣ ಸುದ್ದಿ ಸಹ ಮಾಡುವುದಿಲ್ಲ. ಇಲ್ಲಿ ಕರ್ನಾಟಕದಲ್ಲಿ ಸನ್ನಿವೇಶ ಸಂಪೂರ್ಣ ವಿರುದ್ಧವಾಗಿದೆ. ಇಲ್ಲಿ ಟಿವಿ ಮಾಧ್ಯಮಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿದ್ದು ಒಂದು ಪಕ್ಷದ ಪರವಾಗಿ ನೇರವಾಗಿ ಕೆಲಸ ಮಾಡುತ್ತಿವೆ. ವಯಕ್ತಿಕ ನಿಂದನೆ, ತೇಜೋವಧೆ ಮಾಡುವುದರಲ್ಲಿಯೇ ನಿರತವಾಗಿದ್ದು ಇವುಗಳ ವಿರುದ್ಧ ಯಾರಾದರೂ ಕೇಸು ದಾಖಲಿಸಿದರೂ ಸಹ ಎಮರ್ಜೆನ್ಸಿ ಘೋಷಣೆ ಆಗಿದೆ ಅನ್ನೋ ರೀತಿಯಲ್ಲಿ ವರ್ತಿಸುತ್ತಿವೆ. ಪತ್ರಿಕೋಧ್ಯಮದ ಲವಲೇಶವೂ ಇಲ್ಲಿನ ಟಿವಿ ಚಾನೆಲ್ ಗಳಿಗೆ ಗೊತ್ತಿಲ್ಲದಿರುವುದು ದುರಂತ.

ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರದ ಸಮಸ್ಯೆ ಮುಂಚೆಯಿಂದಲೂ ಇದೆ. ಪುಸ್ತಕಗಳನ್ನು, ಸಿನೆಮಾಗಳನ್ನು ಹಾಗೂ ಸಾಮಾಜಿಕ ಜಾಲತಾಣಗಳ ವಿಷಯಗಳನ್ನು ಕಟ್ಟುನಿಟ್ಟಾದ ನೀತಿಗಳ ಅಡಿ ಪರಿಶೀಲಸಲಾಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರದ ಸೂಚ್ಯಾಂಕದಲ್ಲಿ ಭಾರತ ಪಾಕಿಸ್ತಾನಕ್ಕಿಂತ ಒಂದು ಸ್ಥಾನ ಮುಂದಿದೆ. ಹಾಗಾದರೆ ನಾವು ಪಾಕಿಸ್ತಾನಕ್ಕಿಂತಲೂ ಉತ್ತಮ ಎಂದು ಹೇಳಿಕೊಳ್ಳುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....