Homeಅಂತರಾಷ್ಟ್ರೀಯಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

- Advertisement -
- Advertisement -

ಈ ತಿಂಗಳು ಉಕ್ರೇನ್‌ನಲ್ಲಿ ನಡೆಯುತ್ತಿರುವ ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್ -2021ರ ಭಾರತೀಯ ಫುಟ್‌ಬಾಲ್‌ ತಂಡದಲ್ಲಿ ಕರ್ನಾಟಕದ ಐವರು ಯುವತಿಯರು ಆಟವಾಡಲಿದ್ದಾರೆ. ಅದರಲ್ಲೂ ಈ ತಂಡದಲ್ಲಿ ಬೆಳಗಾವಿಯ ಮೂವರು ಯುವತಿಯು ಸ್ಥಾನ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಬೇರೆ ಬೇರೆ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಎಂಬ ಮೂವರು ವಿದ್ಯಾರ್ಥಿನಿಯರು ತಂಡದಲ್ಲಿದ್ದಾರೆ. ಇವರ ಜೊತೆಗೆ ಬೆಂಗಳೂರಿನ ಸಂಜನಾ ಮತ್ತು ವಿಭಾ ಕೂಡ ಸ್ಥಾನ ಪಡೆದಿದ್ದಾರೆ. 11 ಕ್ರೀಡಾಪಟುಗಳಿರುವ ಭಾರತೀಯ ತಂಡದಲ್ಲಿ ಐವರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ.

ಈ ಐವರು ಯುವತಿಯರು ಜುಲೈ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಎಂಟು ದಿನಗಳ ಕಾಲ ವಿಶೇಷ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಬೆಳಗಾವಿ ಯುನೈಟೆಡ್ ಫುಟ್ಬಾಲ್ ಅಕಾಡೆಮಿಯಲ್ಲಿ ಮತಿನ್ ಇನಾಮದಾರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಬೆಂಗಳೂರಿನಲ್ಲಿ ನಡೆದ ಸೂಪರ್ ಡಿವಿಷನ್ ಲೀಗ್ ಪಂದ್ಯಗಳಲ್ಲಿ ಇವರೆಲ್ಲರೂ ಭಾಗವಹಿಸಿದ್ದರು. ನಂತರ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಗಸ್ಟ್ 6 ರಂದು ಐವರು ಕನ್ನಡತಿಯರು ದೆಹಲಿಗೆ ತೆರಳಲಿದ್ದು, ಅಲ್ಲಿಂದ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ.

“ನಾನು ಭಾರತ ತಂಡದಲ್ಲಿ ಆಡಲು ಉತ್ಸುಕಳಾಗಿದ್ದೇನೆ. ತಂಡಕ್ಕೆ ಆಯ್ಕೆಯಾದ ನಂತರ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ನನ್ನ ಚೊಚ್ಚಲ ಅಂತರಾಷ್ಟ್ರೀಯ ಸ್ಪರ್ಧೆ ಇದಾಗಿದ್ದು, ಉತ್ತಮ ಪ್ರದರ್ಶನ ನೀಡುತ್ತೇನೆ ಎಂದು ಆಶೀಸುತ್ತೇನೆ” ಎಂದು ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಅಂಜಲಿ ಹೇಳಿದ್ದಾರೆ.

ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನಲ್ಲಿ ಅದಿತಿ ಜಾಧವ್ ಬಿಎ ವಿದ್ಯಾರ್ಥಿನಿಯಾಗಿದ್ದಾರೆ. ಪ್ರಿಯಾಂಕ ಕಾಂಗ್ರಾಲ್ಕರ್ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಕಾಂ ಓದುತ್ತಿದ್ದಾರೆ. 23 ವರ್ಷದೊಳಗಿನ ಮಿನಿ ಫುಟ್ಬಾಲ್ ಮಹಿಳಾ ವಿಶ್ವಕಪ್ -2021 ಏಳು-ಬದಿಯ ಪಂದ್ಯಾವಳಿಯಾಗಿದ್ದು, ಇದು ಉಕ್ರೇನ್‌ನ ಕೀವ್‌ನಲ್ಲಿ ಆಗಸ್ಟ್ 11 ರಿಂದ 16 ರವರೆಗೆ ನಡೆಯಲಿದೆ.


ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...