Homeಅಂತರಾಷ್ಟ್ರೀಯಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

- Advertisement -
- Advertisement -

ಈ ತಿಂಗಳು ಉಕ್ರೇನ್‌ನಲ್ಲಿ ನಡೆಯುತ್ತಿರುವ ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್ -2021ರ ಭಾರತೀಯ ಫುಟ್‌ಬಾಲ್‌ ತಂಡದಲ್ಲಿ ಕರ್ನಾಟಕದ ಐವರು ಯುವತಿಯರು ಆಟವಾಡಲಿದ್ದಾರೆ. ಅದರಲ್ಲೂ ಈ ತಂಡದಲ್ಲಿ ಬೆಳಗಾವಿಯ ಮೂವರು ಯುವತಿಯು ಸ್ಥಾನ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಬೇರೆ ಬೇರೆ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಎಂಬ ಮೂವರು ವಿದ್ಯಾರ್ಥಿನಿಯರು ತಂಡದಲ್ಲಿದ್ದಾರೆ. ಇವರ ಜೊತೆಗೆ ಬೆಂಗಳೂರಿನ ಸಂಜನಾ ಮತ್ತು ವಿಭಾ ಕೂಡ ಸ್ಥಾನ ಪಡೆದಿದ್ದಾರೆ. 11 ಕ್ರೀಡಾಪಟುಗಳಿರುವ ಭಾರತೀಯ ತಂಡದಲ್ಲಿ ಐವರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ.

ಈ ಐವರು ಯುವತಿಯರು ಜುಲೈ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಎಂಟು ದಿನಗಳ ಕಾಲ ವಿಶೇಷ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಬೆಳಗಾವಿ ಯುನೈಟೆಡ್ ಫುಟ್ಬಾಲ್ ಅಕಾಡೆಮಿಯಲ್ಲಿ ಮತಿನ್ ಇನಾಮದಾರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಬೆಂಗಳೂರಿನಲ್ಲಿ ನಡೆದ ಸೂಪರ್ ಡಿವಿಷನ್ ಲೀಗ್ ಪಂದ್ಯಗಳಲ್ಲಿ ಇವರೆಲ್ಲರೂ ಭಾಗವಹಿಸಿದ್ದರು. ನಂತರ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಗಸ್ಟ್ 6 ರಂದು ಐವರು ಕನ್ನಡತಿಯರು ದೆಹಲಿಗೆ ತೆರಳಲಿದ್ದು, ಅಲ್ಲಿಂದ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ.

“ನಾನು ಭಾರತ ತಂಡದಲ್ಲಿ ಆಡಲು ಉತ್ಸುಕಳಾಗಿದ್ದೇನೆ. ತಂಡಕ್ಕೆ ಆಯ್ಕೆಯಾದ ನಂತರ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ನನ್ನ ಚೊಚ್ಚಲ ಅಂತರಾಷ್ಟ್ರೀಯ ಸ್ಪರ್ಧೆ ಇದಾಗಿದ್ದು, ಉತ್ತಮ ಪ್ರದರ್ಶನ ನೀಡುತ್ತೇನೆ ಎಂದು ಆಶೀಸುತ್ತೇನೆ” ಎಂದು ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಅಂಜಲಿ ಹೇಳಿದ್ದಾರೆ.

ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನಲ್ಲಿ ಅದಿತಿ ಜಾಧವ್ ಬಿಎ ವಿದ್ಯಾರ್ಥಿನಿಯಾಗಿದ್ದಾರೆ. ಪ್ರಿಯಾಂಕ ಕಾಂಗ್ರಾಲ್ಕರ್ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಕಾಂ ಓದುತ್ತಿದ್ದಾರೆ. 23 ವರ್ಷದೊಳಗಿನ ಮಿನಿ ಫುಟ್ಬಾಲ್ ಮಹಿಳಾ ವಿಶ್ವಕಪ್ -2021 ಏಳು-ಬದಿಯ ಪಂದ್ಯಾವಳಿಯಾಗಿದ್ದು, ಇದು ಉಕ್ರೇನ್‌ನ ಕೀವ್‌ನಲ್ಲಿ ಆಗಸ್ಟ್ 11 ರಿಂದ 16 ರವರೆಗೆ ನಡೆಯಲಿದೆ.


ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...