Homeಮುಖಪುಟಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

ಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

- Advertisement -
- Advertisement -

ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುಂಡಿಗೆ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಸೇನಾ ಸೈನಿಕರು ಪ್ರಾಣ ಬಿಟ್ಟಿದ್ದಾರೆ.

ರಾಜಧಾನಿ ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಸಶಸ್ತ್ರ ಪಡೆ ಮತ್ತು ಜಮ್ಮು ಕಾಶ್ಮೀರ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹಲವಾರು ನಾಗರಿಕರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

“ಕುಪ್ವಾರಾ ಜಿಲ್ಲೆಯ ಹಂದ್ವಾರ ಚಾಂಗಿಮುಲ್ಲಾದ ಮನೆಯೊಂದರಲ್ಲಿ ನಾಗರಿಕ ಕೈದಿಗಳನ್ನು ಭಯೋತ್ಪಾದಕರು ಒತ್ತೆಯಾಳುಗಳಾಗಿ ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನಾ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಮ್ಮುಕಾಶ್ಮೀರದ ಪೊಲೀಸ್ ಹಾಗೂ ಸೇನೆಯ ಐವರು ಜನರಿರುವ ತಂಡ ನಾಗರೀಕರು ಇರುವ ಭಯೋತ್ಪಾದಕರ ತಾಣದ ಮೇಲೆ ದಾಳಿಮಾಡಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಸೈನ್ಯ ಮತ್ತು ಜಮ್ಮುಕಾಶ್ಮೀರ ಪೊಲೀಸರ ತಂಡವು ಗುರಿ ಪ್ರದೇಶವನ್ನು ಪ್ರವೇಶಿಸಿ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ, ಈ ಪ್ರಕ್ರಿಯೆಯಲ್ಲಿ, ತಂಡವು ಭಯೋತ್ಪಾದಕರಿಂದ ಭಾರೀ ಪ್ರಮಾಣದ ಗುಂಡಿನ ಚಕಮಕಿಗೆ ನಡೆಯಿತು” ಎಂದು ಹೇಳಲಾಗಿದೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್‌ನಲ್ಲಿ ಗೌರವ ಸಲ್ಲಿಸಿದರು. “ಹಂದ್ವಾರದಲ್ಲಿ ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಯ ನಷ್ಟವು ತುಂಬಾ ನೋವಿನ ವಿಷಯವಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅವರು ಅನುಕರಣೀಯ ಧೈರ್ಯವನ್ನು ತೋರಿಸಿದರು. ದೇಶಕ್ಕೆ ಸೇವೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ಅವರ ಧೈರ್ಯ ಮತ್ತು ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ” ಎಂದು ರಾಜಾನಾಥ್ ಸಿಂಗ್ ಬರೆದಿದ್ದಾರೆ.

“ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅನುಜ್ ಸೂದ್ ಮತ್ತು ಜಮ್ಮುಕಾಶ್ಮೀರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಕೀಲ್ ಖಾಜಿ ಸೇರಿದಂತೆ ಐವರು ಧೈರ್ಯಶಾಲಿ ಸಿಬ್ಬಂದಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಟಿಐಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ “ಸುದೀರ್ಘ ಆತಂಕಿತ ರಾತ್ರಿಯ ನಂತರ, ಕೆಚ್ಚೆದೆಯ ವೀರರು ಹುತಾತ್ಮರಾಗಿದ್ದಾರೆಂಬ ದುಖದ ವಿಚಾರವನ್ನು ಕೇಳುತ್ತಿದ್ದೇವೆ” ಎಂದು ಟ್ವಿಟ್ಟರಿನಲ್ಲಿ ಬರೆದಿದ್ದಾರೆ.

 

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಜವಾನರು ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಕೇಳುತ್ತಿದ್ದೇನೆ. ಅವರ ಆತ್ಮಗಳು ಶಾಂತಿಯನ್ನು ಕೋರುತ್ತಿದ್ದೇನೆ ಹಾಗೂ ಅವರ ಕುಟುಂಬಗಳು ಮತ್ತು ಸಹೋದ್ಯೋಗಿಗಳು ಅವರ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಪಡೆದುಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...