Homeಮುಖಪುಟಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

ಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

- Advertisement -
- Advertisement -

ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುಂಡಿಗೆ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಸೇನಾ ಸೈನಿಕರು ಪ್ರಾಣ ಬಿಟ್ಟಿದ್ದಾರೆ.

ರಾಜಧಾನಿ ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಸಶಸ್ತ್ರ ಪಡೆ ಮತ್ತು ಜಮ್ಮು ಕಾಶ್ಮೀರ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹಲವಾರು ನಾಗರಿಕರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

“ಕುಪ್ವಾರಾ ಜಿಲ್ಲೆಯ ಹಂದ್ವಾರ ಚಾಂಗಿಮುಲ್ಲಾದ ಮನೆಯೊಂದರಲ್ಲಿ ನಾಗರಿಕ ಕೈದಿಗಳನ್ನು ಭಯೋತ್ಪಾದಕರು ಒತ್ತೆಯಾಳುಗಳಾಗಿ ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನಾ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಮ್ಮುಕಾಶ್ಮೀರದ ಪೊಲೀಸ್ ಹಾಗೂ ಸೇನೆಯ ಐವರು ಜನರಿರುವ ತಂಡ ನಾಗರೀಕರು ಇರುವ ಭಯೋತ್ಪಾದಕರ ತಾಣದ ಮೇಲೆ ದಾಳಿಮಾಡಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಸೈನ್ಯ ಮತ್ತು ಜಮ್ಮುಕಾಶ್ಮೀರ ಪೊಲೀಸರ ತಂಡವು ಗುರಿ ಪ್ರದೇಶವನ್ನು ಪ್ರವೇಶಿಸಿ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ, ಈ ಪ್ರಕ್ರಿಯೆಯಲ್ಲಿ, ತಂಡವು ಭಯೋತ್ಪಾದಕರಿಂದ ಭಾರೀ ಪ್ರಮಾಣದ ಗುಂಡಿನ ಚಕಮಕಿಗೆ ನಡೆಯಿತು” ಎಂದು ಹೇಳಲಾಗಿದೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್‌ನಲ್ಲಿ ಗೌರವ ಸಲ್ಲಿಸಿದರು. “ಹಂದ್ವಾರದಲ್ಲಿ ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಯ ನಷ್ಟವು ತುಂಬಾ ನೋವಿನ ವಿಷಯವಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅವರು ಅನುಕರಣೀಯ ಧೈರ್ಯವನ್ನು ತೋರಿಸಿದರು. ದೇಶಕ್ಕೆ ಸೇವೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ಅವರ ಧೈರ್ಯ ಮತ್ತು ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ” ಎಂದು ರಾಜಾನಾಥ್ ಸಿಂಗ್ ಬರೆದಿದ್ದಾರೆ.

“ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅನುಜ್ ಸೂದ್ ಮತ್ತು ಜಮ್ಮುಕಾಶ್ಮೀರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಕೀಲ್ ಖಾಜಿ ಸೇರಿದಂತೆ ಐವರು ಧೈರ್ಯಶಾಲಿ ಸಿಬ್ಬಂದಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಟಿಐಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ “ಸುದೀರ್ಘ ಆತಂಕಿತ ರಾತ್ರಿಯ ನಂತರ, ಕೆಚ್ಚೆದೆಯ ವೀರರು ಹುತಾತ್ಮರಾಗಿದ್ದಾರೆಂಬ ದುಖದ ವಿಚಾರವನ್ನು ಕೇಳುತ್ತಿದ್ದೇವೆ” ಎಂದು ಟ್ವಿಟ್ಟರಿನಲ್ಲಿ ಬರೆದಿದ್ದಾರೆ.

 

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಜವಾನರು ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಕೇಳುತ್ತಿದ್ದೇನೆ. ಅವರ ಆತ್ಮಗಳು ಶಾಂತಿಯನ್ನು ಕೋರುತ್ತಿದ್ದೇನೆ ಹಾಗೂ ಅವರ ಕುಟುಂಬಗಳು ಮತ್ತು ಸಹೋದ್ಯೋಗಿಗಳು ಅವರ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಪಡೆದುಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...