Homeಮುಖಪುಟಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

ಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

- Advertisement -
- Advertisement -

ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುಂಡಿಗೆ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಸೇನಾ ಸೈನಿಕರು ಪ್ರಾಣ ಬಿಟ್ಟಿದ್ದಾರೆ.

ರಾಜಧಾನಿ ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಸಶಸ್ತ್ರ ಪಡೆ ಮತ್ತು ಜಮ್ಮು ಕಾಶ್ಮೀರ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹಲವಾರು ನಾಗರಿಕರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

“ಕುಪ್ವಾರಾ ಜಿಲ್ಲೆಯ ಹಂದ್ವಾರ ಚಾಂಗಿಮುಲ್ಲಾದ ಮನೆಯೊಂದರಲ್ಲಿ ನಾಗರಿಕ ಕೈದಿಗಳನ್ನು ಭಯೋತ್ಪಾದಕರು ಒತ್ತೆಯಾಳುಗಳಾಗಿ ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನಾ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಮ್ಮುಕಾಶ್ಮೀರದ ಪೊಲೀಸ್ ಹಾಗೂ ಸೇನೆಯ ಐವರು ಜನರಿರುವ ತಂಡ ನಾಗರೀಕರು ಇರುವ ಭಯೋತ್ಪಾದಕರ ತಾಣದ ಮೇಲೆ ದಾಳಿಮಾಡಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಸೈನ್ಯ ಮತ್ತು ಜಮ್ಮುಕಾಶ್ಮೀರ ಪೊಲೀಸರ ತಂಡವು ಗುರಿ ಪ್ರದೇಶವನ್ನು ಪ್ರವೇಶಿಸಿ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ, ಈ ಪ್ರಕ್ರಿಯೆಯಲ್ಲಿ, ತಂಡವು ಭಯೋತ್ಪಾದಕರಿಂದ ಭಾರೀ ಪ್ರಮಾಣದ ಗುಂಡಿನ ಚಕಮಕಿಗೆ ನಡೆಯಿತು” ಎಂದು ಹೇಳಲಾಗಿದೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್‌ನಲ್ಲಿ ಗೌರವ ಸಲ್ಲಿಸಿದರು. “ಹಂದ್ವಾರದಲ್ಲಿ ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಯ ನಷ್ಟವು ತುಂಬಾ ನೋವಿನ ವಿಷಯವಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅವರು ಅನುಕರಣೀಯ ಧೈರ್ಯವನ್ನು ತೋರಿಸಿದರು. ದೇಶಕ್ಕೆ ಸೇವೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ಅವರ ಧೈರ್ಯ ಮತ್ತು ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ” ಎಂದು ರಾಜಾನಾಥ್ ಸಿಂಗ್ ಬರೆದಿದ್ದಾರೆ.

“ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅನುಜ್ ಸೂದ್ ಮತ್ತು ಜಮ್ಮುಕಾಶ್ಮೀರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಕೀಲ್ ಖಾಜಿ ಸೇರಿದಂತೆ ಐವರು ಧೈರ್ಯಶಾಲಿ ಸಿಬ್ಬಂದಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಟಿಐಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ “ಸುದೀರ್ಘ ಆತಂಕಿತ ರಾತ್ರಿಯ ನಂತರ, ಕೆಚ್ಚೆದೆಯ ವೀರರು ಹುತಾತ್ಮರಾಗಿದ್ದಾರೆಂಬ ದುಖದ ವಿಚಾರವನ್ನು ಕೇಳುತ್ತಿದ್ದೇವೆ” ಎಂದು ಟ್ವಿಟ್ಟರಿನಲ್ಲಿ ಬರೆದಿದ್ದಾರೆ.

 

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಜವಾನರು ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಕೇಳುತ್ತಿದ್ದೇನೆ. ಅವರ ಆತ್ಮಗಳು ಶಾಂತಿಯನ್ನು ಕೋರುತ್ತಿದ್ದೇನೆ ಹಾಗೂ ಅವರ ಕುಟುಂಬಗಳು ಮತ್ತು ಸಹೋದ್ಯೋಗಿಗಳು ಅವರ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಪಡೆದುಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...