Homeಕರ್ನಾಟಕಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದ ಆದೇಶವನ್ನು ರಾಜ್ಯ ಸರ್ಕಾರ ಮಂಗಳವಾರ ವಾಪಾಸು ಪಡೆದಿದೆ. ಸರ್ಕಾರದ ಈ ನಿರ್ಧಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸೋಂಕಿನಿಂದ ಮೃತಪಟ್ಟ ಪ್ರತಿ ಕುಟುಂಬದವರಿಗೂ 5 ಲಕ್ಷ ರೂ. ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ, ಕೋವಿಡ್‌ನಿಂದ ಮೃತಪಟ್ಟವರ ಪ್ರತಿ ಕುಟುಂಬದವರಿಗೂ ರೂ.5 ಲಕ್ಷ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು” ಎಂದು ಹೇಳಿದ್ದಾರೆ.

“ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರ, ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಭವಿಷ್ಯವನ್ನೇ ನಾಶ ಮಾಡಲು ಹೊರಟಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

“ಮೊದಲು ಕೊರೊನಾ ಸಾವಿನ ಸಂಖ್ಯೆಯನ್ನು ಸುಳ್ಳು ಲೆಕ್ಕ ನೀಡಿ ಕಡಿಮೆ ತೋರಿಸಿದಿರಿ, ಈಗ ಪರಿಹಾರದ ಮೊತ್ತವನ್ನು ಕೂಡಾ ಕಡಿತಗೊಳಿಸಿ ಸತ್ತವರ ಜೊತೆ ಬದುಕಿರುವ ಅವರ ಕುಟುಂಬವನ್ನೂ ಸಾಯಿಸಲು ಹೊರಟಿದ್ದೀರಿ. ನೊಂದವರ ಶಾಪ ಸರ್ಕಾರಕ್ಕೆ ತಟ್ಟದೆ ಇರಲಾರದು. ಕೆಪಿಸಿಸಿ ನಡೆಸಿರುವ ಸಮೀಕ್ಷೆಯ ಪ್ರಕಾರ ಕೊರೊನಾ ಸಾವಿನ ಸಂಖ್ಯೆ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಅವರ ಸಮೀಕ್ಷೆ ಪ್ರಕಾರ ಇದು ಮೂರುವರೆಯಿಂದ ನಾಲ್ಕು ಲಕ್ಷ. ರಾಜ್ಯ ಸರ್ಕಾರ 37,603 ಸೋಂಕಿತರು ಮಾತ್ರ ಸತ್ತಿದ್ದಾರೆ ಎಂದು ಸುಳ್ಳು ಲೆಕ್ಕ ನೀಡಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಲೇಬೇಕು ಎಂದು ಒತ್ತಾಯಿಸಿದ್ದೆವು. ಒಕ್ಕೂಟ ಸರ್ಕಾರವು ದಿನಾಂಕ 14-03-2020 ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ಆದೇಶವನ್ನು ದಿನ ಮಾರ್ಪಡಿಸಿಕೊಂಡಿದೆ” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ. ಆದರೆ ದಿನಾಂಕ; 28-09-2021 ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟರೆ, ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ. 1 ಲಕ್ಷ ಮತ್ತು ಒಕ್ಕೂಟ ಸರ್ಕಾರದಿಂದ ರೂ. 50,000 ನೀಡುವುದಾಗಿ ಆದೇಶ ಹೊರಡಿಸಲಾಗಿದೆ” ಎಂದು ಅವರು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

“ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದಲೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಿವೆ. ಕೋವಿಡ್ ಸೋಂಕು ಹೆಚ್ಚಿದ್ದಾಗ ಸರ್ಕಾರ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತೆ ಮಾಡಿ, ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳುತ್ತಿವೆ. ಸರ್ಕಾರದ ಈ ನಡೆ ಅಮಾನವೀಯವಾಗಿದೆ” ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.

“ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕೆಂಬ ನಿಯಮವನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ ರೂ. 1.5 ಲಕ್ಷ (ಕೇಂದ್ರ, ರಾಜ್ಯಗಳೆರಡೂ ಸೇರಿ) ನೀಡಲಾಗುವುದೆಂದು ಹೇಳುತ್ತಿದೆ.
ರಾಜ್ಯ ಸರ್ಕಾರಗಳಿಗೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದಿಂದ ಆಗ್ರಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಿಂದ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...