Homeಕರ್ನಾಟಕಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದ ಆದೇಶವನ್ನು ರಾಜ್ಯ ಸರ್ಕಾರ ಮಂಗಳವಾರ ವಾಪಾಸು ಪಡೆದಿದೆ. ಸರ್ಕಾರದ ಈ ನಿರ್ಧಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸೋಂಕಿನಿಂದ ಮೃತಪಟ್ಟ ಪ್ರತಿ ಕುಟುಂಬದವರಿಗೂ 5 ಲಕ್ಷ ರೂ. ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ, ಕೋವಿಡ್‌ನಿಂದ ಮೃತಪಟ್ಟವರ ಪ್ರತಿ ಕುಟುಂಬದವರಿಗೂ ರೂ.5 ಲಕ್ಷ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು” ಎಂದು ಹೇಳಿದ್ದಾರೆ.

“ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರ, ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಭವಿಷ್ಯವನ್ನೇ ನಾಶ ಮಾಡಲು ಹೊರಟಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

“ಮೊದಲು ಕೊರೊನಾ ಸಾವಿನ ಸಂಖ್ಯೆಯನ್ನು ಸುಳ್ಳು ಲೆಕ್ಕ ನೀಡಿ ಕಡಿಮೆ ತೋರಿಸಿದಿರಿ, ಈಗ ಪರಿಹಾರದ ಮೊತ್ತವನ್ನು ಕೂಡಾ ಕಡಿತಗೊಳಿಸಿ ಸತ್ತವರ ಜೊತೆ ಬದುಕಿರುವ ಅವರ ಕುಟುಂಬವನ್ನೂ ಸಾಯಿಸಲು ಹೊರಟಿದ್ದೀರಿ. ನೊಂದವರ ಶಾಪ ಸರ್ಕಾರಕ್ಕೆ ತಟ್ಟದೆ ಇರಲಾರದು. ಕೆಪಿಸಿಸಿ ನಡೆಸಿರುವ ಸಮೀಕ್ಷೆಯ ಪ್ರಕಾರ ಕೊರೊನಾ ಸಾವಿನ ಸಂಖ್ಯೆ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಅವರ ಸಮೀಕ್ಷೆ ಪ್ರಕಾರ ಇದು ಮೂರುವರೆಯಿಂದ ನಾಲ್ಕು ಲಕ್ಷ. ರಾಜ್ಯ ಸರ್ಕಾರ 37,603 ಸೋಂಕಿತರು ಮಾತ್ರ ಸತ್ತಿದ್ದಾರೆ ಎಂದು ಸುಳ್ಳು ಲೆಕ್ಕ ನೀಡಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಲೇಬೇಕು ಎಂದು ಒತ್ತಾಯಿಸಿದ್ದೆವು. ಒಕ್ಕೂಟ ಸರ್ಕಾರವು ದಿನಾಂಕ 14-03-2020 ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ಆದೇಶವನ್ನು ದಿನ ಮಾರ್ಪಡಿಸಿಕೊಂಡಿದೆ” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ. ಆದರೆ ದಿನಾಂಕ; 28-09-2021 ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟರೆ, ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ. 1 ಲಕ್ಷ ಮತ್ತು ಒಕ್ಕೂಟ ಸರ್ಕಾರದಿಂದ ರೂ. 50,000 ನೀಡುವುದಾಗಿ ಆದೇಶ ಹೊರಡಿಸಲಾಗಿದೆ” ಎಂದು ಅವರು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

“ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದಲೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಿವೆ. ಕೋವಿಡ್ ಸೋಂಕು ಹೆಚ್ಚಿದ್ದಾಗ ಸರ್ಕಾರ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತೆ ಮಾಡಿ, ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳುತ್ತಿವೆ. ಸರ್ಕಾರದ ಈ ನಡೆ ಅಮಾನವೀಯವಾಗಿದೆ” ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.

“ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕೆಂಬ ನಿಯಮವನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ ರೂ. 1.5 ಲಕ್ಷ (ಕೇಂದ್ರ, ರಾಜ್ಯಗಳೆರಡೂ ಸೇರಿ) ನೀಡಲಾಗುವುದೆಂದು ಹೇಳುತ್ತಿದೆ.
ರಾಜ್ಯ ಸರ್ಕಾರಗಳಿಗೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದಿಂದ ಆಗ್ರಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಿಂದ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...