Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...