Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...