Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...