Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...