Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...