Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...