Homeಮುಖಪುಟ'ಗೋ-ವಿಜ್ಞಾನ' ಪರೀಕ್ಷೆ ಬರೆಯಲಿರುವ 5 ಲಕ್ಷ ಜನ - ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

‘ಗೋ-ವಿಜ್ಞಾನ’ ಪರೀಕ್ಷೆ ಬರೆಯಲಿರುವ 5 ಲಕ್ಷ ಜನ – ಅವೈಜ್ಞಾನಿಕ ಪಠ್ಯಕ್ರಮಕ್ಕೆ ಆಕ್ಷೇಪ

ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ- ಪ್ರಾಧ್ಯಾಪಕ ಪಾರ್ಥ ರಾಯ್

- Advertisement -
- Advertisement -

ದೇಶದ 5 ಲಕ್ಷಕ್ಕೂ ಹೆಚ್ಚು ಜನರು ಗುರುವಾರ “ಪವಿತ್ರ ಹಸು” ಕುರಿತು ಆನ್‌ಲೈನ್ ಪರೀಕ್ಷೆಯನ್ನು ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಸ್ಥಳೀಯ ಹಸು ವಿಜ್ಞಾನ” ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದೇಶದ 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾಧವಪುರ ವಿವಿ ಸೇರಿದಂತೆ ಹಲವಾರು ವಿವಿಗಳ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಯುಜಿಸಿ ಕಳಿಸಿದ ಪತ್ರ ನೋಡಿ ಗಾಬರಿಯಾಗಿದ್ದಾರೆ. ಒಂದು ಅವೈಜ್ಞಾನಿಕ ಪಠ್ಯವುಳ್ಳ, ಒಂದು ಪಕ್ಷದ ಸಿದ್ಧಾಂತಕ್ಕೆ ಪೂರಕವಾದ ಸಿಲಬಸ್ ಇರುವ ಈ ಪರೀಕ್ಷೆ ಅವೈಜ್ಞಾನಿಕ ಕ್ರಮವನ್ನು ಪ್ರಚೋದಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರೀಯ ಪಶುಸಂಗೋಪನಾ ಸಚಿವಾಲಯದ ಅಡಿಯಲ್ಲಿ 2019 ರಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಕಾಮಧೇನು ಆಯೋಗ್‌ನ ಮೆದುಳಿನ ಕೂಸು ಈ ಪರೀಕ್ಷೆ. ಅದರ ವೆಬ್‌ಸೈಟ್‌ನಲ್ಲಿನ ಅಧ್ಯಯನ ಸಾಮಗ್ರಿಗಳು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದನ್ನು ಬಹುತೇಕ ಹೇಳುತ್ತವೆ. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿ ವಿಶೇಷವಾದದ್ದನ್ನು ಹೊಂದಿದ್ದು ಅದು ಸೂರ್ಯನ ಬೆಳಕನ್ನು ಚಿನ್ನವಾಗಿ ಪರಿವರ್ತಿಸುತ್ತದೆ ಮತ್ತು ಅದು ಅವುಗಳ ಹಾಲಿಗೆ ಹಳದಿ ಬಣ್ಣವನ್ನು ನೀಡುತ್ತದೆ” ಎಂಬ ಅವೈಜ್ಞಾನಿಕ ಮಾಹಿತಿ ಈ ಪಠ್ಯಕ್ರಮದಲ್ಲಿದೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ಭಾರತ ಮತ್ತು ರಷ್ಯಾದ ಪರಮಾಣು ಕೇಂದ್ರಗಳಲ್ಲಿ ವಿಕಿರಣಗಳ ವಿರುದ್ಧ ರಕ್ಷಣೆಯಾಗಿ ಗೋವಿನ ಸಗಣಿ ಬಳಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ್ ಹಂಚಿಕೊಂಡ ಅಧ್ಯಯನ ವಸ್ತು ಹೇಳುತ್ತದೆ. ಇದು ಭೋಪಾಲ್ ನಿವಾಸಿಗಳನ್ನು ಅನಿಲ ಸೋರಿಕೆಯಿಂದ ರಕ್ಷಿಸಿತ್ತು. ಭಾರತೀಯ ಹಸುಗಳು ತಮ್ಮ ಹಂಪ್‌ಗಳಲ್ಲಿರುವ ಸೌರ ನಾಡಿಯ ಸಹಾಯದಿಂದ ಸೂರ್ಯನ ಶಕ್ತಿಯನ್ನು ಹೀರಿಕೊಳ್ಳುವ ವಿಶೇಷ ಶಕ್ತಿಯನ್ನು ಹೊಂದಿವೆ ಎಂದು ಸಿಲಬಸ್ ಹೇಳುತ್ತದೆ. ಇದರ ಪರಿಣಾಮವಾಗಿ, ಭಾರತೀಯ ಹಸುವಿನ ಹಾಲು, ಹಸುವಿನ ಸಗಣಿ ಮತ್ತು ಹಸುವಿನ ಮೂತ್ರಗಳು ಪೌಷ್ಟಿಕಾಂಶಗಳನ್ನು ಹೊಂದಿವೆ ಎಂದು ಸಿಲಬಸ್ ಹೇಳಿದೆ.

“ಇದರ ಬಗ್ಗೆ ಅವೈಜ್ಞಾನಿಕ ಏನೂ ಇಲ್ಲ. ನಾವು ಹಸುವಿನ ಭಾರತೀಯ ತಳಿಯ ಪ್ರಾಮುಖ್ಯತೆಯನ್ನು ತೋರಿಸಲು ಬಯಸುತ್ತೇವೆ. ಆದ್ದರಿಂದ, ನಾವು ಈ ಪರೀಕ್ಷೆಯನ್ನು ನಡೆಸುತ್ತಿದ್ದೇವೆ” ಎಂದು ಕಾಮಧೇನು ಆಯೋಗ್ ಅಧ್ಯಕ್ಷ ವಲ್ಲಭಾಯಿ ಕಥಿರಿಯಾ ಹೇಳಿದರು.

ಜನವರಿ 5 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಪರೀಕ್ಷೆಗಳನ್ನು ಘೋಷಿಸಿದ್ದರು. ಫೆಬ್ರವರಿ 12 ರಂದು, ಯುಜಿಸಿ ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ “ಕಾಮಧೇನು ಗೋ ವಿಜಯಾನ್ ಪ್ರಚಾರ್ ಪ್ರಸಾರ್” ಪರೀಕ್ಷೆಯಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ವಿವಿಗಳನ್ನು ಕೋರಿತ್ತು.

ಕೋಲ್ಕತ್ತಾದ ಎಬಿವಿಪಿ ಉಪಾಧ್ಯಕ್ಷ ಆದಿತ್ಯ ದಾಸ್, “ನಮ್ಮ ಕಲ್ಪನೆಯಲ್ಲಿ ನಾವು ತುಂಬಾ ಸ್ಪಷ್ಟವಾಗಿದ್ದೇವೆ. ನಮ್ಮ ಜ್ಞಾನ, ಮಾಹಿತಿ ಮತ್ತು ಹಸುವಿನ ಪವಿತ್ರತೆ ಮತ್ತು ಆರ್ಥಿಕ ಲಾಭಗಳೊಂದಿಗೆ ನಾವು ಸಾರ್ವಜನಿಕರ ಬಳಿಗೆ ಹೋಗುತ್ತೇವೆ. ಜನರು ನಿರ್ಧರಿಸುತ್ತಾರೆ. ಪ್ರಾಧ್ಯಾಪಕರದು ಏಕೆ ಅತಿಯಾದ ಪ್ರತಿಕ್ರಿಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿಯ ಕೋರಿಕೆಯಿಂದ ಬೆರಗಾಗಿದ್ದಾರೆ. ಪರೀಕ್ಷೆಯನ್ನು ಉತ್ತೇಜಿಸಲು ಕೇಳಲಾಗಿರುವ 900 ವಿಶ್ವವಿದ್ಯಾಲಯಗಳಲ್ಲಿ ಜಾಧವ್‌ಪುರ ವಿವಿ ಕೂಡ ಒಂದು.

“ಕೇಂದ್ರ ಸರ್ಕಾರ ಜಾಧವ್‌ಪುರ ವಿಶ್ವವಿದ್ಯಾಲಯಕ್ಕೆ 60 ಕೋಟಿ ರೂ.ಗಳನ್ನು ಸಂಶೋಧನೆಗಾಗಿ ನೀಡುತ್ತಿಲ್ಲ. ನಿರ್ದಿಷ್ಟ ಸಿದ್ಧಾಂತವನ್ನು ವಿದ್ಯಾರ್ಥಿಗಳ ತಲೆಗೆ ತುಂಬಲು ಪ್ರಯತ್ನಿಸುತ್ತಿದೆ” ಎಂದು ಜಾಧವ್‌ಪುರ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪಾರ್ಥ ರಾಯ್ ಹೇಳಿದರು.

ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಸಮಂತಕ್ ದಾಸ್ “ಇದರ ಹಿಂದೆ ಸಾಕಷ್ಟು ಚೆನ್ನಾಗಿ ಯೋಚಿಸಿದ ಯೋಜನೆ ಇದೆ ಎಂದು ನಾನು ಆತಂಕಿತನಾಗಿರುವೆ. ಅಸತ್ಯಗಳನ್ನು ನ್ಯಾಯಸಮ್ಮತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಿರಿದ್ದಾರೆ.

13 ಭಾಷೆಗಳಲ್ಲಿ ನಡೆಯಲಿರುವ ಪರೀಕ್ಷೆಗಳ ನೋಂದಣಿ 2021 ರ ಜನವರಿ 15 ರಂದು ಪ್ರಾರಂಭವಾಯಿತು. ಆಯೋಗ್‌ನ ವಕ್ತಾರ ಪುರೀಶ್ ಕುಮಾರ್, “5 ಲಕ್ಷ, 10,000 ಜನರು ಈವರೆಗೆ ದಾಖಲಾಗಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಪರೀಕ್ಷೆ ನಡೆಯುತ್ತಿದೆ. ಮುಂದಿನ ವರ್ಷಗಳಲ್ಲಿ ಪರೀಕ್ಷಕರು ಮತ್ತು ಹಸುಗಳ ಸಂಖ್ಯೆಯು ಹೆಚ್ಚಾಗುತ್ತದೆ” ಎಂದು ಆಶಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೆಯೇ ಮುಂದುವರಿದರೆ, ಬಾರತ ಶಿಲಾಯುಗಕ್ಕೆ ಮರಳಲಿದೆ.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...