Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...