Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...