Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...