Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...