Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...