Homeಮುಖಪುಟಪಶ್ಚಿಮ ಬಂಗಾಳ: ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐದು ಮಂದಿ

ಪಶ್ಚಿಮ ಬಂಗಾಳ: ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐದು ಮಂದಿ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅನುಪ್ ತಾವು ಸಾಯುವ ಮೊದಲು ತನ್ನ ಕುಟುಂಬ ಸದಸ್ಯರನ್ನು ಕೊಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಐವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೊಲೆ ಶಂಕೆ ವ್ಯಕ್ತವಾಗಿದೆ.

ಜಮಾಲ್‌ಪುರ ಗ್ರಾಮದಲ್ಲಿ ಒಂದೇ ಕುಟುಂಬ ಐದು ಮಂದಿ ಶವವಾಗಿ ಪತ್ತೆಯಾಗಿದ್ದು, ಇಡೀ ಕುಟುಂಬವನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅನುಪ್ ಬರ್ಮನ್ (33) ಎಂಬುವರ ಕುಟುಂಬ ಇದಾಗಿದ್ದು, ಮೃತರನ್ನು ಅನುಪ್ ಬರ್ಮನ್ ಅವರ ತಾಯಿ ಉಲುಬಾಲಾ ಬರ್ಮನ್, ಪತ್ನಿ ಮಲ್ಲಿಕಾ ಬರ್ಮನ್ ಮತ್ತು 10 ವರ್ಷದೊಳಗಿನ ಇಬ್ಬರು ಹೆಣ್ಣುಮಕ್ಕಳನ್ನು ಬ್ಯೂಟಿ ಬರ್ಮನ್ ಮತ್ತು ಸ್ನಿಗ್ಧಾ ಬರ್ಮನ್ ಎಮದು ಗುರುತಿಸಲಾಗಿದೆ.

ಕುಟುಂಬದ ಮುಖ್ಯಸ್ಥ ಅನುಪ್ ಅವರ ಮೃತದೇಹವು ಛಾವಣಿಯಲ್ಲಿ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಾಪನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಜಮಾಲ್‌ಪುರ ಗ್ರಾಮದ ನಿವಾಸಕ್ಕೆ ಪೊಲೀಸರು ಬೆಳಗ್ಗೆ ಸುಮಾರು ಆರು ಗಂಟೆಗೆ ತಲುಪಿ, ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ .

ಇದನ್ನೂ ಓದಿ: 1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

ಪೊಲೀಸರ ಪ್ರಕಾರ, ಇದು ಆತ್ಮಹತ್ಯೆ ಅಥವಾ ಕೊಲೆ ಪ್ರಕರಣವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. “ಅವರು ಕೊಲೆಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಘಟನೆ ಬಗ್ಗೆ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ. ತನಿಖೆ ಪ್ರಾಥಮಿಕ ಹಂತದಲ್ಲಿದೆ” ಎಂದು ಅವರು ಹೇಳಿದರು.

ಅನುಪ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು ಮತ್ತು ಅವರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯವಾಗಿತ್ತು. ಚಿಕಿತ್ಸೆ ಮುಂದುವರಿಸಲು ಹಣದ ಸಮಸ್ಯೆ ಇತ್ತು. ಅನುಪ್ ಅವರ ಚಿಕಿತ್ಸೆಗೆ ಹಣದ ಅಗತ್ಯವಿರುವುದರಿಂದ ಇತ್ತೀಚೆಗೆ ತಮ್ಮ ಒಂದು ಭೂಮಿಯನ್ನು ಮಾರಾಟ ಮಾಡಿದ್ದರು. ಅವರ ಅನಾರೋಗ್ಯದಿಂದಾಗಿ ಮನೆಯ ಖರ್ಚನ್ನು ಭರಿಸುವುದು ಕಷ್ಟಕರವಾಗಿತ್ತು ಎನ್ನಲಾಗಿದೆ.

ಇಡೀ ಕುಟುಂಬವನ್ನು ಯಾರೋ ಅವರದ್ದೇ ನಿವಾಸದಲ್ಲಿ ಕೊಲೆ ಮಾಡಿರಬಹುದು, ಅಥವಾ 33 ವರ್ಷದ  ಅನುಪ್ ತಾವು ನೇಣಿಗೇರುವ ಮೊದಲು ತನ್ನ ಕುಟುಂಬ ಸದಸ್ಯರನ್ನು ಕೊಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅನುಪ್ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ನೇಣು ಹಾಕಿಕೊಳ್ಳುವ ಮೊದಲು ಕೊಂದಿದ್ದಾನೆ ಎಂಬ ಬಗ್ಗೆ ಕೆಲವು ಸಾಕ್ಷ್ಯಾಧಾರಗಳು ದೊರಕಿವೆ. ನಾವು ಇನ್ನೂ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಪ್ರಕರಣದಲ್ಲಿ ಹೆಚ್ಚಿನ ವಿವರಗಳು ಲಭ್ಯವಾಗುತ್ತವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


‌ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....