Homeಮುಖಪುಟಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

- Advertisement -
- Advertisement -

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್, ರೈಜೋರ್ ದಳ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಪಕ್ಷಗಳು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಸ್ಸಾಂ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ದಿಲೀಪ್ ಸೈಕಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷಗಳು ಹೇಳಿಕೊಂಡಿವೆ ಮತ್ತು ರಾಜ್ಯದ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 60 ಕ್ಷೇತ್ರಗಳಲ್ಲಿ ‘ಬಿಜೆಪಿ ವಿರೋಧಿ ಮತದಾರರ’ ಹೆಸರುಗಳನ್ನು ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಪಿಸಿವೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್)ಯ ಮಧ್ಯೆ ಈ ಆರೋಪಗಳು ಕೇಳಿ ಬಂದಿವೆ.

ಡಿಸೆಂಬರ್ 27ರಂದು, ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆ ಅಡಿಯಲ್ಲಿ ಮನೆ-ಮನೆ ಪರಿಶೀಲನೆಯ ನಂತರ ಅಸ್ಸಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಂತೆ, ಚುನಾವಣಾ ಆಯೋಗವು ಅಸ್ಸಾಂನಲ್ಲಿ ಎಸ್‌ಐಆರ್ ನಡೆಸುತ್ತಿಲ್ಲ. ಬದಲಾಗಿ, ನವೆಂಬರ್ 17ರಂದು, ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ನವೆಂಬರ್ 22 ಮತ್ತು ಡಿಸೆಂಬರ್ 20ರ ನಡುವೆ ರಾಜ್ಯದಲ್ಲಿ ಮನೆ ಮನೆ ಪರಿಶೀಲನೆ ನಡೆದಿದೆ. ವಿಶೇಷ ತೀವ್ರ ಪರಿಷ್ಕರಣೆಯಂತೆ ಈ ಪ್ರಕ್ರಿಯೆಯು ದಾಖಲೆ ಪರಿಶೀಲನೆಯನ್ನು ಒಳಗೊಂಡಿರಲಿಲ್ಲ.

ಜನವರಿ 4ರಂದು ನಡೆದ ಆನ್‌ಲೈನ್ ಸಭೆಯಲ್ಲಿ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರೊಂದಿಗೆ ಸೈಕಿಯಾ ಅವರು ಅಳಿಸುವಿಕೆ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿರೋಧ ಪಕ್ಷಗಳು ಶುಕ್ರವಾರ ತಮ್ಮ ದೂರಿನಲ್ಲಿ ಆರೋಪಿಸಿವೆ.

ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ವಿಶೇಷ ಪರಿಷ್ಕರಣೆಗಾಗಿ ಸಭೆಯ ದೃಶ್ಯಗಳನ್ನು ಪಡೆದುಕೊಳ್ಳಲು ಮತ್ತು ‘ಅಪರಾಧಿಗಳು ಹಾಗೂ ಪಿತೂರಿಗಾರರ’ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷಗಳು ಪೊಲೀಸರನ್ನು ಒತ್ತಾಯಿಸಿವೆ.

ಪ್ರತ್ಯೇಕವಾಗಿ, ರೈಜೋರ್ ದಳದ ಮುಖ್ಯಸ್ಥ ಮತ್ತು ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ಅವರು ಶುಕ್ರವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ‘ಮತದಾರರ ಪಟ್ಟಿ ನಿರ್ವಹಣೆ’ ಉದ್ದೇಶಕ್ಕಾಗಿ ಜನವರಿ 4 ರಂದು ನಡೆದ ಆನ್‌ಲೈನ್ ಸಭೆಯ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

‘ಪ್ರತಿ ಕ್ಷೇತ್ರದ 10,000 ಮತಗಳನ್ನು ಅಳಿಸುವ’ ನಿರ್ದೇಶನಕ್ಕೆ ಸಂಬಂಧಿಸಿದ ಬಿಜೆಪಿ ನಾಯಕತ್ವದ ಎಲ್ಲಾ ಡಿಜಿಟಲ್ ದಾಖಲೆಗಳು ಮತ್ತು ಸಂವಹನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಗೊಗೊಯ್ ಚುನಾವಣಾ ಸಮಿತಿಯನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಲ್ಲಿಸಲಾದ ಫಾರ್ಮ್ 7 ಅರ್ಜಿಗಳ ಲೆಕ್ಕವನ್ನು ಅವರು ಕೋರಿದ್ದು, ಈ ವಿಷಯ ಬಗೆಹರಿಯುವವರೆಗೆ ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ವಿಪಕ್ಷಗಳ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಹೆಸರುಗಳ ಅಳಿಸುವಿಕೆಯನ್ನು ಗೊಗೊಯ್ ತಪ್ಪಾಗಿ ನಿರೂಪಿಸಿದ್ದಾರೆ ಎಂದು ಪಕ್ಷದ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಹೇಳಿದ್ದಾರೆ.

ಗೋಲಾಘಾಟ್ ಜಿಲ್ಲೆಯ ಸರುಪಥರ್ ವಿಧಾನಸಭಾ ಕ್ಷೇತ್ರದ ಉರಿಯಮ್‌ಘಾಟ್‌ನಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯ ನಂತರ 11,000 ಕ್ಕೂ ಹೆಚ್ಚು ಮುಸ್ಲಿಮರನ್ನು ಹೊರಹಾಕಲಾಗಿದೆ. ಹಾಗಾಗಿ, ಈಗ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ 11,000 ಸಾವಿರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದಿದ್ದಾರೆ.

ಮಿಯಾಗಳನ್ನು ಓಲೈಸಲು ವಿರೋಧ ಪಕ್ಷಗಳು ಪೊಲೀಸ್ ದೂರು ದಾಖಲಿಸಿವೆ ಎಂದು ಗೋಸ್ವಾಮಿ ಹೇಳಿದ್ದಾರೆ. ‘ಮಿಯಾ’ ಎಂಬುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅವಹೇಳನಕಾರಿಯಾಗಿ ಸಂಬೋಧಿಸಲು ಬಳಸುವ ಪದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...