Homeಮುಖಪುಟಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

- Advertisement -
- Advertisement -

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್, ರೈಜೋರ್ ದಳ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಪಕ್ಷಗಳು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಸ್ಸಾಂ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ದಿಲೀಪ್ ಸೈಕಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷಗಳು ಹೇಳಿಕೊಂಡಿವೆ ಮತ್ತು ರಾಜ್ಯದ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 60 ಕ್ಷೇತ್ರಗಳಲ್ಲಿ ‘ಬಿಜೆಪಿ ವಿರೋಧಿ ಮತದಾರರ’ ಹೆಸರುಗಳನ್ನು ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಪಿಸಿವೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್)ಯ ಮಧ್ಯೆ ಈ ಆರೋಪಗಳು ಕೇಳಿ ಬಂದಿವೆ.

ಡಿಸೆಂಬರ್ 27ರಂದು, ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆ ಅಡಿಯಲ್ಲಿ ಮನೆ-ಮನೆ ಪರಿಶೀಲನೆಯ ನಂತರ ಅಸ್ಸಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಂತೆ, ಚುನಾವಣಾ ಆಯೋಗವು ಅಸ್ಸಾಂನಲ್ಲಿ ಎಸ್‌ಐಆರ್ ನಡೆಸುತ್ತಿಲ್ಲ. ಬದಲಾಗಿ, ನವೆಂಬರ್ 17ರಂದು, ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ನವೆಂಬರ್ 22 ಮತ್ತು ಡಿಸೆಂಬರ್ 20ರ ನಡುವೆ ರಾಜ್ಯದಲ್ಲಿ ಮನೆ ಮನೆ ಪರಿಶೀಲನೆ ನಡೆದಿದೆ. ವಿಶೇಷ ತೀವ್ರ ಪರಿಷ್ಕರಣೆಯಂತೆ ಈ ಪ್ರಕ್ರಿಯೆಯು ದಾಖಲೆ ಪರಿಶೀಲನೆಯನ್ನು ಒಳಗೊಂಡಿರಲಿಲ್ಲ.

ಜನವರಿ 4ರಂದು ನಡೆದ ಆನ್‌ಲೈನ್ ಸಭೆಯಲ್ಲಿ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರೊಂದಿಗೆ ಸೈಕಿಯಾ ಅವರು ಅಳಿಸುವಿಕೆ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿರೋಧ ಪಕ್ಷಗಳು ಶುಕ್ರವಾರ ತಮ್ಮ ದೂರಿನಲ್ಲಿ ಆರೋಪಿಸಿವೆ.

ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ವಿಶೇಷ ಪರಿಷ್ಕರಣೆಗಾಗಿ ಸಭೆಯ ದೃಶ್ಯಗಳನ್ನು ಪಡೆದುಕೊಳ್ಳಲು ಮತ್ತು ‘ಅಪರಾಧಿಗಳು ಹಾಗೂ ಪಿತೂರಿಗಾರರ’ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷಗಳು ಪೊಲೀಸರನ್ನು ಒತ್ತಾಯಿಸಿವೆ.

ಪ್ರತ್ಯೇಕವಾಗಿ, ರೈಜೋರ್ ದಳದ ಮುಖ್ಯಸ್ಥ ಮತ್ತು ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ಅವರು ಶುಕ್ರವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ‘ಮತದಾರರ ಪಟ್ಟಿ ನಿರ್ವಹಣೆ’ ಉದ್ದೇಶಕ್ಕಾಗಿ ಜನವರಿ 4 ರಂದು ನಡೆದ ಆನ್‌ಲೈನ್ ಸಭೆಯ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

‘ಪ್ರತಿ ಕ್ಷೇತ್ರದ 10,000 ಮತಗಳನ್ನು ಅಳಿಸುವ’ ನಿರ್ದೇಶನಕ್ಕೆ ಸಂಬಂಧಿಸಿದ ಬಿಜೆಪಿ ನಾಯಕತ್ವದ ಎಲ್ಲಾ ಡಿಜಿಟಲ್ ದಾಖಲೆಗಳು ಮತ್ತು ಸಂವಹನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಗೊಗೊಯ್ ಚುನಾವಣಾ ಸಮಿತಿಯನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಲ್ಲಿಸಲಾದ ಫಾರ್ಮ್ 7 ಅರ್ಜಿಗಳ ಲೆಕ್ಕವನ್ನು ಅವರು ಕೋರಿದ್ದು, ಈ ವಿಷಯ ಬಗೆಹರಿಯುವವರೆಗೆ ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ವಿಪಕ್ಷಗಳ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಹೆಸರುಗಳ ಅಳಿಸುವಿಕೆಯನ್ನು ಗೊಗೊಯ್ ತಪ್ಪಾಗಿ ನಿರೂಪಿಸಿದ್ದಾರೆ ಎಂದು ಪಕ್ಷದ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಹೇಳಿದ್ದಾರೆ.

ಗೋಲಾಘಾಟ್ ಜಿಲ್ಲೆಯ ಸರುಪಥರ್ ವಿಧಾನಸಭಾ ಕ್ಷೇತ್ರದ ಉರಿಯಮ್‌ಘಾಟ್‌ನಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯ ನಂತರ 11,000 ಕ್ಕೂ ಹೆಚ್ಚು ಮುಸ್ಲಿಮರನ್ನು ಹೊರಹಾಕಲಾಗಿದೆ. ಹಾಗಾಗಿ, ಈಗ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ 11,000 ಸಾವಿರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದಿದ್ದಾರೆ.

ಮಿಯಾಗಳನ್ನು ಓಲೈಸಲು ವಿರೋಧ ಪಕ್ಷಗಳು ಪೊಲೀಸ್ ದೂರು ದಾಖಲಿಸಿವೆ ಎಂದು ಗೋಸ್ವಾಮಿ ಹೇಳಿದ್ದಾರೆ. ‘ಮಿಯಾ’ ಎಂಬುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅವಹೇಳನಕಾರಿಯಾಗಿ ಸಂಬೋಧಿಸಲು ಬಳಸುವ ಪದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...