Homeಮುಖಪುಟಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

- Advertisement -
- Advertisement -

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್, ರೈಜೋರ್ ದಳ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಪಕ್ಷಗಳು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಸ್ಸಾಂ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ದಿಲೀಪ್ ಸೈಕಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷಗಳು ಹೇಳಿಕೊಂಡಿವೆ ಮತ್ತು ರಾಜ್ಯದ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 60 ಕ್ಷೇತ್ರಗಳಲ್ಲಿ ‘ಬಿಜೆಪಿ ವಿರೋಧಿ ಮತದಾರರ’ ಹೆಸರುಗಳನ್ನು ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಪಿಸಿವೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್)ಯ ಮಧ್ಯೆ ಈ ಆರೋಪಗಳು ಕೇಳಿ ಬಂದಿವೆ.

ಡಿಸೆಂಬರ್ 27ರಂದು, ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆ ಅಡಿಯಲ್ಲಿ ಮನೆ-ಮನೆ ಪರಿಶೀಲನೆಯ ನಂತರ ಅಸ್ಸಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಂತೆ, ಚುನಾವಣಾ ಆಯೋಗವು ಅಸ್ಸಾಂನಲ್ಲಿ ಎಸ್‌ಐಆರ್ ನಡೆಸುತ್ತಿಲ್ಲ. ಬದಲಾಗಿ, ನವೆಂಬರ್ 17ರಂದು, ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ನವೆಂಬರ್ 22 ಮತ್ತು ಡಿಸೆಂಬರ್ 20ರ ನಡುವೆ ರಾಜ್ಯದಲ್ಲಿ ಮನೆ ಮನೆ ಪರಿಶೀಲನೆ ನಡೆದಿದೆ. ವಿಶೇಷ ತೀವ್ರ ಪರಿಷ್ಕರಣೆಯಂತೆ ಈ ಪ್ರಕ್ರಿಯೆಯು ದಾಖಲೆ ಪರಿಶೀಲನೆಯನ್ನು ಒಳಗೊಂಡಿರಲಿಲ್ಲ.

ಜನವರಿ 4ರಂದು ನಡೆದ ಆನ್‌ಲೈನ್ ಸಭೆಯಲ್ಲಿ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರೊಂದಿಗೆ ಸೈಕಿಯಾ ಅವರು ಅಳಿಸುವಿಕೆ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿರೋಧ ಪಕ್ಷಗಳು ಶುಕ್ರವಾರ ತಮ್ಮ ದೂರಿನಲ್ಲಿ ಆರೋಪಿಸಿವೆ.

ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ವಿಶೇಷ ಪರಿಷ್ಕರಣೆಗಾಗಿ ಸಭೆಯ ದೃಶ್ಯಗಳನ್ನು ಪಡೆದುಕೊಳ್ಳಲು ಮತ್ತು ‘ಅಪರಾಧಿಗಳು ಹಾಗೂ ಪಿತೂರಿಗಾರರ’ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷಗಳು ಪೊಲೀಸರನ್ನು ಒತ್ತಾಯಿಸಿವೆ.

ಪ್ರತ್ಯೇಕವಾಗಿ, ರೈಜೋರ್ ದಳದ ಮುಖ್ಯಸ್ಥ ಮತ್ತು ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ಅವರು ಶುಕ್ರವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ‘ಮತದಾರರ ಪಟ್ಟಿ ನಿರ್ವಹಣೆ’ ಉದ್ದೇಶಕ್ಕಾಗಿ ಜನವರಿ 4 ರಂದು ನಡೆದ ಆನ್‌ಲೈನ್ ಸಭೆಯ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

‘ಪ್ರತಿ ಕ್ಷೇತ್ರದ 10,000 ಮತಗಳನ್ನು ಅಳಿಸುವ’ ನಿರ್ದೇಶನಕ್ಕೆ ಸಂಬಂಧಿಸಿದ ಬಿಜೆಪಿ ನಾಯಕತ್ವದ ಎಲ್ಲಾ ಡಿಜಿಟಲ್ ದಾಖಲೆಗಳು ಮತ್ತು ಸಂವಹನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಗೊಗೊಯ್ ಚುನಾವಣಾ ಸಮಿತಿಯನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಲ್ಲಿಸಲಾದ ಫಾರ್ಮ್ 7 ಅರ್ಜಿಗಳ ಲೆಕ್ಕವನ್ನು ಅವರು ಕೋರಿದ್ದು, ಈ ವಿಷಯ ಬಗೆಹರಿಯುವವರೆಗೆ ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ವಿಪಕ್ಷಗಳ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಹೆಸರುಗಳ ಅಳಿಸುವಿಕೆಯನ್ನು ಗೊಗೊಯ್ ತಪ್ಪಾಗಿ ನಿರೂಪಿಸಿದ್ದಾರೆ ಎಂದು ಪಕ್ಷದ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಹೇಳಿದ್ದಾರೆ.

ಗೋಲಾಘಾಟ್ ಜಿಲ್ಲೆಯ ಸರುಪಥರ್ ವಿಧಾನಸಭಾ ಕ್ಷೇತ್ರದ ಉರಿಯಮ್‌ಘಾಟ್‌ನಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯ ನಂತರ 11,000 ಕ್ಕೂ ಹೆಚ್ಚು ಮುಸ್ಲಿಮರನ್ನು ಹೊರಹಾಕಲಾಗಿದೆ. ಹಾಗಾಗಿ, ಈಗ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ 11,000 ಸಾವಿರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದಿದ್ದಾರೆ.

ಮಿಯಾಗಳನ್ನು ಓಲೈಸಲು ವಿರೋಧ ಪಕ್ಷಗಳು ಪೊಲೀಸ್ ದೂರು ದಾಖಲಿಸಿವೆ ಎಂದು ಗೋಸ್ವಾಮಿ ಹೇಳಿದ್ದಾರೆ. ‘ಮಿಯಾ’ ಎಂಬುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅವಹೇಳನಕಾರಿಯಾಗಿ ಸಂಬೋಧಿಸಲು ಬಳಸುವ ಪದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...