Homeಮುಖಪುಟತಮಿಳುನಾಡಿನಲ್ಲಿ ತೀವ್ರ ಮಳೆಗೆ ಐವರ ಸಾವು: ನ.11ರವರೆಗೆ ರೆಡ್‌ ಅಲರ್ಟ್‌ ಘೋಷಣೆ

ತಮಿಳುನಾಡಿನಲ್ಲಿ ತೀವ್ರ ಮಳೆಗೆ ಐವರ ಸಾವು: ನ.11ರವರೆಗೆ ರೆಡ್‌ ಅಲರ್ಟ್‌ ಘೋಷಣೆ

2015ರ ಪ್ರವಾಹದ ನಂತರ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಚೆನ್ನೈ ಕಾರ್ಪೊರೇಷನ್‌ ಅನ್ನು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸತತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡಿನಲ್ಲಿ ಮುಂದಿನ ಮೂರು ದಿನಗಳವರೆ (ನವೆಂಬರ್‌ 11) ರೆಡ್‌ ಅಲರ್ಟ್‌ ಘೋಷಿಸಿದೆ.

ಮಂಗಳವಾರ ಮಧ್ಯಾಹ್ನ ಬುಲೆಟಿನ್‌ ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯು ಅದರಲ್ಲಿ, ‘ತಮಿಳುನಾಡಿನ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಹಾಗೂ ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ’ ಎಂದು ತಿಳಿಸಿದೆ.

ರಾಜ್ಯಾದ್ಯಂತ ಮಳೆ ಹಾಗೂ ಮಳೆಯಿಂದ ಉಂಟಾದ ಸಮಸ್ಯೆಯಿಂದಾಗಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. 538 ಗುಡಿಸಲುಗಳು ಮತ್ತು ನಾಲ್ಕು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ನವೆಂಬರ್ 11 (ಗುರುವಾರ)ದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 11 ರ ವೇಳೆಗೆ ಈ ಈ ವಾಯುಭಾರ ಕುಸಿತವು ತೀವ್ರಗೊಳ್ಳಲಿದ್ದು, ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಇಲಾಖೆಯು ತಿಳಿಸಿದೆ.

ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿದ್ದು, ಸಂಚಾರ ವ್ಯತ್ಯಯ, ಭೂಕುಸಿತಗಳು/ಮಣ್ಣು ಕುಸಿತ ಹಾಗೂ ಬೆಳೆಗಳಿಗೆ ಹಾನಿಯಾಗಿದೆ.

ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮೀನುಗಾರರು ನವೆಂಬರ್‌ 11ರವರೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ಚೆನ್ನೈ ಕಾರ್ಪೊರೇಷನ್‌ ಅನ್ನು ತರಾಟೆಗೆ ತೆಗೆದುಕೊಂಡ ಮದ್ರಾಸ್‌ ಹೈಕೋರ್ಟ್‌

ಈ ನಡುವೆ ನಗರದಲ್ಲಿ ಜಲಾವೃತ ಪರಿಸ್ಥಿತಿಯ ಬಗ್ಗೆ ಚೆನ್ನೈ ಕಾರ್ಪೊರೇಷನ್‌ ಅನ್ನು ತರಾಟೆಗೆ ತೆಗೆದುಕೊಂಡಿರುವ ಮದ್ರಾಸ್‌ ಹೈಕೋರ್ಟ್‌, ‘ಮಳೆಗಾಲದಲ್ಲಿ ಪ್ರವಾಹವನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವಲ್ಲಿ ಕಾರ್ಪೊರೇಷನ್‌ ವಿಫಲವಾಗಿದೆ’ ಎಂದಿದೆ.

2015ರ ಪ್ರವಾಹದ ನಂತರ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಿಗಮವನ್ನು ಪ್ರಶ್ನಿಸಿದ ಹೈಕೋರ್ಟ್, ಪರಿಸ್ಥಿತಿಯನ್ನು ಹತೋಟಿಗೆ ತರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಇದನ್ನು ಓದಿ: ಮಳೆಹಾನಿಗೀಡಾದ ರೈತರಿಗೆ ಕೂಡಲೆ ಪರಿಹಾರ ನೀಡಿ: ಪಂಜಾಬ್ ಸಿಎಂಗೆ ಕೇಜ್ರಿವಾಲ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...