Homeಮುಖಪುಟಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಸ್‌ಪಿ ಸೇರಿ 5 ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಆರಂಭಿಕ ವರದಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಎಸ್‌ಪಿ ಮತ್ತು ಇತರೆ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡ (SIT) ಆದೇಶಸಿತ್ತು.

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ:ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಎರಡು ವಾರಗಳ ನಂತರ ಯುವತಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ನಂತರ ಆಕೆಯ ದೇಹವನ್ನು ಪೊಲೀಸರು ಮಧ್ಯರಾತ್ರಿಯೇ ಯುವತಿಯ ಕುಟುಂಬವನ್ನೂ ಅನುಮತಿಸಿದೇ ಸುಟ್ಟುಹಾಕಿದ್ದರು. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದಿನವರೆಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಮುಂದೆಯೇ ಪ್ರತಿಭಟನೆ ನಡೆಸಿ, ಇದನ್ನು 2012ರ ನಿರ್ಭಯಾ ಪ್ರಕರಣದೊಂದಿಗೆ ಸಮೀಕರಿಸಿ ತಮ್ಮ ಆಕ್ರೋಶವನ್ನು ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಹೊರಹಾಕಿದ್ದರು. ನಿನ್ನೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಭೀಮ್ ಆರ್ಮಿಯ ಹೋರಾಟಗಾರರು ಸೇರಿದಂತೆ ನೂರಾರು ನಾಗರೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಪ್ರಸ್ತುತ ಉತ್ತರಪ್ರದೇಶದ ಸ್ಥಿತಿ ಪ್ರಕ್ಷುಬ್ದ ವಾತಾವರಣದಲ್ಲಿದ್ದು, ಮಾಧ್ಯಮ ಸೇರಿದಂತೆ ಯಾವುದೇ ರಾಜಕಾರಣಿಗಳನ್ನೂ ಸಂತ್ರಸ್ತೆಯ ಕುಟುಂಬದ ಭೇಟಿಗೆ ಅನುಮತಿಸುತ್ತಿಲ್ಲ. ಗುರುವಾರ ಅವರ ಭೇಟಿಗಾಗಿ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಟ್ಟಿಗೆ ಯುಪಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ನಿನ್ನೆ ಸಂತ್ರಸ್ತೆಯ ಸಹೋದರನೊಬ್ಬ ಯುಪಿ ಪೊಲೀಸರ ಗೃಹಬಂಧನದಿಂದ ತಪ್ಪಿಸಿಕೊಂಡು ಬಂದು, ಜಿಲ್ಲಾಡಳಿತ ಮತ್ತು ಪೊಲೀಸರು ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದ. ಇನ್ನು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ವಕೀಲೆ ಸೀಮಾ ಅವರನ್ನೂ ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ವಿಷಯವನ್ನು ಸ್ವಯಂ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿದೆ.

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಇದರ ನಡುವೆ ನಿನ್ನೆ, ಆದಿತ್ಯನಾಥ್, “ತಮ್ಮ ಸರ್ಕಾರ ಮಹಿಳೆಯರ ಸ್ವಾಭಿಮಾನವನ್ನು ಕಾಪಾಡಲು ಬದ್ಧ” ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಹತ್ರಾಸ್ ಜಿಲ್ಲೆಯಾದ್ಯಂತ ಒಂದು ತಿಂಗಳವರೆಗೆ ನಿಷೇದಾಜ್ಞೆಯನ್ನು ಹೇರಲಾಗಿದ್ದು, ವಿರೋಧ ಪಕ್ಷ ಸೇರಿದಂತೆ ದೇಶದ ಮಾಧ್ಯಮಗಳು ಮತ್ತು ಹಲವು ಜನರು ಇದನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.


ಇದನ್ನೂ ಓದಿ: ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...