Homeಮುಖಪುಟಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಸ್‌ಪಿ ಸೇರಿ 5 ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಆರಂಭಿಕ ವರದಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಎಸ್‌ಪಿ ಮತ್ತು ಇತರೆ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡ (SIT) ಆದೇಶಸಿತ್ತು.

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ:ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಎರಡು ವಾರಗಳ ನಂತರ ಯುವತಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ನಂತರ ಆಕೆಯ ದೇಹವನ್ನು ಪೊಲೀಸರು ಮಧ್ಯರಾತ್ರಿಯೇ ಯುವತಿಯ ಕುಟುಂಬವನ್ನೂ ಅನುಮತಿಸಿದೇ ಸುಟ್ಟುಹಾಕಿದ್ದರು. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದಿನವರೆಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಮುಂದೆಯೇ ಪ್ರತಿಭಟನೆ ನಡೆಸಿ, ಇದನ್ನು 2012ರ ನಿರ್ಭಯಾ ಪ್ರಕರಣದೊಂದಿಗೆ ಸಮೀಕರಿಸಿ ತಮ್ಮ ಆಕ್ರೋಶವನ್ನು ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಹೊರಹಾಕಿದ್ದರು. ನಿನ್ನೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಭೀಮ್ ಆರ್ಮಿಯ ಹೋರಾಟಗಾರರು ಸೇರಿದಂತೆ ನೂರಾರು ನಾಗರೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಪ್ರಸ್ತುತ ಉತ್ತರಪ್ರದೇಶದ ಸ್ಥಿತಿ ಪ್ರಕ್ಷುಬ್ದ ವಾತಾವರಣದಲ್ಲಿದ್ದು, ಮಾಧ್ಯಮ ಸೇರಿದಂತೆ ಯಾವುದೇ ರಾಜಕಾರಣಿಗಳನ್ನೂ ಸಂತ್ರಸ್ತೆಯ ಕುಟುಂಬದ ಭೇಟಿಗೆ ಅನುಮತಿಸುತ್ತಿಲ್ಲ. ಗುರುವಾರ ಅವರ ಭೇಟಿಗಾಗಿ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಟ್ಟಿಗೆ ಯುಪಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ನಿನ್ನೆ ಸಂತ್ರಸ್ತೆಯ ಸಹೋದರನೊಬ್ಬ ಯುಪಿ ಪೊಲೀಸರ ಗೃಹಬಂಧನದಿಂದ ತಪ್ಪಿಸಿಕೊಂಡು ಬಂದು, ಜಿಲ್ಲಾಡಳಿತ ಮತ್ತು ಪೊಲೀಸರು ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದ. ಇನ್ನು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ವಕೀಲೆ ಸೀಮಾ ಅವರನ್ನೂ ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ವಿಷಯವನ್ನು ಸ್ವಯಂ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿದೆ.

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಇದರ ನಡುವೆ ನಿನ್ನೆ, ಆದಿತ್ಯನಾಥ್, “ತಮ್ಮ ಸರ್ಕಾರ ಮಹಿಳೆಯರ ಸ್ವಾಭಿಮಾನವನ್ನು ಕಾಪಾಡಲು ಬದ್ಧ” ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಹತ್ರಾಸ್ ಜಿಲ್ಲೆಯಾದ್ಯಂತ ಒಂದು ತಿಂಗಳವರೆಗೆ ನಿಷೇದಾಜ್ಞೆಯನ್ನು ಹೇರಲಾಗಿದ್ದು, ವಿರೋಧ ಪಕ್ಷ ಸೇರಿದಂತೆ ದೇಶದ ಮಾಧ್ಯಮಗಳು ಮತ್ತು ಹಲವು ಜನರು ಇದನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.


ಇದನ್ನೂ ಓದಿ: ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...