Homeಮುಖಪುಟಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿಗೆ ಕಾಂಗ್ರೆಸ್‌ನ 5 ಪ್ರಶ್ನೆಗಳು

ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿಗೆ ಕಾಂಗ್ರೆಸ್‌ನ 5 ಪ್ರಶ್ನೆಗಳು

- Advertisement -
- Advertisement -

ವಿಶ್ವವು ಇಂದು ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುತ್ತಿರುವಾಗ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಗುರಿಯಾಗಿಟ್ಟುಕೊಂಡು ಭಾರತದಾದ್ಯಂತ ಮಹಿಳೆಯರ ಸಮಸ್ಯೆಗಳ ಬಗ್ಗೆ ನಿರ್ಣಾಯಕ ಪ್ರಶ್ನೆಗಳನ್ನು ಎತ್ತುವ ಮೊನಚಾದ ಹೇಳಿಕೆ ನೀಡಿದ್ದಾರೆ.

ಎಐಸಿಸಿ ಸಂವಹನದ ಉಸ್ತುವಾರಿ ವಹಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಣಿಪುರದ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುವುದರ ಮೂಲಕ ತಮ್ಮ ಮಾತು ಪ್ರಾರಂಭಿಸಿದರು.

‘ರಾಜ್ಯ ಮತ್ತು ಕೇಂದ್ರದ ಬಿಜೆಪಿಯ ಡಬಲ್-ಅನ್ಯಾಯ ಆಡಳಿತವನ್ನು ಅನುಭವಿಸುತ್ತಿರುವ ರಾಜ್ಯದಲ್ಲಿ ಮಹಿಳೆಯರ ಮೇಲೆ ಹಲ್ಲೆ ಮತ್ತು ಬೆತ್ತಲೆ ಮೆರವಣಿಗೆ ಮಾಡುವ ವೀಡಿಯೊಗಳು ಹೊರಹೊಮ್ಮಿವೆ. ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಏಕೆ ತಲೆ ಕೆಡಿಸಿಕೊಂಡಿಲ್ಲ’ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ಮೋದಿ ಮೌನವನ್ನು ರಮೇಶ್ ಪ್ರಶ್ನಿಸಿದ್ದಾರೆ.

‘ಈ ವಿಷಯದಲ್ಲಿ ಪ್ರಧಾನಿಯವರ ನಿಲುವು ಏನು? ಮೋದಿ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ‘ಮೋದಿ ಕಾ ಪರಿವಾರ್’ ಸದಸ್ಯ ಎಂದು ಪರಿಗಣಿಸುತ್ತಾರೆಯೇ’ ಎಂದು ರಮೇಶ್ ಅವರು ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ರಮೇಶ್ ಆರೋಪಿಸಿದರು. ಕುಟುಂಬಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಪ್ರಧಾನ ಮಂತ್ರಿಯ ಯೋಜನೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

‘ಮೋದಿ ಹೈ ತೋ ಮೆಹೆಂಗೈ ಹೈ! ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ. ಈ ಬೆಲೆ ಏರಿಕೆಯ ಸಂಕಷ್ಟದಿಂದ ಕುಟುಂಬಗಳನ್ನು ರಕ್ಷಿಸುವ ಯೋಜನೆಯನ್ನು ಪ್ರಧಾನಿ ಹೊಂದಿದ್ದಾರೆಯೇ’ ಎಂದು ಅವನುರುಅ ಬರೆದುಕೊಂಡಿದ್ದಾರೆ.

ಮೋದಿಯವರ ಆಡಳಿತವನ್ನು ‘ಅನ್ಯಾಯ ಕಾಲ’ (ಅನ್ಯಾಯದ ಯುಗ) ಎಂದು ಬಣ್ಣಿಸಿದ ರಮೇಶ್, ಮಹಿಳಾ ಉದ್ಯೋಗಾಕಾಂಕ್ಷಿಗಳ ಮೇಲೆ ಹೆಚ್ಚಿನ ನಿರುದ್ಯೋಗ ದರದ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

‘ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಶೇಕಡಾವಾರು ಪ್ರಮಾಣವು ಈಗ ಡಾ. ಮನಮೋಹನ್ ಸಿಂಗ್ ಅವರ ಅಡಿಯಲ್ಲಿದ್ದಕ್ಕಿಂತ 20% ಕಡಿಮೆಯಾಗಿದೆ. ಇದು ಆರ್ಥಿಕತೆಯ ದೀರ್ಘಾವಧಿಯ ಸಾಮರ್ಥ್ಯವನ್ನು ದುರ್ಬಲಗೊಳಿಸಬಹುದು. ಮಹಿಳೆಯರನ್ನು ಮತ್ತೆ ಆರ್ಥಿಕ ಮುಖ್ಯವಾಹಿನಿಗೆ ತರಲು ಪ್ರಧಾನಿ ಬಳಿ ಪರಿಹಾರವಿದೆಯೇ’ ಎಂದು ಪ್ರಶ್ನಿಸಿದ್ದಾರೆ.

“ಬೇಟಿ ಬಚಾವೋ ಬೇಟಿ ಪಢಾವೋ” ಯೋಜನೆಯ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ, ಹೆಣ್ಣು ಶಿಶುಹತ್ಯೆ ಮತ್ತು ಶಿಕ್ಷಣವನ್ನು ಉತ್ತೇಜಿಸುವ ಅರ್ಥಪೂರ್ಣ ಉಪಕ್ರಮಗಳಿಗಿಂತ ಅದರ ಬಜೆಟ್‌ನ ಗಮನಾರ್ಹ ಭಾಗವನ್ನು ಜಾಹೀರಾತುಗಳಿಗೆ ಮೀಸಲಿಡಲಾಗಿದೆ ಎಂದು ಆರೋಪಿಸಿದರು.

‘ಹೆಣ್ಣು ಶಿಶು ಹತ್ಯೆಯನ್ನು ನಿಲ್ಲಿಸಲು ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಪ್ರಧಾನ ಮಂತ್ರಿಗೆ ಹೆಚ್ಚು ಅರ್ಥಪೂರ್ಣ ದೃಷ್ಟಿ ಇದೆಯೇ? ಅಥವಾ ಈ ಸಮಸ್ಯೆಯು ಜಾಹೀರಾತಿನಲ್ಲಿ ಅವರ ಮುಖವನ್ನು ಹೊಡೆಯಲು ಮತ್ತು ತನ್ನನ್ನು ತಾನೇ ಬ್ರ್ಯಾಂಡ್ ಮಾಡಿಕೊಳ್ಳಲು ಅವರಿಗೆ ಇನ್ನೊಂದು ಮಾರ್ಗವನ್ನು ನೀಡಲು ಮತ್ತೊಂದು ಅವಕಾಶವೇ’ ಎಂದು ಅವರು ಕೇಳಿದ್ದಾರೆ.

‘ಭಾರತದ ಮಹಿಳೆಯರು ಉತ್ತರಗಳನ್ನು ಕೇಳುತ್ತಾರೆ ಮತ್ತು ಅದಕ್ಕೆ ಅವರೆಲ್ಲಾ ಅರ್ಹರು. ಬಿಜೆಪಿ ಹಟಾವೋ, ಬೇಟಿ ಬಚಾವೋ!’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ| ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೃತದೇಹ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...