Homeಮುಖಪುಟ5 ರಫೇಲ್ ಯುದ್ಧವಿಮಾನಗಳ ಆಗಮನ: ಚೀನಾ ಹೆಸರಿಸದೆ ಎಚ್ಚರಿಕೆ ಕೊಟ್ಟ ರಾಜನಾಥ್‌ಸಿಂಗ್

5 ರಫೇಲ್ ಯುದ್ಧವಿಮಾನಗಳ ಆಗಮನ: ಚೀನಾ ಹೆಸರಿಸದೆ ಎಚ್ಚರಿಕೆ ಕೊಟ್ಟ ರಾಜನಾಥ್‌ಸಿಂಗ್

- Advertisement -
- Advertisement -

ತೀವ್ರ ವಿವಾದ ಸೃಷ್ಟಿಸಿದ್ದ ರಫೇಲ್ ಯುದ್ದ ವಿಮಾನಗಳನ್ನು ಅಂಬಾಲದ ಭಾರತೀಯ ವಾಯುನೆಲೆ ನಿಲ್ದಾಣಕ್ಕೆ ಯಶಸ್ವಿಯಾಗಿ ಇಳಿಸಲಾಯಿತು. ಮೊದಲ ಬ್ಯಾಚ್‌ನ ಐದು ಯುದ್ದ ವಿಮಾನಗಳ ಸೇರ್ಪಡೆ ಮೂಲಕ ಭಾರತೀಯ ವಾಯುಪಡೆಗೆ ಬಲ ಬಂದಂತಾಗಿದೆ ಎಂದು ಹೇಳಲಾಗುತ್ತಿದೆ.

ಭಾರತಕ್ಕೆ ರಫೇಲ್‌ ವಿಮಾನಗಳ ಆಗಮನವು ಸರಿಯಾದ ಸಮಯಕ್ಕೆ ಐಎಎಫ್‌ನ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಿದೆ. ನಮ್ಮ ದೇಶಕ್ಕೆ ಎದುರಾಗಬಹುದಾದ ಯಾವುದೇ ಬೆದರಿಕೆಯನ್ನು ತಡೆಯಲು ಇದು ಬಲಶಾಲಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮೊದಲ ಫೈಟರ್ ಜೆಟ್ ಅನ್ನು ಔಪಚಾರಿಕವಾಗಿ ಸ್ವೀಕರಿಸಲು ಕಳೆದ ವರ್ಷ ಫ್ರಾನ್ಸ್‌ಗೆ ಪ್ರಯಾಣಿಸಿದ್ದ ಸಿಂಗ್, ಬಹು-ಪಾತ್ರದ ವಿಮಾನದ ಸಾಮಥ್ರ್ಯದ ಬಗ್ಗೆ ಮತ್ತು 36 ಫೈಟರ್ ಜೆಟ್‌ಗಳನ್ನು ಖರೀದಿಸುವ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿದ್ದಾರೆ.

ಚೀನಾವನ್ನು ಹೆಸರಿಸದೆ ಲೈನ್‌ ಆಫ್‌ ಕಂಟ್ರೋಲ್‌ನಲ್ಲಿ ತಂಟೆ ಮಾಡುವವರಿಗೆ ಇನ್ನು ಮುಂದೆ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

“ಐಎಎಫ್‌ನ ಕಾರ್ಯಾಚರಣೆಯ ಅವಶ್ಯಕತೆಗಳನ್ನು ಸಂಪೂರ್ಣವಾಗಿ ಪೂರೈಸುವ ರಫೇಲ್ ಜೆಟ್‌ಗಳನ್ನು ಖರೀದಿಸಲಾಗಿದೆ. ಈ ಪ್ರಕ್ರಿಯೆಯ ವಿರುದ್ಧದ ಆಧಾರರಹಿತ ಆರೋಪಗಳಿಗೆ ಈಗಾಗಲೇ ಉತ್ತರಿಸಲಾಗಿದೆ ಮತ್ತು ಇತ್ಯರ್ಥಪಡಿಸಲಾಗಿದೆ” ಎಂದು ರಾಜನಾಥ್‌ ಸಿಂಗ್‌ ಟ್ವೀಟ್ ಮಾಡಿದ್ದಾರೆ.

“ಯಾರಾದರೂ ಭಾರತೀಯ ವಾಯುಪಡೆಯ ಈ ಹೊಸ ಸಾಮರ್ಥ್ಯದ ಬಗ್ಗೆ ಸಂಶಯಪಟ್ಟರೆ ಅವರು ನಮ್ಮ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರಲು ಬಯಸುವವರು ಆಗಿರಬೇಕು” ಎಂದು ಅವರು ಕಿಡಿಕಾರಿದ್ದಾರೆ.

ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಫೇಲ್ ಫೈಟರ್ ಜೆಟ್ ವಿಮಾನಗಳು ಇಂದು ಮಧ್ಯಾಹ್ನ 2 ಗಂಟೆಗೆ ಹರಿಯಾಣ ರಾಜ್ಯದ ಅಂಬಾಲಾ ವಾಯುಪಡೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಹೀಗಾಗಿ ಅಂಬಾಲಾ ಜಿಲ್ಲಾಡಳಿತವು ವಾಯುಪಡೆ ನಿಲ್ದಾಣಕ್ಕೆ ಹೋಗುವ ರಸ್ತೆಗಳನ್ನು ಸಂಜೆ 5 ಗಂಟೆಯವರೆಗೆ ನಿಷೇಧಿಸಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...