Homeಮುಖಪುಟಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

- Advertisement -
- Advertisement -

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ‘ದಿ ವೈರ್’ ನಡೆಸಿದ ಸಂದರ್ಶನದಲ್ಲಿ ಕರಣ್ ಥಾಪರ್ ಪ್ರಶ್ನೆಗಳಿಗೆ ನೀಡಿರುವ ಮಾಹಿತಿ ಇಡೀ ಭಾರತವನ್ನೇ ದಂಗು ಬಡಿಸಿದೆ. ಹೌದು, ಭಾರತದ ಯೋಧರು ಫುಲ್ವಾಮ ಬಳಿ ಉಗ್ರರ ದಾಳಿಗೆ ಹತರಾಗಿದ್ದರು. ಭಾರತೀಯರ ನೆಮ್ಮದಿಗಾಗಿ ಹಗಲೂರಾತ್ರಿ ಗಡಿಗಳಲ್ಲಿ ಚಳಿ, ಮಳೆ, ಗಾಳಿ, ಬಿಸಿಲೆನ್ನದೆ ದುಡಿಯುವ 40 ಯೋಧರ ದೇಹದ ಭಾಗಗಳೂ ಸಿಗದಂತೆ ಸೂಸೈಡ್ ಬಾಂಬರ್ ಉಗ್ರನೊಬ್ಬ ಆಸ್ಪೋಟಿಸಿದ್ದನು. ಕುಟುಂಬದವರಿಗೆ ತಮ್ಮ ಮನೆ ಮಗನ ಮುಖ ನೋಡಲೂ ಆಗಲಿಲ್ಲ. ಆ ಪಾಪಿ ಉಗ್ರ ಸ್ಪೋಟಕ ಬಾಂಬ್ ಅನ್ನು ಯೋಧರ ಹತ್ತಿರದವರೆಗೂ ಹೇಗೆ ತಂದನು? ಆ ಸ್ಪೋಟಕಗಳನ್ನು ಎಲ್ಲಿಂದ, ಹೇಗೆ ತಂದನು? ಎಂಬ ಪ್ರಶ್ನೆಗಳನ್ನು ಕೇಳಿದವರನ್ನು ದೇಶದ್ರೋಹಿಗಳೆಂದರು. ಇರಲಿ ಅದೆಲ್ಲವನ್ನೂ ಮರೆತುಬಿಡೋಣ. ಆ 40 ಯೋಧರ ಪ್ರಾಣ ಹಾಗೂ ಆ ಕುಟುಂಬಗಳ ಕಣ್ಣೀರ ಮುಂದೆ ನಮ್ಮನ್ನು ನಿಂದಿಸಿದ್ದು ಯಾವ ಲೆಕ್ಕ?

ಗವರ್ನರ್ ಸತ್ಯಪಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ಮೇಲೆ ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳನ್ನೊಮ್ಮೆ ನೋಡೋಣ.

1. ಪುಲ್ವಾಮ ದಾಳಿ ನಡೆದ ದಿನ ಅಂದರೆ ಫೆಬ್ರವರಿ 14, 2019 ಕ್ಕೂ ಮುಂಚೆ ಜಮ್ಮು-ಕಾಶ್ಮೀರದ ಹಳ್ಳಿಗಳಲ್ಲಿ ರಸ್ತೆಯ ಮೇಲೆ ಸುಮಾರು 10 ರಿಂದ 12 ದಿನಗಳವರೆಗೆ 300 ಕೆ.ಜಿ. ಆರ್.ಡಿ.ಎಕ್ಸ್ ಬಾಂಬ್ ಅನ್ನು ಇರಿಸಿಕೊಂಡು ಉಗ್ರ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದನು.

2. ಪುಲ್ವಾಮ ಮಾರ್ಗವಾಗಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಯೋಧರ ತಂಡವು ಮೊದಲು ಮೋದಿಯವರ ಸರ್ಕಾರವನ್ನು ಗೃಹ ಇಲಾಖೆಯ ಮೂಲಕ ಸಂಪರ್ಕಿಸಿ ಸ್ಥಳಾಂತರಕ್ಕಾಗಿ ‘5 ವಿಮಾನಗಳನ್ನು’  ನೀಡಬೇಕೆಂದು ಕೇಳಿಕೊಂಡಿತ್ತು. ಅಷ್ಟೂ ಯೋಧರನ್ನು ಸ್ಥಳಾಂತರಿಸಲು 5 ಹೆಲಿಕಾಪ್ಟರ್‌ಗಳು ಸಾಕಾಗಿದ್ದವು. ಆದರೆ ದುರಂತವೆಂದರೆ ರಾಜನಾಥ್ ಸಿಂಗ್ ನೇತೃತ್ವದ ಗೃಹ ಇಲಾಖೆಯು ಹೆಲಿಕಾಪ್ಟರ್ ನೀಡಲು ನಿರಾಕರಿಸಿತು. ಇದರ ಪರಿಣಾಮದಿಂದಾಗಿ ಪುಲ್ವಾಮ ರಸ್ತೆಯಲ್ಲಿ 40 ಯೋಧರು ಬರುವಂತಾಯಿತು.

3. ಯೋಧರು ಸಂಚರಿಸುತ್ತಿದ್ದ ಆ ಪುಲ್ವಾಮ ರಸ್ತೆಯಲ್ಲಿ 8 ರಿಂದ 10 ಲಿಂಕ್ ರಸ್ತೆಗಳಿವೆ. ಯೋಧರು ಪಯಣಿಸುವಾಗ ಈ ಲಿಂಕ್ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ತಡೆಗಟ್ಟಿ ನಿಲ್ಲಿಸುವ ಅಥವಾ ತಪಾಸಣೆ ಮಾಡುವ ವ್ಯವಸ್ಥೆ ಸಹಜವಾಗಿ ಇರುತ್ತದೆ. ಆದರೆ ದಾಳಿ ನಡೆದ ದಿನದಂದು ಲಿಂಕ್ ರಸ್ತೆಗಳ ಬಳಿ ತಪಾಸಣೆ ನಡೆಸುವ ಒಬ್ಬರೂ ಇರಲಿಲ್ಲ. ಅಷ್ಟೂ ಲಿಂಕ್ ರಸ್ತೆಗಳು ಮುಕ್ತವಾಗಿದ್ದವು.

4. ಈ ವಿಷಯವನ್ನು ತಿಳಿಸಲು ಅಂದಿನ ಜಮ್ಮು-ಕಾಶ್ಮೀರ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿಯವರಿಗೆ ಕರೆ ಮಾಡಿದಾಗ ಪ್ರಧಾನಿಗಳು ಉತ್ತರಖಂಡದ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿ ಡಿಸ್ಕವರಿ ಚಾನಲ್‌ನ ‘ಮ್ಯಾನ್ ವರ್ಸಸ್ ವೈಲ್ಡ್’ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಫುಲ್ವಾಮಾ ಧಾಳಿ ಅಪರಾಹ್ನ 3:15 ರ ಸುಮಾರಿಗೆ ನಡೆದಿತ್ತು. ಮೋದಿಯವರು ರಾತ್ರಿ ಸುಮಾರು 7:00 ಗಂಟೆಗೆ ಸಂಪರ್ಕಕ್ಕೆ ಬಂದು ವಿಚಾರಿಸಿದರು. ಆಗ ಸತ್ಯಪಾಲ್ ಮಲಿಕ್, ‘ಇದೆಲ್ಲವೂ ನಮ್ಮ ಸರ್ಕಾರದ ಕರ್ತವ್ಯ ಲೋಪದಿಂದ ಆಗಿದೆ. ಗುಪ್ತಚರ ಇಲಾಖೆ, ಗೃಹ ಇಲಾಖೆಯ ವೈಫಲ್ಯದಿಂದ ಈ ಅನಾಹುತ ಸಂಭವಿಸಿದೆ’ ಎಂದು ಹೇಳಿದಾಗ ಪ್ರಧಾನಿ ಮೋದಿಯವರು ‘ಈ ವಿಷಯದ ಬಗ್ಗೆ ತುಟಿ ಬಿಚ್ಚಬೇಡ’ ಎಂದು ಅವರಿಗೆ ಹೇಳಿದರಂತೆ.

5. ಮೋದಿ ಸರ್ಕಾರ ಇದನ್ನು ಮುಚ್ಚಿಟ್ಟಿದ್ದಕ್ಕೆ ಬೇರೆಯದೇ ಕಾರಣವಿರುತ್ತದೆ ಎಂದ ಮಲಿಕ್ ಯಾವುದಕ್ಕೆಂದು ನೇರವಾಗಿ ಬಾಯಿಬಿಟ್ಟಿಲ್ಲ. ಆದರೆ ಆಗ 2019 ರ ಲೋಕಸಭಾ ಚುನಾವಣೆ ಇತ್ತೆಂಬುದನ್ನು ಎಲ್ಲರಿಗೂ ಗೊತ್ತಿರುವ ವಿಷಯ.

6. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಳಿಯೂ ಇದರ ಬಗ್ಗೆ ಮಲಿಕ್ ಪ್ರಸ್ತಾಪ ಮಾಡಿದಾಗ ‘ಇದರ ಬಗ್ಗೆ ಮಾತಾಡಬೇಡ, ನಾವಲ್ಲಿಗೆ ಬಂದು ಸರಿಯಾದ ನಿರೂಪಣೆ ನೀಡುತ್ತೇವೆ’ ಎಂದಿದ್ದರಂತೆ.

ಈ ಮೇಲಿನ ಸತ್ಯಪಾಲ್ ಮಲಿಕ್ ನೀಡಿರುವ ಮಾಹಿತಿಯನ್ನು ಕೇಳಿಸಿಕೊಂಡವರಿಗೆ ಎದೆ ಜಲ್ಲೆನ್ನದೇ ಇರಲಾರದು. ಇವು ಹಾದಿ ಬೀದಿಯಲ್ಲಿ ಗಾಳಿ ಸುದ್ಧಿಗಳನ್ನು ಹರಡುವ ಪುಡಾರಿಯ ಮಾತುಗಳಲ್ಲ. ಮೋದಿಯವರ ಸರ್ಕಾರವೇ ನೇಮಿಸಿದ್ದ ಜಮ್ಮು-ಕಾಶ್ಮೀರದ ಅಂದಿನ ರಾಜ್ಯಪಾಲರ ಮಾತು. ಜಮ್ಮು-ಕಾಶ್ಮೀರದ 370 ರ ಸ್ಥಾನವನ್ನು ರದ್ದುಪಡಿಸಿದಾಗ ಇದೇ ರಾಜ್ಯಪಾಲರು ಅಲ್ಲಿದ್ದದ್ದು. ಅಲ್ಲದೆ ಅವರು ಬಿಜೆಪಿಯ ಹಿರಿಯ ಮುಖಂಡರು. ಹಾಗಾಗಿ ಈ ಆರೋಪಗಳನ್ನು ಅಷ್ಟು ಸುಲಭಕ್ಕೆ ತೆಗೆದು ಹಾಕುವಂತಿಲ್ಲ. ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

ಭಾರತಾಂಬೆಯ ಬಗ್ಗೆ ಗೌರವ ಇರುವವರೆಲ್ಲರೂ ಯೋಧರ ಹೆಸರಿನಲ್ಲಿ ಗದ್ದುಗೆ ಹಿಡಿದ ಮೋದಿಯವರ ಸರ್ಕಾರವನ್ನು ಪ್ರಶ್ನೆ ಮಾಡಲೇ ಬೇಕಿದೆ. ಆಗ ಮಾತ್ರ ಭಾರತಾಂಬೆಯ ಮಕ್ಕಳಾಗಿ ಉಳಿಯಬಹುದಾಗಿದೆ. ಪ್ರಶ್ನೆ ಮಾಡಲು ಹಿಂಜರಿಯುವವರು ಪಾಕಿಸ್ತಾನಕ್ಕೆ ಹೋಗಬಹುದಾಗಿದೆ. ಆ 40 ಜೀವಗಳ ಆತ್ಮಗಳಿಗೆ ಶಾಂತಿ ಸಿಗಬೇಕೆಂದರೆ 300 ಕೆ.ಜಿ ಬಾಂಬ್ ಹೊತ್ತು ವಾರಗಟ್ಟಲೆ ಅಲೆದಾಡಿದ ಉಗ್ರನನ್ನು ತಪಾಸಣೆ ಮಾಡದೆ ತೆಪ್ಪಗಿದ್ದ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಕುಟುಂಬಗಳ ಕಣ್ಣೀರಿಗೂ ಬೆಲೆ ಇದೆಯೆಂದಾದರೆ ಫುಲ್ವಾಮ ಲಿಂಕ್ ರಸ್ತೆಯನ್ನು ಮುಕ್ತವಾಗಿಟ್ಟ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಜೀವಗಳ ನೆನೆದು ಕಣ್ಣೀರಾದ ಭಾರತಾಂಬೆಯ ಮಕ್ಕಳಿಗೆ ಸಮಾಧಾನವಾಗಬೇಕಾದರೆ ಹೆಲಿಕಾಪ್ಟರ್ ಕೊಡದ ಗೃಹ ಇಲಾಖೆಯ ಸಚಿವ ಮತ್ತು ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕು. ಇದೆಲ್ಲಕ್ಕೂ ಮೊದಲು ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯಿಸಬೇಕು. ತಮ್ಮ ಸರ್ಕಾರದ ಯಾವ ತಪ್ಪೂ ಇಲ್ಲವೆಂದು ಹೇಳಿದರೆ ಸಾಲದು, ವಿರೋಧ ಪಕ್ಷದ ಸದಸ್ಯರು ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ನೇಮಿಸಿ ಪುಲ್ವಾಮ ದಾಳಿಯ ತನಿಖೆ ಮಾಡಿಸಬೇಕು.

ಇದನ್ನೂ ಓದಿ: ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...