Homeಮುಖಪುಟಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

- Advertisement -
- Advertisement -

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ‘ದಿ ವೈರ್’ ನಡೆಸಿದ ಸಂದರ್ಶನದಲ್ಲಿ ಕರಣ್ ಥಾಪರ್ ಪ್ರಶ್ನೆಗಳಿಗೆ ನೀಡಿರುವ ಮಾಹಿತಿ ಇಡೀ ಭಾರತವನ್ನೇ ದಂಗು ಬಡಿಸಿದೆ. ಹೌದು, ಭಾರತದ ಯೋಧರು ಫುಲ್ವಾಮ ಬಳಿ ಉಗ್ರರ ದಾಳಿಗೆ ಹತರಾಗಿದ್ದರು. ಭಾರತೀಯರ ನೆಮ್ಮದಿಗಾಗಿ ಹಗಲೂರಾತ್ರಿ ಗಡಿಗಳಲ್ಲಿ ಚಳಿ, ಮಳೆ, ಗಾಳಿ, ಬಿಸಿಲೆನ್ನದೆ ದುಡಿಯುವ 40 ಯೋಧರ ದೇಹದ ಭಾಗಗಳೂ ಸಿಗದಂತೆ ಸೂಸೈಡ್ ಬಾಂಬರ್ ಉಗ್ರನೊಬ್ಬ ಆಸ್ಪೋಟಿಸಿದ್ದನು. ಕುಟುಂಬದವರಿಗೆ ತಮ್ಮ ಮನೆ ಮಗನ ಮುಖ ನೋಡಲೂ ಆಗಲಿಲ್ಲ. ಆ ಪಾಪಿ ಉಗ್ರ ಸ್ಪೋಟಕ ಬಾಂಬ್ ಅನ್ನು ಯೋಧರ ಹತ್ತಿರದವರೆಗೂ ಹೇಗೆ ತಂದನು? ಆ ಸ್ಪೋಟಕಗಳನ್ನು ಎಲ್ಲಿಂದ, ಹೇಗೆ ತಂದನು? ಎಂಬ ಪ್ರಶ್ನೆಗಳನ್ನು ಕೇಳಿದವರನ್ನು ದೇಶದ್ರೋಹಿಗಳೆಂದರು. ಇರಲಿ ಅದೆಲ್ಲವನ್ನೂ ಮರೆತುಬಿಡೋಣ. ಆ 40 ಯೋಧರ ಪ್ರಾಣ ಹಾಗೂ ಆ ಕುಟುಂಬಗಳ ಕಣ್ಣೀರ ಮುಂದೆ ನಮ್ಮನ್ನು ನಿಂದಿಸಿದ್ದು ಯಾವ ಲೆಕ್ಕ?

ಗವರ್ನರ್ ಸತ್ಯಪಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ಮೇಲೆ ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳನ್ನೊಮ್ಮೆ ನೋಡೋಣ.

1. ಪುಲ್ವಾಮ ದಾಳಿ ನಡೆದ ದಿನ ಅಂದರೆ ಫೆಬ್ರವರಿ 14, 2019 ಕ್ಕೂ ಮುಂಚೆ ಜಮ್ಮು-ಕಾಶ್ಮೀರದ ಹಳ್ಳಿಗಳಲ್ಲಿ ರಸ್ತೆಯ ಮೇಲೆ ಸುಮಾರು 10 ರಿಂದ 12 ದಿನಗಳವರೆಗೆ 300 ಕೆ.ಜಿ. ಆರ್.ಡಿ.ಎಕ್ಸ್ ಬಾಂಬ್ ಅನ್ನು ಇರಿಸಿಕೊಂಡು ಉಗ್ರ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದನು.

2. ಪುಲ್ವಾಮ ಮಾರ್ಗವಾಗಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಯೋಧರ ತಂಡವು ಮೊದಲು ಮೋದಿಯವರ ಸರ್ಕಾರವನ್ನು ಗೃಹ ಇಲಾಖೆಯ ಮೂಲಕ ಸಂಪರ್ಕಿಸಿ ಸ್ಥಳಾಂತರಕ್ಕಾಗಿ ‘5 ವಿಮಾನಗಳನ್ನು’  ನೀಡಬೇಕೆಂದು ಕೇಳಿಕೊಂಡಿತ್ತು. ಅಷ್ಟೂ ಯೋಧರನ್ನು ಸ್ಥಳಾಂತರಿಸಲು 5 ಹೆಲಿಕಾಪ್ಟರ್‌ಗಳು ಸಾಕಾಗಿದ್ದವು. ಆದರೆ ದುರಂತವೆಂದರೆ ರಾಜನಾಥ್ ಸಿಂಗ್ ನೇತೃತ್ವದ ಗೃಹ ಇಲಾಖೆಯು ಹೆಲಿಕಾಪ್ಟರ್ ನೀಡಲು ನಿರಾಕರಿಸಿತು. ಇದರ ಪರಿಣಾಮದಿಂದಾಗಿ ಪುಲ್ವಾಮ ರಸ್ತೆಯಲ್ಲಿ 40 ಯೋಧರು ಬರುವಂತಾಯಿತು.

3. ಯೋಧರು ಸಂಚರಿಸುತ್ತಿದ್ದ ಆ ಪುಲ್ವಾಮ ರಸ್ತೆಯಲ್ಲಿ 8 ರಿಂದ 10 ಲಿಂಕ್ ರಸ್ತೆಗಳಿವೆ. ಯೋಧರು ಪಯಣಿಸುವಾಗ ಈ ಲಿಂಕ್ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ತಡೆಗಟ್ಟಿ ನಿಲ್ಲಿಸುವ ಅಥವಾ ತಪಾಸಣೆ ಮಾಡುವ ವ್ಯವಸ್ಥೆ ಸಹಜವಾಗಿ ಇರುತ್ತದೆ. ಆದರೆ ದಾಳಿ ನಡೆದ ದಿನದಂದು ಲಿಂಕ್ ರಸ್ತೆಗಳ ಬಳಿ ತಪಾಸಣೆ ನಡೆಸುವ ಒಬ್ಬರೂ ಇರಲಿಲ್ಲ. ಅಷ್ಟೂ ಲಿಂಕ್ ರಸ್ತೆಗಳು ಮುಕ್ತವಾಗಿದ್ದವು.

4. ಈ ವಿಷಯವನ್ನು ತಿಳಿಸಲು ಅಂದಿನ ಜಮ್ಮು-ಕಾಶ್ಮೀರ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿಯವರಿಗೆ ಕರೆ ಮಾಡಿದಾಗ ಪ್ರಧಾನಿಗಳು ಉತ್ತರಖಂಡದ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿ ಡಿಸ್ಕವರಿ ಚಾನಲ್‌ನ ‘ಮ್ಯಾನ್ ವರ್ಸಸ್ ವೈಲ್ಡ್’ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಫುಲ್ವಾಮಾ ಧಾಳಿ ಅಪರಾಹ್ನ 3:15 ರ ಸುಮಾರಿಗೆ ನಡೆದಿತ್ತು. ಮೋದಿಯವರು ರಾತ್ರಿ ಸುಮಾರು 7:00 ಗಂಟೆಗೆ ಸಂಪರ್ಕಕ್ಕೆ ಬಂದು ವಿಚಾರಿಸಿದರು. ಆಗ ಸತ್ಯಪಾಲ್ ಮಲಿಕ್, ‘ಇದೆಲ್ಲವೂ ನಮ್ಮ ಸರ್ಕಾರದ ಕರ್ತವ್ಯ ಲೋಪದಿಂದ ಆಗಿದೆ. ಗುಪ್ತಚರ ಇಲಾಖೆ, ಗೃಹ ಇಲಾಖೆಯ ವೈಫಲ್ಯದಿಂದ ಈ ಅನಾಹುತ ಸಂಭವಿಸಿದೆ’ ಎಂದು ಹೇಳಿದಾಗ ಪ್ರಧಾನಿ ಮೋದಿಯವರು ‘ಈ ವಿಷಯದ ಬಗ್ಗೆ ತುಟಿ ಬಿಚ್ಚಬೇಡ’ ಎಂದು ಅವರಿಗೆ ಹೇಳಿದರಂತೆ.

5. ಮೋದಿ ಸರ್ಕಾರ ಇದನ್ನು ಮುಚ್ಚಿಟ್ಟಿದ್ದಕ್ಕೆ ಬೇರೆಯದೇ ಕಾರಣವಿರುತ್ತದೆ ಎಂದ ಮಲಿಕ್ ಯಾವುದಕ್ಕೆಂದು ನೇರವಾಗಿ ಬಾಯಿಬಿಟ್ಟಿಲ್ಲ. ಆದರೆ ಆಗ 2019 ರ ಲೋಕಸಭಾ ಚುನಾವಣೆ ಇತ್ತೆಂಬುದನ್ನು ಎಲ್ಲರಿಗೂ ಗೊತ್ತಿರುವ ವಿಷಯ.

6. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಳಿಯೂ ಇದರ ಬಗ್ಗೆ ಮಲಿಕ್ ಪ್ರಸ್ತಾಪ ಮಾಡಿದಾಗ ‘ಇದರ ಬಗ್ಗೆ ಮಾತಾಡಬೇಡ, ನಾವಲ್ಲಿಗೆ ಬಂದು ಸರಿಯಾದ ನಿರೂಪಣೆ ನೀಡುತ್ತೇವೆ’ ಎಂದಿದ್ದರಂತೆ.

ಈ ಮೇಲಿನ ಸತ್ಯಪಾಲ್ ಮಲಿಕ್ ನೀಡಿರುವ ಮಾಹಿತಿಯನ್ನು ಕೇಳಿಸಿಕೊಂಡವರಿಗೆ ಎದೆ ಜಲ್ಲೆನ್ನದೇ ಇರಲಾರದು. ಇವು ಹಾದಿ ಬೀದಿಯಲ್ಲಿ ಗಾಳಿ ಸುದ್ಧಿಗಳನ್ನು ಹರಡುವ ಪುಡಾರಿಯ ಮಾತುಗಳಲ್ಲ. ಮೋದಿಯವರ ಸರ್ಕಾರವೇ ನೇಮಿಸಿದ್ದ ಜಮ್ಮು-ಕಾಶ್ಮೀರದ ಅಂದಿನ ರಾಜ್ಯಪಾಲರ ಮಾತು. ಜಮ್ಮು-ಕಾಶ್ಮೀರದ 370 ರ ಸ್ಥಾನವನ್ನು ರದ್ದುಪಡಿಸಿದಾಗ ಇದೇ ರಾಜ್ಯಪಾಲರು ಅಲ್ಲಿದ್ದದ್ದು. ಅಲ್ಲದೆ ಅವರು ಬಿಜೆಪಿಯ ಹಿರಿಯ ಮುಖಂಡರು. ಹಾಗಾಗಿ ಈ ಆರೋಪಗಳನ್ನು ಅಷ್ಟು ಸುಲಭಕ್ಕೆ ತೆಗೆದು ಹಾಕುವಂತಿಲ್ಲ. ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

ಭಾರತಾಂಬೆಯ ಬಗ್ಗೆ ಗೌರವ ಇರುವವರೆಲ್ಲರೂ ಯೋಧರ ಹೆಸರಿನಲ್ಲಿ ಗದ್ದುಗೆ ಹಿಡಿದ ಮೋದಿಯವರ ಸರ್ಕಾರವನ್ನು ಪ್ರಶ್ನೆ ಮಾಡಲೇ ಬೇಕಿದೆ. ಆಗ ಮಾತ್ರ ಭಾರತಾಂಬೆಯ ಮಕ್ಕಳಾಗಿ ಉಳಿಯಬಹುದಾಗಿದೆ. ಪ್ರಶ್ನೆ ಮಾಡಲು ಹಿಂಜರಿಯುವವರು ಪಾಕಿಸ್ತಾನಕ್ಕೆ ಹೋಗಬಹುದಾಗಿದೆ. ಆ 40 ಜೀವಗಳ ಆತ್ಮಗಳಿಗೆ ಶಾಂತಿ ಸಿಗಬೇಕೆಂದರೆ 300 ಕೆ.ಜಿ ಬಾಂಬ್ ಹೊತ್ತು ವಾರಗಟ್ಟಲೆ ಅಲೆದಾಡಿದ ಉಗ್ರನನ್ನು ತಪಾಸಣೆ ಮಾಡದೆ ತೆಪ್ಪಗಿದ್ದ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಕುಟುಂಬಗಳ ಕಣ್ಣೀರಿಗೂ ಬೆಲೆ ಇದೆಯೆಂದಾದರೆ ಫುಲ್ವಾಮ ಲಿಂಕ್ ರಸ್ತೆಯನ್ನು ಮುಕ್ತವಾಗಿಟ್ಟ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಜೀವಗಳ ನೆನೆದು ಕಣ್ಣೀರಾದ ಭಾರತಾಂಬೆಯ ಮಕ್ಕಳಿಗೆ ಸಮಾಧಾನವಾಗಬೇಕಾದರೆ ಹೆಲಿಕಾಪ್ಟರ್ ಕೊಡದ ಗೃಹ ಇಲಾಖೆಯ ಸಚಿವ ಮತ್ತು ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕು. ಇದೆಲ್ಲಕ್ಕೂ ಮೊದಲು ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯಿಸಬೇಕು. ತಮ್ಮ ಸರ್ಕಾರದ ಯಾವ ತಪ್ಪೂ ಇಲ್ಲವೆಂದು ಹೇಳಿದರೆ ಸಾಲದು, ವಿರೋಧ ಪಕ್ಷದ ಸದಸ್ಯರು ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ನೇಮಿಸಿ ಪುಲ್ವಾಮ ದಾಳಿಯ ತನಿಖೆ ಮಾಡಿಸಬೇಕು.

ಇದನ್ನೂ ಓದಿ: ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...