Homeಮುಖಪುಟಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

- Advertisement -
- Advertisement -

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ‘ದಿ ವೈರ್’ ನಡೆಸಿದ ಸಂದರ್ಶನದಲ್ಲಿ ಕರಣ್ ಥಾಪರ್ ಪ್ರಶ್ನೆಗಳಿಗೆ ನೀಡಿರುವ ಮಾಹಿತಿ ಇಡೀ ಭಾರತವನ್ನೇ ದಂಗು ಬಡಿಸಿದೆ. ಹೌದು, ಭಾರತದ ಯೋಧರು ಫುಲ್ವಾಮ ಬಳಿ ಉಗ್ರರ ದಾಳಿಗೆ ಹತರಾಗಿದ್ದರು. ಭಾರತೀಯರ ನೆಮ್ಮದಿಗಾಗಿ ಹಗಲೂರಾತ್ರಿ ಗಡಿಗಳಲ್ಲಿ ಚಳಿ, ಮಳೆ, ಗಾಳಿ, ಬಿಸಿಲೆನ್ನದೆ ದುಡಿಯುವ 40 ಯೋಧರ ದೇಹದ ಭಾಗಗಳೂ ಸಿಗದಂತೆ ಸೂಸೈಡ್ ಬಾಂಬರ್ ಉಗ್ರನೊಬ್ಬ ಆಸ್ಪೋಟಿಸಿದ್ದನು. ಕುಟುಂಬದವರಿಗೆ ತಮ್ಮ ಮನೆ ಮಗನ ಮುಖ ನೋಡಲೂ ಆಗಲಿಲ್ಲ. ಆ ಪಾಪಿ ಉಗ್ರ ಸ್ಪೋಟಕ ಬಾಂಬ್ ಅನ್ನು ಯೋಧರ ಹತ್ತಿರದವರೆಗೂ ಹೇಗೆ ತಂದನು? ಆ ಸ್ಪೋಟಕಗಳನ್ನು ಎಲ್ಲಿಂದ, ಹೇಗೆ ತಂದನು? ಎಂಬ ಪ್ರಶ್ನೆಗಳನ್ನು ಕೇಳಿದವರನ್ನು ದೇಶದ್ರೋಹಿಗಳೆಂದರು. ಇರಲಿ ಅದೆಲ್ಲವನ್ನೂ ಮರೆತುಬಿಡೋಣ. ಆ 40 ಯೋಧರ ಪ್ರಾಣ ಹಾಗೂ ಆ ಕುಟುಂಬಗಳ ಕಣ್ಣೀರ ಮುಂದೆ ನಮ್ಮನ್ನು ನಿಂದಿಸಿದ್ದು ಯಾವ ಲೆಕ್ಕ?

ಗವರ್ನರ್ ಸತ್ಯಪಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ಮೇಲೆ ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳನ್ನೊಮ್ಮೆ ನೋಡೋಣ.

1. ಪುಲ್ವಾಮ ದಾಳಿ ನಡೆದ ದಿನ ಅಂದರೆ ಫೆಬ್ರವರಿ 14, 2019 ಕ್ಕೂ ಮುಂಚೆ ಜಮ್ಮು-ಕಾಶ್ಮೀರದ ಹಳ್ಳಿಗಳಲ್ಲಿ ರಸ್ತೆಯ ಮೇಲೆ ಸುಮಾರು 10 ರಿಂದ 12 ದಿನಗಳವರೆಗೆ 300 ಕೆ.ಜಿ. ಆರ್.ಡಿ.ಎಕ್ಸ್ ಬಾಂಬ್ ಅನ್ನು ಇರಿಸಿಕೊಂಡು ಉಗ್ರ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದನು.

2. ಪುಲ್ವಾಮ ಮಾರ್ಗವಾಗಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಯೋಧರ ತಂಡವು ಮೊದಲು ಮೋದಿಯವರ ಸರ್ಕಾರವನ್ನು ಗೃಹ ಇಲಾಖೆಯ ಮೂಲಕ ಸಂಪರ್ಕಿಸಿ ಸ್ಥಳಾಂತರಕ್ಕಾಗಿ ‘5 ವಿಮಾನಗಳನ್ನು’  ನೀಡಬೇಕೆಂದು ಕೇಳಿಕೊಂಡಿತ್ತು. ಅಷ್ಟೂ ಯೋಧರನ್ನು ಸ್ಥಳಾಂತರಿಸಲು 5 ಹೆಲಿಕಾಪ್ಟರ್‌ಗಳು ಸಾಕಾಗಿದ್ದವು. ಆದರೆ ದುರಂತವೆಂದರೆ ರಾಜನಾಥ್ ಸಿಂಗ್ ನೇತೃತ್ವದ ಗೃಹ ಇಲಾಖೆಯು ಹೆಲಿಕಾಪ್ಟರ್ ನೀಡಲು ನಿರಾಕರಿಸಿತು. ಇದರ ಪರಿಣಾಮದಿಂದಾಗಿ ಪುಲ್ವಾಮ ರಸ್ತೆಯಲ್ಲಿ 40 ಯೋಧರು ಬರುವಂತಾಯಿತು.

3. ಯೋಧರು ಸಂಚರಿಸುತ್ತಿದ್ದ ಆ ಪುಲ್ವಾಮ ರಸ್ತೆಯಲ್ಲಿ 8 ರಿಂದ 10 ಲಿಂಕ್ ರಸ್ತೆಗಳಿವೆ. ಯೋಧರು ಪಯಣಿಸುವಾಗ ಈ ಲಿಂಕ್ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ತಡೆಗಟ್ಟಿ ನಿಲ್ಲಿಸುವ ಅಥವಾ ತಪಾಸಣೆ ಮಾಡುವ ವ್ಯವಸ್ಥೆ ಸಹಜವಾಗಿ ಇರುತ್ತದೆ. ಆದರೆ ದಾಳಿ ನಡೆದ ದಿನದಂದು ಲಿಂಕ್ ರಸ್ತೆಗಳ ಬಳಿ ತಪಾಸಣೆ ನಡೆಸುವ ಒಬ್ಬರೂ ಇರಲಿಲ್ಲ. ಅಷ್ಟೂ ಲಿಂಕ್ ರಸ್ತೆಗಳು ಮುಕ್ತವಾಗಿದ್ದವು.

4. ಈ ವಿಷಯವನ್ನು ತಿಳಿಸಲು ಅಂದಿನ ಜಮ್ಮು-ಕಾಶ್ಮೀರ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿಯವರಿಗೆ ಕರೆ ಮಾಡಿದಾಗ ಪ್ರಧಾನಿಗಳು ಉತ್ತರಖಂಡದ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿ ಡಿಸ್ಕವರಿ ಚಾನಲ್‌ನ ‘ಮ್ಯಾನ್ ವರ್ಸಸ್ ವೈಲ್ಡ್’ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಫುಲ್ವಾಮಾ ಧಾಳಿ ಅಪರಾಹ್ನ 3:15 ರ ಸುಮಾರಿಗೆ ನಡೆದಿತ್ತು. ಮೋದಿಯವರು ರಾತ್ರಿ ಸುಮಾರು 7:00 ಗಂಟೆಗೆ ಸಂಪರ್ಕಕ್ಕೆ ಬಂದು ವಿಚಾರಿಸಿದರು. ಆಗ ಸತ್ಯಪಾಲ್ ಮಲಿಕ್, ‘ಇದೆಲ್ಲವೂ ನಮ್ಮ ಸರ್ಕಾರದ ಕರ್ತವ್ಯ ಲೋಪದಿಂದ ಆಗಿದೆ. ಗುಪ್ತಚರ ಇಲಾಖೆ, ಗೃಹ ಇಲಾಖೆಯ ವೈಫಲ್ಯದಿಂದ ಈ ಅನಾಹುತ ಸಂಭವಿಸಿದೆ’ ಎಂದು ಹೇಳಿದಾಗ ಪ್ರಧಾನಿ ಮೋದಿಯವರು ‘ಈ ವಿಷಯದ ಬಗ್ಗೆ ತುಟಿ ಬಿಚ್ಚಬೇಡ’ ಎಂದು ಅವರಿಗೆ ಹೇಳಿದರಂತೆ.

5. ಮೋದಿ ಸರ್ಕಾರ ಇದನ್ನು ಮುಚ್ಚಿಟ್ಟಿದ್ದಕ್ಕೆ ಬೇರೆಯದೇ ಕಾರಣವಿರುತ್ತದೆ ಎಂದ ಮಲಿಕ್ ಯಾವುದಕ್ಕೆಂದು ನೇರವಾಗಿ ಬಾಯಿಬಿಟ್ಟಿಲ್ಲ. ಆದರೆ ಆಗ 2019 ರ ಲೋಕಸಭಾ ಚುನಾವಣೆ ಇತ್ತೆಂಬುದನ್ನು ಎಲ್ಲರಿಗೂ ಗೊತ್ತಿರುವ ವಿಷಯ.

6. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಳಿಯೂ ಇದರ ಬಗ್ಗೆ ಮಲಿಕ್ ಪ್ರಸ್ತಾಪ ಮಾಡಿದಾಗ ‘ಇದರ ಬಗ್ಗೆ ಮಾತಾಡಬೇಡ, ನಾವಲ್ಲಿಗೆ ಬಂದು ಸರಿಯಾದ ನಿರೂಪಣೆ ನೀಡುತ್ತೇವೆ’ ಎಂದಿದ್ದರಂತೆ.

ಈ ಮೇಲಿನ ಸತ್ಯಪಾಲ್ ಮಲಿಕ್ ನೀಡಿರುವ ಮಾಹಿತಿಯನ್ನು ಕೇಳಿಸಿಕೊಂಡವರಿಗೆ ಎದೆ ಜಲ್ಲೆನ್ನದೇ ಇರಲಾರದು. ಇವು ಹಾದಿ ಬೀದಿಯಲ್ಲಿ ಗಾಳಿ ಸುದ್ಧಿಗಳನ್ನು ಹರಡುವ ಪುಡಾರಿಯ ಮಾತುಗಳಲ್ಲ. ಮೋದಿಯವರ ಸರ್ಕಾರವೇ ನೇಮಿಸಿದ್ದ ಜಮ್ಮು-ಕಾಶ್ಮೀರದ ಅಂದಿನ ರಾಜ್ಯಪಾಲರ ಮಾತು. ಜಮ್ಮು-ಕಾಶ್ಮೀರದ 370 ರ ಸ್ಥಾನವನ್ನು ರದ್ದುಪಡಿಸಿದಾಗ ಇದೇ ರಾಜ್ಯಪಾಲರು ಅಲ್ಲಿದ್ದದ್ದು. ಅಲ್ಲದೆ ಅವರು ಬಿಜೆಪಿಯ ಹಿರಿಯ ಮುಖಂಡರು. ಹಾಗಾಗಿ ಈ ಆರೋಪಗಳನ್ನು ಅಷ್ಟು ಸುಲಭಕ್ಕೆ ತೆಗೆದು ಹಾಕುವಂತಿಲ್ಲ. ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

ಭಾರತಾಂಬೆಯ ಬಗ್ಗೆ ಗೌರವ ಇರುವವರೆಲ್ಲರೂ ಯೋಧರ ಹೆಸರಿನಲ್ಲಿ ಗದ್ದುಗೆ ಹಿಡಿದ ಮೋದಿಯವರ ಸರ್ಕಾರವನ್ನು ಪ್ರಶ್ನೆ ಮಾಡಲೇ ಬೇಕಿದೆ. ಆಗ ಮಾತ್ರ ಭಾರತಾಂಬೆಯ ಮಕ್ಕಳಾಗಿ ಉಳಿಯಬಹುದಾಗಿದೆ. ಪ್ರಶ್ನೆ ಮಾಡಲು ಹಿಂಜರಿಯುವವರು ಪಾಕಿಸ್ತಾನಕ್ಕೆ ಹೋಗಬಹುದಾಗಿದೆ. ಆ 40 ಜೀವಗಳ ಆತ್ಮಗಳಿಗೆ ಶಾಂತಿ ಸಿಗಬೇಕೆಂದರೆ 300 ಕೆ.ಜಿ ಬಾಂಬ್ ಹೊತ್ತು ವಾರಗಟ್ಟಲೆ ಅಲೆದಾಡಿದ ಉಗ್ರನನ್ನು ತಪಾಸಣೆ ಮಾಡದೆ ತೆಪ್ಪಗಿದ್ದ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಕುಟುಂಬಗಳ ಕಣ್ಣೀರಿಗೂ ಬೆಲೆ ಇದೆಯೆಂದಾದರೆ ಫುಲ್ವಾಮ ಲಿಂಕ್ ರಸ್ತೆಯನ್ನು ಮುಕ್ತವಾಗಿಟ್ಟ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಜೀವಗಳ ನೆನೆದು ಕಣ್ಣೀರಾದ ಭಾರತಾಂಬೆಯ ಮಕ್ಕಳಿಗೆ ಸಮಾಧಾನವಾಗಬೇಕಾದರೆ ಹೆಲಿಕಾಪ್ಟರ್ ಕೊಡದ ಗೃಹ ಇಲಾಖೆಯ ಸಚಿವ ಮತ್ತು ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕು. ಇದೆಲ್ಲಕ್ಕೂ ಮೊದಲು ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯಿಸಬೇಕು. ತಮ್ಮ ಸರ್ಕಾರದ ಯಾವ ತಪ್ಪೂ ಇಲ್ಲವೆಂದು ಹೇಳಿದರೆ ಸಾಲದು, ವಿರೋಧ ಪಕ್ಷದ ಸದಸ್ಯರು ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ನೇಮಿಸಿ ಪುಲ್ವಾಮ ದಾಳಿಯ ತನಿಖೆ ಮಾಡಿಸಬೇಕು.

ಇದನ್ನೂ ಓದಿ: ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...