Homeಮುಖಪುಟಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ಪುಲ್ವಾಮ ದಾಳಿ ಕುರಿತು ಸತ್ಯಪಾಲ್ ಮಲಿಕ್‌ರವರ 5 ಗಂಭೀರ ಆರೋಪಗಳು: ಪ್ರಧಾನಿಯನ್ನು ಪ್ರಶ್ನಿಸದವರು ಪಾಕಿಸ್ತಾನಕ್ಕೆ ಹೋಗಿ

ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

- Advertisement -
- Advertisement -

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ‘ದಿ ವೈರ್’ ನಡೆಸಿದ ಸಂದರ್ಶನದಲ್ಲಿ ಕರಣ್ ಥಾಪರ್ ಪ್ರಶ್ನೆಗಳಿಗೆ ನೀಡಿರುವ ಮಾಹಿತಿ ಇಡೀ ಭಾರತವನ್ನೇ ದಂಗು ಬಡಿಸಿದೆ. ಹೌದು, ಭಾರತದ ಯೋಧರು ಫುಲ್ವಾಮ ಬಳಿ ಉಗ್ರರ ದಾಳಿಗೆ ಹತರಾಗಿದ್ದರು. ಭಾರತೀಯರ ನೆಮ್ಮದಿಗಾಗಿ ಹಗಲೂರಾತ್ರಿ ಗಡಿಗಳಲ್ಲಿ ಚಳಿ, ಮಳೆ, ಗಾಳಿ, ಬಿಸಿಲೆನ್ನದೆ ದುಡಿಯುವ 40 ಯೋಧರ ದೇಹದ ಭಾಗಗಳೂ ಸಿಗದಂತೆ ಸೂಸೈಡ್ ಬಾಂಬರ್ ಉಗ್ರನೊಬ್ಬ ಆಸ್ಪೋಟಿಸಿದ್ದನು. ಕುಟುಂಬದವರಿಗೆ ತಮ್ಮ ಮನೆ ಮಗನ ಮುಖ ನೋಡಲೂ ಆಗಲಿಲ್ಲ. ಆ ಪಾಪಿ ಉಗ್ರ ಸ್ಪೋಟಕ ಬಾಂಬ್ ಅನ್ನು ಯೋಧರ ಹತ್ತಿರದವರೆಗೂ ಹೇಗೆ ತಂದನು? ಆ ಸ್ಪೋಟಕಗಳನ್ನು ಎಲ್ಲಿಂದ, ಹೇಗೆ ತಂದನು? ಎಂಬ ಪ್ರಶ್ನೆಗಳನ್ನು ಕೇಳಿದವರನ್ನು ದೇಶದ್ರೋಹಿಗಳೆಂದರು. ಇರಲಿ ಅದೆಲ್ಲವನ್ನೂ ಮರೆತುಬಿಡೋಣ. ಆ 40 ಯೋಧರ ಪ್ರಾಣ ಹಾಗೂ ಆ ಕುಟುಂಬಗಳ ಕಣ್ಣೀರ ಮುಂದೆ ನಮ್ಮನ್ನು ನಿಂದಿಸಿದ್ದು ಯಾವ ಲೆಕ್ಕ?

ಗವರ್ನರ್ ಸತ್ಯಪಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರದ ಮೇಲೆ ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳನ್ನೊಮ್ಮೆ ನೋಡೋಣ.

1. ಪುಲ್ವಾಮ ದಾಳಿ ನಡೆದ ದಿನ ಅಂದರೆ ಫೆಬ್ರವರಿ 14, 2019 ಕ್ಕೂ ಮುಂಚೆ ಜಮ್ಮು-ಕಾಶ್ಮೀರದ ಹಳ್ಳಿಗಳಲ್ಲಿ ರಸ್ತೆಯ ಮೇಲೆ ಸುಮಾರು 10 ರಿಂದ 12 ದಿನಗಳವರೆಗೆ 300 ಕೆ.ಜಿ. ಆರ್.ಡಿ.ಎಕ್ಸ್ ಬಾಂಬ್ ಅನ್ನು ಇರಿಸಿಕೊಂಡು ಉಗ್ರ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದನು.

2. ಪುಲ್ವಾಮ ಮಾರ್ಗವಾಗಿ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದ್ದ ಯೋಧರ ತಂಡವು ಮೊದಲು ಮೋದಿಯವರ ಸರ್ಕಾರವನ್ನು ಗೃಹ ಇಲಾಖೆಯ ಮೂಲಕ ಸಂಪರ್ಕಿಸಿ ಸ್ಥಳಾಂತರಕ್ಕಾಗಿ ‘5 ವಿಮಾನಗಳನ್ನು’  ನೀಡಬೇಕೆಂದು ಕೇಳಿಕೊಂಡಿತ್ತು. ಅಷ್ಟೂ ಯೋಧರನ್ನು ಸ್ಥಳಾಂತರಿಸಲು 5 ಹೆಲಿಕಾಪ್ಟರ್‌ಗಳು ಸಾಕಾಗಿದ್ದವು. ಆದರೆ ದುರಂತವೆಂದರೆ ರಾಜನಾಥ್ ಸಿಂಗ್ ನೇತೃತ್ವದ ಗೃಹ ಇಲಾಖೆಯು ಹೆಲಿಕಾಪ್ಟರ್ ನೀಡಲು ನಿರಾಕರಿಸಿತು. ಇದರ ಪರಿಣಾಮದಿಂದಾಗಿ ಪುಲ್ವಾಮ ರಸ್ತೆಯಲ್ಲಿ 40 ಯೋಧರು ಬರುವಂತಾಯಿತು.

3. ಯೋಧರು ಸಂಚರಿಸುತ್ತಿದ್ದ ಆ ಪುಲ್ವಾಮ ರಸ್ತೆಯಲ್ಲಿ 8 ರಿಂದ 10 ಲಿಂಕ್ ರಸ್ತೆಗಳಿವೆ. ಯೋಧರು ಪಯಣಿಸುವಾಗ ಈ ಲಿಂಕ್ ರಸ್ತೆಗಳಲ್ಲಿ ಸಂಚರಿಸುವ ವಾಹನಗಳನ್ನು ತಡೆಗಟ್ಟಿ ನಿಲ್ಲಿಸುವ ಅಥವಾ ತಪಾಸಣೆ ಮಾಡುವ ವ್ಯವಸ್ಥೆ ಸಹಜವಾಗಿ ಇರುತ್ತದೆ. ಆದರೆ ದಾಳಿ ನಡೆದ ದಿನದಂದು ಲಿಂಕ್ ರಸ್ತೆಗಳ ಬಳಿ ತಪಾಸಣೆ ನಡೆಸುವ ಒಬ್ಬರೂ ಇರಲಿಲ್ಲ. ಅಷ್ಟೂ ಲಿಂಕ್ ರಸ್ತೆಗಳು ಮುಕ್ತವಾಗಿದ್ದವು.

4. ಈ ವಿಷಯವನ್ನು ತಿಳಿಸಲು ಅಂದಿನ ಜಮ್ಮು-ಕಾಶ್ಮೀರ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿಯವರಿಗೆ ಕರೆ ಮಾಡಿದಾಗ ಪ್ರಧಾನಿಗಳು ಉತ್ತರಖಂಡದ ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿ ಡಿಸ್ಕವರಿ ಚಾನಲ್‌ನ ‘ಮ್ಯಾನ್ ವರ್ಸಸ್ ವೈಲ್ಡ್’ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಫುಲ್ವಾಮಾ ಧಾಳಿ ಅಪರಾಹ್ನ 3:15 ರ ಸುಮಾರಿಗೆ ನಡೆದಿತ್ತು. ಮೋದಿಯವರು ರಾತ್ರಿ ಸುಮಾರು 7:00 ಗಂಟೆಗೆ ಸಂಪರ್ಕಕ್ಕೆ ಬಂದು ವಿಚಾರಿಸಿದರು. ಆಗ ಸತ್ಯಪಾಲ್ ಮಲಿಕ್, ‘ಇದೆಲ್ಲವೂ ನಮ್ಮ ಸರ್ಕಾರದ ಕರ್ತವ್ಯ ಲೋಪದಿಂದ ಆಗಿದೆ. ಗುಪ್ತಚರ ಇಲಾಖೆ, ಗೃಹ ಇಲಾಖೆಯ ವೈಫಲ್ಯದಿಂದ ಈ ಅನಾಹುತ ಸಂಭವಿಸಿದೆ’ ಎಂದು ಹೇಳಿದಾಗ ಪ್ರಧಾನಿ ಮೋದಿಯವರು ‘ಈ ವಿಷಯದ ಬಗ್ಗೆ ತುಟಿ ಬಿಚ್ಚಬೇಡ’ ಎಂದು ಅವರಿಗೆ ಹೇಳಿದರಂತೆ.

5. ಮೋದಿ ಸರ್ಕಾರ ಇದನ್ನು ಮುಚ್ಚಿಟ್ಟಿದ್ದಕ್ಕೆ ಬೇರೆಯದೇ ಕಾರಣವಿರುತ್ತದೆ ಎಂದ ಮಲಿಕ್ ಯಾವುದಕ್ಕೆಂದು ನೇರವಾಗಿ ಬಾಯಿಬಿಟ್ಟಿಲ್ಲ. ಆದರೆ ಆಗ 2019 ರ ಲೋಕಸಭಾ ಚುನಾವಣೆ ಇತ್ತೆಂಬುದನ್ನು ಎಲ್ಲರಿಗೂ ಗೊತ್ತಿರುವ ವಿಷಯ.

6. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಳಿಯೂ ಇದರ ಬಗ್ಗೆ ಮಲಿಕ್ ಪ್ರಸ್ತಾಪ ಮಾಡಿದಾಗ ‘ಇದರ ಬಗ್ಗೆ ಮಾತಾಡಬೇಡ, ನಾವಲ್ಲಿಗೆ ಬಂದು ಸರಿಯಾದ ನಿರೂಪಣೆ ನೀಡುತ್ತೇವೆ’ ಎಂದಿದ್ದರಂತೆ.

ಈ ಮೇಲಿನ ಸತ್ಯಪಾಲ್ ಮಲಿಕ್ ನೀಡಿರುವ ಮಾಹಿತಿಯನ್ನು ಕೇಳಿಸಿಕೊಂಡವರಿಗೆ ಎದೆ ಜಲ್ಲೆನ್ನದೇ ಇರಲಾರದು. ಇವು ಹಾದಿ ಬೀದಿಯಲ್ಲಿ ಗಾಳಿ ಸುದ್ಧಿಗಳನ್ನು ಹರಡುವ ಪುಡಾರಿಯ ಮಾತುಗಳಲ್ಲ. ಮೋದಿಯವರ ಸರ್ಕಾರವೇ ನೇಮಿಸಿದ್ದ ಜಮ್ಮು-ಕಾಶ್ಮೀರದ ಅಂದಿನ ರಾಜ್ಯಪಾಲರ ಮಾತು. ಜಮ್ಮು-ಕಾಶ್ಮೀರದ 370 ರ ಸ್ಥಾನವನ್ನು ರದ್ದುಪಡಿಸಿದಾಗ ಇದೇ ರಾಜ್ಯಪಾಲರು ಅಲ್ಲಿದ್ದದ್ದು. ಅಲ್ಲದೆ ಅವರು ಬಿಜೆಪಿಯ ಹಿರಿಯ ಮುಖಂಡರು. ಹಾಗಾಗಿ ಈ ಆರೋಪಗಳನ್ನು ಅಷ್ಟು ಸುಲಭಕ್ಕೆ ತೆಗೆದು ಹಾಕುವಂತಿಲ್ಲ. ದುರಂತವೆಂದರೆ ಈ ‘ಬ್ರೇಕಿಂಗ್ ನ್ಯೂಸ್’ ಅನ್ನು ಯಾವ ಮುಖ್ಯವಾಹಿನಿಯ ಮಾಧ್ಯಮಗಳೂ ‘ಕನಿಷ್ಠಪಕ್ಷ ನ್ಯೂಸ್’ ಮಾಡುತ್ತಿಲ್ಲ. ಆದರೂ ಈ ವಿಚಾರ ಬೂದಿಯಲ್ಲಿ ಮುಚ್ಚಿ ಹೋಗುವಂತದ್ದಲ್ಲ.

ಭಾರತಾಂಬೆಯ ಬಗ್ಗೆ ಗೌರವ ಇರುವವರೆಲ್ಲರೂ ಯೋಧರ ಹೆಸರಿನಲ್ಲಿ ಗದ್ದುಗೆ ಹಿಡಿದ ಮೋದಿಯವರ ಸರ್ಕಾರವನ್ನು ಪ್ರಶ್ನೆ ಮಾಡಲೇ ಬೇಕಿದೆ. ಆಗ ಮಾತ್ರ ಭಾರತಾಂಬೆಯ ಮಕ್ಕಳಾಗಿ ಉಳಿಯಬಹುದಾಗಿದೆ. ಪ್ರಶ್ನೆ ಮಾಡಲು ಹಿಂಜರಿಯುವವರು ಪಾಕಿಸ್ತಾನಕ್ಕೆ ಹೋಗಬಹುದಾಗಿದೆ. ಆ 40 ಜೀವಗಳ ಆತ್ಮಗಳಿಗೆ ಶಾಂತಿ ಸಿಗಬೇಕೆಂದರೆ 300 ಕೆ.ಜಿ ಬಾಂಬ್ ಹೊತ್ತು ವಾರಗಟ್ಟಲೆ ಅಲೆದಾಡಿದ ಉಗ್ರನನ್ನು ತಪಾಸಣೆ ಮಾಡದೆ ತೆಪ್ಪಗಿದ್ದ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಕುಟುಂಬಗಳ ಕಣ್ಣೀರಿಗೂ ಬೆಲೆ ಇದೆಯೆಂದಾದರೆ ಫುಲ್ವಾಮ ಲಿಂಕ್ ರಸ್ತೆಯನ್ನು ಮುಕ್ತವಾಗಿಟ್ಟ ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು. ಆ 40 ಜೀವಗಳ ನೆನೆದು ಕಣ್ಣೀರಾದ ಭಾರತಾಂಬೆಯ ಮಕ್ಕಳಿಗೆ ಸಮಾಧಾನವಾಗಬೇಕಾದರೆ ಹೆಲಿಕಾಪ್ಟರ್ ಕೊಡದ ಗೃಹ ಇಲಾಖೆಯ ಸಚಿವ ಮತ್ತು ಸಿಬ್ಬಂದಿಗಳಿಗೆ ಶಿಕ್ಷೆಯಾಗಬೇಕು. ಇದೆಲ್ಲಕ್ಕೂ ಮೊದಲು ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕ್ರಿಯಿಸಬೇಕು. ತಮ್ಮ ಸರ್ಕಾರದ ಯಾವ ತಪ್ಪೂ ಇಲ್ಲವೆಂದು ಹೇಳಿದರೆ ಸಾಲದು, ವಿರೋಧ ಪಕ್ಷದ ಸದಸ್ಯರು ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ನೇಮಿಸಿ ಪುಲ್ವಾಮ ದಾಳಿಯ ತನಿಖೆ ಮಾಡಿಸಬೇಕು.

ಇದನ್ನೂ ಓದಿ: ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...