Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...