Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...