Homeಕರ್ನಾಟಕಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

ಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

- Advertisement -
- Advertisement -

ಕೊಪ್ಪಳದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ವಾಸವಿದ್ದು ಐದು ಮಕ್ಕಳು ಇಂದು ಬೆಳಿಗ್ಗೆ ದುರಂತದ ಸಾವನಪ್ಪಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆಂದು ಇಟ್ಟಿದ್ದ ಧ್ವಜದ ಕಂಬವೂ ಕೇಬಲ್ ಮತ್ತು ವಿದ್ಯುತ್ ವೈರಿನ ಮೇಲೆ ಬಿದ್ದಿದ್ದು ಅದನ್ನು ತೆರವುಗೊಳಿಸಲು ಹೋದ ಐವರು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ಕೊಪ್ಪಳದಲ್ಲಿ ಜರುಗಿದೆ.

ಕಾರಣವೇನು?

ರಾಜ್ಯದ ಅರ್ಧದಷ್ಟು ಹಾಸ್ಟೆಲ್ ಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಎಲ್ಲಾ ಸರ್ಕಾರಗಳೂ ವಿಫಲವಾಗಿವೆ. ಈ ಖಾಸಗಿ ಕಟ್ಟಡಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿರುವುದಿಲ್ಲ. ಇದೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.

ಕೊಪ್ಪಳದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವಿಲ್ಲ. ಇರುವ ಬಾಡಿಗೆ ಕಟ್ಟಡದ ಪಕ್ಕದಲ್ಲಿಯೇ ಹೆವಿ ವಿದ್ಯುತ್ ಟ್ರಾನ್ಸ್ಫಾರ್ಮ್ ಇದ್ದು ಅದರ ಕೇಬಲ್ ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಾತಂತ್ರ್ಯೋತ್ಸವಕ್ಕೆಂದು ಬಾಡಿಗೆಗೆ ತಂದು ನೆಟ್ಟಿದ್ದ ಧ್ವಜಕಂಬವನ್ನು ಕೋತಿಗಳು ಬೀಳಿಸಿವೆ. ಕೇಬಲ್ ಮೇಲೆ ಬಿದ್ದಿದ್ದ ಧ್ವಜಕಂಬವನ್ನು ತೆರೆವುಗೊಳಿಸಲು ಹೋದ ವಿದ್ಯಾರ್ಥಿಗಳಿಗೆ ಒಬ್ಬರಿಂದ ಒಬ್ಬರಿಗೆ ವಿದ್ಯುತ್ ಹರಡಿ ಧಾರುಣ ಸಾವು ಸಂಭವಿಸಿದೆ.

ಐದು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ ಮತ್ತು ಬಸವರಾಜ ಎಸ್.ಎಸ್.ಎಲ್.ಸಿ ಓದುತ್ತಿದ್ದರೆ ಇನ್ನು ದೇವರಾಜ ಮತ್ತು ಕುಮಾರ 9ನೇ ತರಗತಿ ಓದುತ್ತಿದ್ದಾರೆ. ಇನ್ನೊರ್ವ ಗಣೇಶ 8ನೇ ತರಗತಿ. ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..

ಪರಿಹಾರವೇನು?

ರಾಜ್ಯದ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕು.

ಪ್ರತಿ ಹಾಸ್ಟೆಲ್ ಗೂ ನಿಲಯ ಪಾಲಕರ ನೇಮಕವಾಗಬೇಕು. ಅವರು ಪ್ರತಿದಿನ ಹಾಸ್ಟೆಲ್ ಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು.

ಹಾಸ್ಟೆಲ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿ ಸ್ನೇಹಿಯಾಗಿಸಬೇಕು.

ಈ ಹಕ್ಕೊತ್ತಾಯಗಳನ್ನಿಟ್ಟುಕೊಂಡು KVS, SFI ವಿದ್ಯಾರ್ಥಿಗಳು ಸಂಘಟನೆಗಳು ಸ್ಥಳದಲ್ಲಿಯೇ ಧರಣಿ ನಡೆಸಲು ಮುಂದಾಗಿವೆ.

ಖಾಸಗಿ ಹಾಸ್ಟೆಲ್ ಲಾಬಿಗೆ ವಿದ್ಯಾರ್ಥಿಗಳು ಬಲಿಯಾದರೆ?

ಇಂದು ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಧ್ವಜ ಕಂಭದ ಹಗ್ಗ ಬಿಚ್ಚಲು ಹೋಗಿ 5ಜನ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕಟ್ಟಡ ಬಾಡಿಗೆ ಕಟ್ಟಡವಾಗಿದ್ದು ರಾಜ್ಯದ ಹಲವಾರು ಹಾಸ್ಟೆಲ್‌ಗಳು ಬಾಡಿಗೆ ಹಣದ ಲಾಬಿಗಾಗಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದೆ. ಹಾಸ್ಟೆಲ್ ಗೆ ಬೇಕಾದ ರಚನೆ ಇಲ್ಲದೆ ಮೂಲಭೂತ ಸೌಕರ್ಯವೂ ಇಲ್ಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಇಂದು ದೇಶದ ಭವಿಷ್ಯವಾಗಬೇಕಿದ್ದ ಐದು ಜನ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ಬಲಿ ತಗೆದುಕೊಂಡಿದೆ. ಈ ಖಾಸಗಿ ಲಾಬಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧಿಸುತ್ತದೆ ಎಂದು ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಸಾವಿಗೀಡಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಸ್ಥಳೀಯ ವಾರ್ಡನ್, ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ. ಇದರ ಸಂಪೂರ್ಣ ಜವಾಬ್ದಾರಿ ಇವರುಗಳೇ ಹೊತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯೂ ಎಚ್ಚೆತ್ತುಕೊಂಡು ಈ ರೀತಿಯ ದುರ್ಘಟನೆಗಳ ನಡೆಯದ ಹಾಗೆ ಜವಾಬ್ದಾರಿ ಕಾಯ್ದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...