Homeಕರ್ನಾಟಕಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

ಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

- Advertisement -
- Advertisement -

ಕೊಪ್ಪಳದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ವಾಸವಿದ್ದು ಐದು ಮಕ್ಕಳು ಇಂದು ಬೆಳಿಗ್ಗೆ ದುರಂತದ ಸಾವನಪ್ಪಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆಂದು ಇಟ್ಟಿದ್ದ ಧ್ವಜದ ಕಂಬವೂ ಕೇಬಲ್ ಮತ್ತು ವಿದ್ಯುತ್ ವೈರಿನ ಮೇಲೆ ಬಿದ್ದಿದ್ದು ಅದನ್ನು ತೆರವುಗೊಳಿಸಲು ಹೋದ ಐವರು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ಕೊಪ್ಪಳದಲ್ಲಿ ಜರುಗಿದೆ.

ಕಾರಣವೇನು?

ರಾಜ್ಯದ ಅರ್ಧದಷ್ಟು ಹಾಸ್ಟೆಲ್ ಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಎಲ್ಲಾ ಸರ್ಕಾರಗಳೂ ವಿಫಲವಾಗಿವೆ. ಈ ಖಾಸಗಿ ಕಟ್ಟಡಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿರುವುದಿಲ್ಲ. ಇದೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.

ಕೊಪ್ಪಳದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವಿಲ್ಲ. ಇರುವ ಬಾಡಿಗೆ ಕಟ್ಟಡದ ಪಕ್ಕದಲ್ಲಿಯೇ ಹೆವಿ ವಿದ್ಯುತ್ ಟ್ರಾನ್ಸ್ಫಾರ್ಮ್ ಇದ್ದು ಅದರ ಕೇಬಲ್ ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಾತಂತ್ರ್ಯೋತ್ಸವಕ್ಕೆಂದು ಬಾಡಿಗೆಗೆ ತಂದು ನೆಟ್ಟಿದ್ದ ಧ್ವಜಕಂಬವನ್ನು ಕೋತಿಗಳು ಬೀಳಿಸಿವೆ. ಕೇಬಲ್ ಮೇಲೆ ಬಿದ್ದಿದ್ದ ಧ್ವಜಕಂಬವನ್ನು ತೆರೆವುಗೊಳಿಸಲು ಹೋದ ವಿದ್ಯಾರ್ಥಿಗಳಿಗೆ ಒಬ್ಬರಿಂದ ಒಬ್ಬರಿಗೆ ವಿದ್ಯುತ್ ಹರಡಿ ಧಾರುಣ ಸಾವು ಸಂಭವಿಸಿದೆ.

ಐದು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ ಮತ್ತು ಬಸವರಾಜ ಎಸ್.ಎಸ್.ಎಲ್.ಸಿ ಓದುತ್ತಿದ್ದರೆ ಇನ್ನು ದೇವರಾಜ ಮತ್ತು ಕುಮಾರ 9ನೇ ತರಗತಿ ಓದುತ್ತಿದ್ದಾರೆ. ಇನ್ನೊರ್ವ ಗಣೇಶ 8ನೇ ತರಗತಿ. ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..

ಪರಿಹಾರವೇನು?

ರಾಜ್ಯದ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕು.

ಪ್ರತಿ ಹಾಸ್ಟೆಲ್ ಗೂ ನಿಲಯ ಪಾಲಕರ ನೇಮಕವಾಗಬೇಕು. ಅವರು ಪ್ರತಿದಿನ ಹಾಸ್ಟೆಲ್ ಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು.

ಹಾಸ್ಟೆಲ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿ ಸ್ನೇಹಿಯಾಗಿಸಬೇಕು.

ಈ ಹಕ್ಕೊತ್ತಾಯಗಳನ್ನಿಟ್ಟುಕೊಂಡು KVS, SFI ವಿದ್ಯಾರ್ಥಿಗಳು ಸಂಘಟನೆಗಳು ಸ್ಥಳದಲ್ಲಿಯೇ ಧರಣಿ ನಡೆಸಲು ಮುಂದಾಗಿವೆ.

ಖಾಸಗಿ ಹಾಸ್ಟೆಲ್ ಲಾಬಿಗೆ ವಿದ್ಯಾರ್ಥಿಗಳು ಬಲಿಯಾದರೆ?

ಇಂದು ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಧ್ವಜ ಕಂಭದ ಹಗ್ಗ ಬಿಚ್ಚಲು ಹೋಗಿ 5ಜನ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕಟ್ಟಡ ಬಾಡಿಗೆ ಕಟ್ಟಡವಾಗಿದ್ದು ರಾಜ್ಯದ ಹಲವಾರು ಹಾಸ್ಟೆಲ್‌ಗಳು ಬಾಡಿಗೆ ಹಣದ ಲಾಬಿಗಾಗಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದೆ. ಹಾಸ್ಟೆಲ್ ಗೆ ಬೇಕಾದ ರಚನೆ ಇಲ್ಲದೆ ಮೂಲಭೂತ ಸೌಕರ್ಯವೂ ಇಲ್ಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಇಂದು ದೇಶದ ಭವಿಷ್ಯವಾಗಬೇಕಿದ್ದ ಐದು ಜನ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ಬಲಿ ತಗೆದುಕೊಂಡಿದೆ. ಈ ಖಾಸಗಿ ಲಾಬಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧಿಸುತ್ತದೆ ಎಂದು ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಸಾವಿಗೀಡಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಸ್ಥಳೀಯ ವಾರ್ಡನ್, ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ. ಇದರ ಸಂಪೂರ್ಣ ಜವಾಬ್ದಾರಿ ಇವರುಗಳೇ ಹೊತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯೂ ಎಚ್ಚೆತ್ತುಕೊಂಡು ಈ ರೀತಿಯ ದುರ್ಘಟನೆಗಳ ನಡೆಯದ ಹಾಗೆ ಜವಾಬ್ದಾರಿ ಕಾಯ್ದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...