Homeಕರ್ನಾಟಕಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

ಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

- Advertisement -
- Advertisement -

ಕೊಪ್ಪಳದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ವಾಸವಿದ್ದು ಐದು ಮಕ್ಕಳು ಇಂದು ಬೆಳಿಗ್ಗೆ ದುರಂತದ ಸಾವನಪ್ಪಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆಂದು ಇಟ್ಟಿದ್ದ ಧ್ವಜದ ಕಂಬವೂ ಕೇಬಲ್ ಮತ್ತು ವಿದ್ಯುತ್ ವೈರಿನ ಮೇಲೆ ಬಿದ್ದಿದ್ದು ಅದನ್ನು ತೆರವುಗೊಳಿಸಲು ಹೋದ ಐವರು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ಕೊಪ್ಪಳದಲ್ಲಿ ಜರುಗಿದೆ.

ಕಾರಣವೇನು?

ರಾಜ್ಯದ ಅರ್ಧದಷ್ಟು ಹಾಸ್ಟೆಲ್ ಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಎಲ್ಲಾ ಸರ್ಕಾರಗಳೂ ವಿಫಲವಾಗಿವೆ. ಈ ಖಾಸಗಿ ಕಟ್ಟಡಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿರುವುದಿಲ್ಲ. ಇದೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.

ಕೊಪ್ಪಳದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವಿಲ್ಲ. ಇರುವ ಬಾಡಿಗೆ ಕಟ್ಟಡದ ಪಕ್ಕದಲ್ಲಿಯೇ ಹೆವಿ ವಿದ್ಯುತ್ ಟ್ರಾನ್ಸ್ಫಾರ್ಮ್ ಇದ್ದು ಅದರ ಕೇಬಲ್ ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಾತಂತ್ರ್ಯೋತ್ಸವಕ್ಕೆಂದು ಬಾಡಿಗೆಗೆ ತಂದು ನೆಟ್ಟಿದ್ದ ಧ್ವಜಕಂಬವನ್ನು ಕೋತಿಗಳು ಬೀಳಿಸಿವೆ. ಕೇಬಲ್ ಮೇಲೆ ಬಿದ್ದಿದ್ದ ಧ್ವಜಕಂಬವನ್ನು ತೆರೆವುಗೊಳಿಸಲು ಹೋದ ವಿದ್ಯಾರ್ಥಿಗಳಿಗೆ ಒಬ್ಬರಿಂದ ಒಬ್ಬರಿಗೆ ವಿದ್ಯುತ್ ಹರಡಿ ಧಾರುಣ ಸಾವು ಸಂಭವಿಸಿದೆ.

ಐದು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ ಮತ್ತು ಬಸವರಾಜ ಎಸ್.ಎಸ್.ಎಲ್.ಸಿ ಓದುತ್ತಿದ್ದರೆ ಇನ್ನು ದೇವರಾಜ ಮತ್ತು ಕುಮಾರ 9ನೇ ತರಗತಿ ಓದುತ್ತಿದ್ದಾರೆ. ಇನ್ನೊರ್ವ ಗಣೇಶ 8ನೇ ತರಗತಿ. ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..

ಪರಿಹಾರವೇನು?

ರಾಜ್ಯದ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕು.

ಪ್ರತಿ ಹಾಸ್ಟೆಲ್ ಗೂ ನಿಲಯ ಪಾಲಕರ ನೇಮಕವಾಗಬೇಕು. ಅವರು ಪ್ರತಿದಿನ ಹಾಸ್ಟೆಲ್ ಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು.

ಹಾಸ್ಟೆಲ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿ ಸ್ನೇಹಿಯಾಗಿಸಬೇಕು.

ಈ ಹಕ್ಕೊತ್ತಾಯಗಳನ್ನಿಟ್ಟುಕೊಂಡು KVS, SFI ವಿದ್ಯಾರ್ಥಿಗಳು ಸಂಘಟನೆಗಳು ಸ್ಥಳದಲ್ಲಿಯೇ ಧರಣಿ ನಡೆಸಲು ಮುಂದಾಗಿವೆ.

ಖಾಸಗಿ ಹಾಸ್ಟೆಲ್ ಲಾಬಿಗೆ ವಿದ್ಯಾರ್ಥಿಗಳು ಬಲಿಯಾದರೆ?

ಇಂದು ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಧ್ವಜ ಕಂಭದ ಹಗ್ಗ ಬಿಚ್ಚಲು ಹೋಗಿ 5ಜನ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕಟ್ಟಡ ಬಾಡಿಗೆ ಕಟ್ಟಡವಾಗಿದ್ದು ರಾಜ್ಯದ ಹಲವಾರು ಹಾಸ್ಟೆಲ್‌ಗಳು ಬಾಡಿಗೆ ಹಣದ ಲಾಬಿಗಾಗಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದೆ. ಹಾಸ್ಟೆಲ್ ಗೆ ಬೇಕಾದ ರಚನೆ ಇಲ್ಲದೆ ಮೂಲಭೂತ ಸೌಕರ್ಯವೂ ಇಲ್ಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಇಂದು ದೇಶದ ಭವಿಷ್ಯವಾಗಬೇಕಿದ್ದ ಐದು ಜನ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ಬಲಿ ತಗೆದುಕೊಂಡಿದೆ. ಈ ಖಾಸಗಿ ಲಾಬಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧಿಸುತ್ತದೆ ಎಂದು ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಸಾವಿಗೀಡಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಸ್ಥಳೀಯ ವಾರ್ಡನ್, ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ. ಇದರ ಸಂಪೂರ್ಣ ಜವಾಬ್ದಾರಿ ಇವರುಗಳೇ ಹೊತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯೂ ಎಚ್ಚೆತ್ತುಕೊಂಡು ಈ ರೀತಿಯ ದುರ್ಘಟನೆಗಳ ನಡೆಯದ ಹಾಗೆ ಜವಾಬ್ದಾರಿ ಕಾಯ್ದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...