Homeಕರ್ನಾಟಕಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

ಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

- Advertisement -
- Advertisement -

ಕೊಪ್ಪಳದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ವಾಸವಿದ್ದು ಐದು ಮಕ್ಕಳು ಇಂದು ಬೆಳಿಗ್ಗೆ ದುರಂತದ ಸಾವನಪ್ಪಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆಂದು ಇಟ್ಟಿದ್ದ ಧ್ವಜದ ಕಂಬವೂ ಕೇಬಲ್ ಮತ್ತು ವಿದ್ಯುತ್ ವೈರಿನ ಮೇಲೆ ಬಿದ್ದಿದ್ದು ಅದನ್ನು ತೆರವುಗೊಳಿಸಲು ಹೋದ ಐವರು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ಕೊಪ್ಪಳದಲ್ಲಿ ಜರುಗಿದೆ.

ಕಾರಣವೇನು?

ರಾಜ್ಯದ ಅರ್ಧದಷ್ಟು ಹಾಸ್ಟೆಲ್ ಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಎಲ್ಲಾ ಸರ್ಕಾರಗಳೂ ವಿಫಲವಾಗಿವೆ. ಈ ಖಾಸಗಿ ಕಟ್ಟಡಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿರುವುದಿಲ್ಲ. ಇದೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.

ಕೊಪ್ಪಳದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವಿಲ್ಲ. ಇರುವ ಬಾಡಿಗೆ ಕಟ್ಟಡದ ಪಕ್ಕದಲ್ಲಿಯೇ ಹೆವಿ ವಿದ್ಯುತ್ ಟ್ರಾನ್ಸ್ಫಾರ್ಮ್ ಇದ್ದು ಅದರ ಕೇಬಲ್ ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಾತಂತ್ರ್ಯೋತ್ಸವಕ್ಕೆಂದು ಬಾಡಿಗೆಗೆ ತಂದು ನೆಟ್ಟಿದ್ದ ಧ್ವಜಕಂಬವನ್ನು ಕೋತಿಗಳು ಬೀಳಿಸಿವೆ. ಕೇಬಲ್ ಮೇಲೆ ಬಿದ್ದಿದ್ದ ಧ್ವಜಕಂಬವನ್ನು ತೆರೆವುಗೊಳಿಸಲು ಹೋದ ವಿದ್ಯಾರ್ಥಿಗಳಿಗೆ ಒಬ್ಬರಿಂದ ಒಬ್ಬರಿಗೆ ವಿದ್ಯುತ್ ಹರಡಿ ಧಾರುಣ ಸಾವು ಸಂಭವಿಸಿದೆ.

ಐದು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ ಮತ್ತು ಬಸವರಾಜ ಎಸ್.ಎಸ್.ಎಲ್.ಸಿ ಓದುತ್ತಿದ್ದರೆ ಇನ್ನು ದೇವರಾಜ ಮತ್ತು ಕುಮಾರ 9ನೇ ತರಗತಿ ಓದುತ್ತಿದ್ದಾರೆ. ಇನ್ನೊರ್ವ ಗಣೇಶ 8ನೇ ತರಗತಿ. ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..

ಪರಿಹಾರವೇನು?

ರಾಜ್ಯದ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕು.

ಪ್ರತಿ ಹಾಸ್ಟೆಲ್ ಗೂ ನಿಲಯ ಪಾಲಕರ ನೇಮಕವಾಗಬೇಕು. ಅವರು ಪ್ರತಿದಿನ ಹಾಸ್ಟೆಲ್ ಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು.

ಹಾಸ್ಟೆಲ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿ ಸ್ನೇಹಿಯಾಗಿಸಬೇಕು.

ಈ ಹಕ್ಕೊತ್ತಾಯಗಳನ್ನಿಟ್ಟುಕೊಂಡು KVS, SFI ವಿದ್ಯಾರ್ಥಿಗಳು ಸಂಘಟನೆಗಳು ಸ್ಥಳದಲ್ಲಿಯೇ ಧರಣಿ ನಡೆಸಲು ಮುಂದಾಗಿವೆ.

ಖಾಸಗಿ ಹಾಸ್ಟೆಲ್ ಲಾಬಿಗೆ ವಿದ್ಯಾರ್ಥಿಗಳು ಬಲಿಯಾದರೆ?

ಇಂದು ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಧ್ವಜ ಕಂಭದ ಹಗ್ಗ ಬಿಚ್ಚಲು ಹೋಗಿ 5ಜನ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕಟ್ಟಡ ಬಾಡಿಗೆ ಕಟ್ಟಡವಾಗಿದ್ದು ರಾಜ್ಯದ ಹಲವಾರು ಹಾಸ್ಟೆಲ್‌ಗಳು ಬಾಡಿಗೆ ಹಣದ ಲಾಬಿಗಾಗಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದೆ. ಹಾಸ್ಟೆಲ್ ಗೆ ಬೇಕಾದ ರಚನೆ ಇಲ್ಲದೆ ಮೂಲಭೂತ ಸೌಕರ್ಯವೂ ಇಲ್ಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಇಂದು ದೇಶದ ಭವಿಷ್ಯವಾಗಬೇಕಿದ್ದ ಐದು ಜನ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ಬಲಿ ತಗೆದುಕೊಂಡಿದೆ. ಈ ಖಾಸಗಿ ಲಾಬಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧಿಸುತ್ತದೆ ಎಂದು ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಸಾವಿಗೀಡಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಸ್ಥಳೀಯ ವಾರ್ಡನ್, ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ. ಇದರ ಸಂಪೂರ್ಣ ಜವಾಬ್ದಾರಿ ಇವರುಗಳೇ ಹೊತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯೂ ಎಚ್ಚೆತ್ತುಕೊಂಡು ಈ ರೀತಿಯ ದುರ್ಘಟನೆಗಳ ನಡೆಯದ ಹಾಗೆ ಜವಾಬ್ದಾರಿ ಕಾಯ್ದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...