Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...