ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ ಫ್ಯಾಕ್ಟರಿಯಿಂದ ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್ಸ್ಟೆಬಲ್ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ ಮಗನ ಮೇಲೆ ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್ಐಆರ್ ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು. ಗ್ರಾಮದ ಮುಖ್ಯಸ್ಥ ಪೋನ್ ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ. ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ ವೀಡಿಯೊವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...
ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್ಬೋರ್ಡ್ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ನಡೆದಿದೆ ಎನ್ನಲಾದ...
ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಪೋಕ್ಸೋ...
"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ...
ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.
2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...
ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...
ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...
ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ.
ದೆಹಲಿ ಮೂಲದ ಹರೀಶ್...