Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...